<p><strong>ಬೆಂಗಳೂರು</strong>: ಮಲ್ಲೇಶ್ವರದಲ್ಲಿ ವೈಟ್ ಟಾಪಿಂಗ್ ಮಾಡಿ ಅಭಿವೃದ್ಧಿಪಡಿಸಿರುವ ಸಂಪಿಗೆ ರಸ್ತೆಯನ್ನು ಸಚಿವ ಡಾ.ಸಿ. ಎನ್. ಅಶ್ವತ್ಥನಾರಾಯಣ ಭಾನುವಾರ ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಿದರು.</p>.<p>ಮಲ್ಲೇಶ್ವರ ವೃತ್ತದಲ್ಲಿ ರಾಷ್ಟ್ರಕವಿ ಕುವೆಂಪು ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸಚಿವರು, ಯಶವಂತಪುರ ವೃತ್ತದವರೆಗೆ ಒಂದು ಸಾವಿರಕ್ಕೂ ಹೆಚ್ಚು ಉತ್ಸಾಹಿಗಳ ಬೈಕ್ ರಾಲಿಯಲ್ಲಿ ಭಾಗವಹಿಸಿದ್ದರು. ಸಚಿವರು ಎಲೆಕ್ಟ್ರಿಕ್ ಸ್ಕೂಟರ್ ಚಲಾಯಿಸಿದರು.</p>.<p>ನಂತರ ಮಾತನಾಡಿದ ಅವರು ‘ಒಟ್ಟು 7.5 ಕಿ.ಮೀ. ಉದ್ದದ ಈ ದ್ವಿಪಥ ರಸ್ತೆಯನ್ನು ಉತ್ಕೃಷ್ಟ ಗುಣಮಟ್ಟದಲ್ಲಿ ಅಭಿವೃದ್ಧಿಪಡಿಸಲಾಗಿದೆ' ಎಂದರು.</p>.<p>‘ಫೀಡರ್ ಲೈನ್, ನೀರು ಪೂರೈಕೆ ಕೊಳವೆ, ಒಳಚರಂಡಿ ಮಾರ್ಗ, ವಿದ್ಯುತ್ ಕೇಬಲ್ ಎಲ್ಲವನ್ನೂ ಈಗ ನೆಲದ ಆಡಿಯಲ್ಲಿ ಅಳವಡಿಸಲಾಗಿದೆ. ಹಾಗೆಯೇ ಪಾದಚಾರಿ ಮಾರ್ಗವನ್ನೂ ಅಭಿವೃದ್ಧಿ ಪಡಿಸಲಾಗಿದೆ. ಮೂಲಸೌಕರ್ಯ ಅಗತ್ಯಗಳಿಗೆಂದು ಮುಂದಿನ ದಿನಗಳಲ್ಲಿ ರಸ್ತೆ ಅಗೆಯುವ ಅನಿವಾರ್ಯತೆ ಇರುವುದಿಲ್ಲ. ಈ ಭಾಗದಲ್ಲಿ ಆಗುತ್ತಿದ್ದ ನೀರಿನ ಪೋಲನ್ನು ಸಹ ಈಗ ನಿಲ್ಲಿಸಲಾಗಿದೆ’ ಎಂದು ಅವರು ವಿವರಿಸಿದರು.</p>.<p>‘ಸಂಪಿಗೆ ರಸ್ತೆಯುದ್ದಕ್ಕೂ 20 ಅಡಿಗೆ ಒಂದರಂತೆ ಸುವ್ಯವಸ್ಥಿತ ರೀತಿಯಲ್ಲಿ ಆಳವಾದ ಮ್ಯಾನ್ಹೋಲ್ಗಳನ್ನು ಕೂಡ ಅಳವಡಿಸಲಾಗಿದೆ’ ಎಂದರು.</p>.<p>ಪಾಲಿಕೆ ಮಾಜಿ ಸದಸ್ಯರಾದ ಜಯಪಾಲ್, ಮಂಜುನಾಥ, ಮಂಜುನಾಥ ರಾಜು, ಬಿಜೆಪಿ ಮುಖಂಡರಾದ ಸುರೇಶಗೌಡ, ಡಾ.