<p><strong>ರಾಜರಾಜೇಶ್ವರಿ ನಗರ</strong>:‘ಕಾಮಗಾರಿಗಳು ಉತ್ತಮ ಗುಣಮಟ್ಟದಿಂದ ಕೂಡಿರಬೇಕು ಮತ್ತು ಹಲವು ವರ್ಷ ಬಾಳಿಕೆ ಬರುವಂತೆ ನಡೆಯಬೇಕು. ಆಗ ಮಾತ್ರ ನಮ್ಮ ಕೆಲಸ ಜನರ ಮನಸ್ಸಿನಲ್ಲಿ ಉಳಿಯಲು ಸಾಧ್ಯ’ ಎಂದು ತೋಟಗಾರಿಕೆ ಸಚಿವ ಮುನಿರತ್ನ ಹೇಳಿದರು.</p>.<p>ರಾಜರಾಜೇಶ್ವರಿ ನಗರ ವ್ಯಾಪ್ತಿಯಲ್ಲಿ ಬಿಬಿಎಂಪಿ ವತಿಯಿಂದ ₹26.50 ಕೋಟಿ ವೆಚ್ಚದಲ್ಲಿ ಮೈಸೂರು ರಸ್ತೆಯ ಪ್ರವೇಶ ದ್ವಾರದಿಂದ ಕೆಂಗೇರಿ–ಉತ್ತರಹಳ್ಳಿ ಮುಖ್ಯರಸ್ತೆಯವರೆಗೆ ವೈಟ್ ಟಾಪಿಂಗ್ ಕಾಮಗಾರಿಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ರಸ್ತೆಯ ನಡುವೆ ಹೂವು, ಹಣ್ಣು ಬಿಡುವ ಹಾಗೂ ಆರೋಗ್ಯವರ್ಧಕ ಮರಗಳನ್ನು ಬೆಳೆಸಬೇಕು. ಕಾಮಗಾರಿ ನಡೆಯುವ ಸಮಯದಲ್ಲಿಅಧಿಕಾರಿಗಳು ಪ್ರತಿದಿನ ಗಮನಹರಿಸಬೇಕು’ ಎಂದು ಸೂಚಿಸಿದರು.</p>.<p>ಬಿಬಿಎಂಪಿ ಯೋಜನಾ ವಿಭಾಗದ ಮುಖ್ಯ ಎಂಜಿನಿಯರ್ ಲೋಕೇಶ್,‘3.5 ಕಿ.ಮೀ ಉದ್ದದ ವೈಟ್ ಟಾಪಿಂಗ್ ರಸ್ತೆಯನ್ನು ಐದು ತಿಂಗಳ ಒಳಗೆ ಪೂರ್ಣಗೊಳಿಸಲಾಗುವುದು’ ಎಂದರು.</p>.<p>ರಾಜರಾಜೇಶ್ವರಿ ದೇವಸ್ಥಾನ ಸಮೀಪ ₹75 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಶಾಸಕರ ಕಚೇರಿಯನ್ನೂ ಮುನಿರತ್ನ ಉದ್ಘಾಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜರಾಜೇಶ್ವರಿ ನಗರ</strong>:‘ಕಾಮಗಾರಿಗಳು ಉತ್ತಮ ಗುಣಮಟ್ಟದಿಂದ ಕೂಡಿರಬೇಕು ಮತ್ತು ಹಲವು ವರ್ಷ ಬಾಳಿಕೆ ಬರುವಂತೆ ನಡೆಯಬೇಕು. ಆಗ ಮಾತ್ರ ನಮ್ಮ ಕೆಲಸ ಜನರ ಮನಸ್ಸಿನಲ್ಲಿ ಉಳಿಯಲು ಸಾಧ್ಯ’ ಎಂದು ತೋಟಗಾರಿಕೆ ಸಚಿವ ಮುನಿರತ್ನ ಹೇಳಿದರು.</p>.<p>ರಾಜರಾಜೇಶ್ವರಿ ನಗರ ವ್ಯಾಪ್ತಿಯಲ್ಲಿ ಬಿಬಿಎಂಪಿ ವತಿಯಿಂದ ₹26.50 ಕೋಟಿ ವೆಚ್ಚದಲ್ಲಿ ಮೈಸೂರು ರಸ್ತೆಯ ಪ್ರವೇಶ ದ್ವಾರದಿಂದ ಕೆಂಗೇರಿ–ಉತ್ತರಹಳ್ಳಿ ಮುಖ್ಯರಸ್ತೆಯವರೆಗೆ ವೈಟ್ ಟಾಪಿಂಗ್ ಕಾಮಗಾರಿಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ರಸ್ತೆಯ ನಡುವೆ ಹೂವು, ಹಣ್ಣು ಬಿಡುವ ಹಾಗೂ ಆರೋಗ್ಯವರ್ಧಕ ಮರಗಳನ್ನು ಬೆಳೆಸಬೇಕು. ಕಾಮಗಾರಿ ನಡೆಯುವ ಸಮಯದಲ್ಲಿಅಧಿಕಾರಿಗಳು ಪ್ರತಿದಿನ ಗಮನಹರಿಸಬೇಕು’ ಎಂದು ಸೂಚಿಸಿದರು.</p>.<p>ಬಿಬಿಎಂಪಿ ಯೋಜನಾ ವಿಭಾಗದ ಮುಖ್ಯ ಎಂಜಿನಿಯರ್ ಲೋಕೇಶ್,‘3.5 ಕಿ.ಮೀ ಉದ್ದದ ವೈಟ್ ಟಾಪಿಂಗ್ ರಸ್ತೆಯನ್ನು ಐದು ತಿಂಗಳ ಒಳಗೆ ಪೂರ್ಣಗೊಳಿಸಲಾಗುವುದು’ ಎಂದರು.</p>.<p>ರಾಜರಾಜೇಶ್ವರಿ ದೇವಸ್ಥಾನ ಸಮೀಪ ₹75 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಶಾಸಕರ ಕಚೇರಿಯನ್ನೂ ಮುನಿರತ್ನ ಉದ್ಘಾಟಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>