ವಾಸು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮಲ್ಲೇಶ್ವರದಲ್ಲಿ ವೈಟ್ ಟಾಪಿಂಗ್ ಮಾಡಿ ಅಭಿವೃದ್ಧಿಪಡಿಸಿರುವ ಸಂಪಿಗೆ ರಸ್ತೆಯನ್ನು ಸಚಿವ ಡಾ.ಸಿ. ಎನ್. ಅಶ್ವತ್ಥನಾರಾಯಣ ಭಾನುವಾರ ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಿದರು.</p>.<p>ಮಲ್ಲೇಶ್ವರ ವೃತ್ತದಲ್ಲಿ ರಾಷ್ಟ್ರಕವಿ ಕುವೆಂಪು ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸಚಿವರು, ಯಶವಂತಪುರ ವೃತ್ತದವರೆಗೆ ಒಂದು ಸಾವಿರಕ್ಕೂ ಹೆಚ್ಚು ಉತ್ಸಾಹಿಗಳ ಬೈಕ್ ರಾಲಿಯಲ್ಲಿ ಭಾಗವಹಿಸಿದ್ದರು. ಸಚಿವರು ಎಲೆಕ್ಟ್ರಿಕ್ ಸ್ಕೂಟರ್ ಚಲಾಯಿಸಿದರು.</p>.<p>ನಂತರ ಮಾತನಾಡಿದ ಅವರು ‘ಒಟ್ಟು 7.5 ಕಿ.ಮೀ. ಉದ್ದದ ಈ ದ್ವಿಪಥ ರಸ್ತೆಯನ್ನು ಉತ್ಕೃಷ್ಟ ಗುಣಮಟ್ಟದಲ್ಲಿ ಅಭಿವೃದ್ಧಿಪಡಿಸಲಾಗಿದೆ' ಎಂದರು.</p>.<p>‘ಫೀಡರ್ ಲೈನ್, ನೀರು ಪೂರೈಕೆ ಕೊಳವೆ, ಒಳಚರಂಡಿ ಮಾರ್ಗ, ವಿದ್ಯುತ್ ಕೇಬಲ್ ಎಲ್ಲವನ್ನೂ ಈಗ ನೆಲದ ಆಡಿಯಲ್ಲಿ ಅಳವಡಿಸಲಾಗಿದೆ. ಹಾಗೆಯೇ ಪಾದಚಾರಿ ಮಾರ್ಗವನ್ನೂ ಅಭಿವೃದ್ಧಿ ಪಡಿಸಲಾಗಿದೆ. ಮೂಲಸೌಕರ್ಯ ಅಗತ್ಯಗಳಿಗೆಂದು ಮುಂದಿನ ದಿನಗಳಲ್ಲಿ ರಸ್ತೆ ಅಗೆಯುವ ಅನಿವಾರ್ಯತೆ ಇರುವುದಿಲ್ಲ. ಈ ಭಾಗದಲ್ಲಿ ಆಗುತ್ತಿದ್ದ ನೀರಿನ ಪೋಲನ್ನು ಸಹ ಈಗ ನಿಲ್ಲಿಸಲಾಗಿದೆ’ ಎಂದು ಅವರು ವಿವರಿಸಿದರು.</p>.<p>‘ಸಂಪಿಗೆ ರಸ್ತೆಯುದ್ದಕ್ಕೂ 20 ಅಡಿಗೆ ಒಂದರಂತೆ ಸುವ್ಯವಸ್ಥಿತ ರೀತಿಯಲ್ಲಿ ಆಳವಾದ ಮ್ಯಾನ್ಹೋಲ್ಗಳನ್ನು ಕೂಡ ಅಳವಡಿಸಲಾಗಿದೆ’ ಎಂದರು.</p>.<p>ಪಾಲಿಕೆ ಮಾಜಿ ಸದಸ್ಯರಾದ ಜಯಪಾಲ್, ಮಂಜುನಾಥ, ಮಂಜುನಾಥ ರಾಜು, ಬಿಜೆಪಿ ಮುಖಂಡರಾದ ಸುರೇಶಗೌಡ, ಡಾ.ವಾಸು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>