<p><strong>ಬೆಂಗಳೂರು:</strong>ವೈಟ್ಟಾಪಿಂಗ್ ರಸ್ತೆಗಳ ನಿರ್ಮಾಣಕ್ಕೆ ಸಾರ್ವಜನಿಕರ ವಿರೋಧ ಹೆಚ್ಚುತ್ತಿದ್ದರೆ, ಬಿಬಿಎಂಪಿ ತನ್ನ ವ್ಯಾಪ್ತಿ ಮೀರಿದ ರಸ್ತೆಗಳನ್ನೂ ಕಾಂಕ್ರೀಟ್ ಮಯಗೊಳಿಸಲು ಮುಂದಾಗಿದೆ. ಸರ್ಕಾರದಿಂದ ಬರುವ ಅನುದಾನ ಕೈತಪ್ಪುವ ಆತಂಕವೇ ಅದು ತನ್ನ ‘ಗಡಿ ಮೀರಲು’ ಮುಂದಾಗಿರುವುದಕ್ಕೆ ಕಾರಣ ಎನ್ನಲಾಗುತ್ತಿದೆ.</p>.<p>ಹೊಸಕೋಟೆ–ಕಾಡುಗೋಡಿ–ಆನೇಕಲ್ ರಸ್ತೆಯಲ್ಲಿ ಮೂರು ಕಿ.ಮೀ. ದೂರದಲ್ಲಿ ವೈಟ್ಟಾಪಿಂಗ್ ಕಾಮಗಾರಿಯನ್ನು ಕೈಗೊಳ್ಳಲು ಬಿಬಿಎಂಪಿ ಮುಂದಾಗಿದೆ. ಈ ರಸ್ತೆ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ವ್ಯಾಪ್ತಿಗೆ ಬರುತ್ತದೆ. ದಿಣ್ಣೂರು–ಐಟಿಪಿಎಲ್–ಬೆಳ್ತೂರು ರಸ್ತೆ ನಿರ್ಮಾಣಕ್ಕೆಂದು ಇರಿಸಿದ್ದ ಅನುದಾನವನ್ನು ಈ ರಸ್ತೆಗೆ ಬಳಸಲು ಯೋಜಿಸಲಾಗಿದೆ.</p>.<p>ವೈಟ್ ಟಾಪಿಂಗ್ ಪ್ಯಾಕೇಜ್–2 ಅಡಿ, ದಿಣ್ಣೂರು–ಐಟಿಪಿಎಲ್ ಮತ್ತು ಬೆಳ್ತೂರು (2.8 ಕಿ.ಮೀ) ರಸ್ತೆಗೆ ಕಾಂಕ್ರೀಟ್ ಹಾಕುವ ಕಾಮಗಾರಿಯನ್ನು ಬಿಬಿಎಂಪಿ ಕೈಗೆತ್ತಿಕೊಂಡಿತ್ತು. ಆದರೆ, ಈ ಮಾರ್ಗದಲ್ಲಿ ಮೆಟ್ರೊ ಮತ್ತು ಇನ್ನಿತರ ಕಾಮಗಾರಿ ನಡೆಯುತ್ತಿರುವುದರಿಂದ, ಇದೇ ಮೊತ್ತವನ್ನು ಹೊಸಕೋಟೆ–ಕಾಡುಗೋಡಿ–ಆನೇಕಲ್ (3 ಕಿ.ಮೀ) ರಸ್ತೆ ನಿರ್ಮಾಣಕ್ಕೆ ಬಳಸಲು ಅನುಮತಿ ನೀಡಬೇಕು ಎಂದು ಬಿಬಿಎಂಪಿಯು ಸರ್ಕಾರಕ್ಕೆ ಪತ್ರ ಬರೆದಿದೆ.</p>.<p>ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ ಕೂಡ ಬಿಬಿಎಂಪಿಗೆ ಈ ಕುರಿತು ಪತ್ರ ಬರೆದಿದ್ದು, ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಹೊಸಕೋಟೆ–ಕಾಡುಗೋಡಿ–ಆನೇಕಲ್ ರಸ್ತೆಯನ್ನು ಕಾಂಕ್ರೀಟ್ ಹಾಕುವುದರಿಂದ ಐಟಿ ಕಂಪನಿಗಳಿಗೆ ಓಡಾಡುವ 10 ಸಾವಿರಕ್ಕೂ ಹೆಚ್ಚು ವಾಹನಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.</p>.<p>ವ್ಯಾಪ್ತಿ ಮೀರಿ ಬಿಬಿಎಂಪಿ ಈ ರಸ್ತೆ ನಿರ್ಮಿಸಲು ಮುಂದಾಗಿರುವುದಕ್ಕೆ ನಗರಾಭಿವೃದ್ಧಿ ಇಲಾಖೆ ಆಕ್ಷೇಪ ವ್ಯಕ್ತಪಡಿಸಿದ್ದರೂ, ಇದೊಂದು ವಿಶೇಷ ಪ್ರಕರಣ ಎಂದು ಪರಿಗಣಿಸಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.</p>.<p>‘ನಗರದೊಳಗೆ ರಸ್ತೆ ನಿರ್ಮಾಣ ಮಾಡುವುದಕ್ಕೇ ಸಮಯವಿಲ್ಲ. ನಮ್ಮ ವ್ಯಾಪ್ತಿ ಮೀರಿ ಈ ರಸ್ತೆ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳುವ ಅಗತ್ಯವಿದೆಯೇ?’ ಬಿಬಿಎಂಪಿಯ ಅಧಿಕಾರಿಗಳೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.</p>.<p>‘ಇಂಥದ್ದೊಂದು ಪ್ರಸ್ತಾವ ಇದ್ದದ್ದು ನಿಜ. ಆದರೆ, ಇದಕ್ಕೆ ಅನುಮೋದನೆ ಸಿಕ್ಕಿದೆಯೋ, ಇಲ್ಲವೋ ನನಗೆ ಗೊತ್ತಿಲ್ಲ. ಆದರೆ, ಈ ರಸ್ತೆ ನಿರ್ಮಾಣಕ್ಕೆ ₹25 ಕೋಟಿ ವೆಚ್ಚವಾಗಬಹುದು’ ಎಂದು ಬಿಬಿಎಂಪಿ ಮುಖ್ಯ ಎಂಜಿನಿಯರ್ ಕೆ.ಟಿ. ನಾಗರಾಜ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ವೈಟ್ಟಾಪಿಂಗ್ ರಸ್ತೆಗಳ ನಿರ್ಮಾಣಕ್ಕೆ ಸಾರ್ವಜನಿಕರ ವಿರೋಧ ಹೆಚ್ಚುತ್ತಿದ್ದರೆ, ಬಿಬಿಎಂಪಿ ತನ್ನ ವ್ಯಾಪ್ತಿ ಮೀರಿದ ರಸ್ತೆಗಳನ್ನೂ ಕಾಂಕ್ರೀಟ್ ಮಯಗೊಳಿಸಲು ಮುಂದಾಗಿದೆ. ಸರ್ಕಾರದಿಂದ ಬರುವ ಅನುದಾನ ಕೈತಪ್ಪುವ ಆತಂಕವೇ ಅದು ತನ್ನ ‘ಗಡಿ ಮೀರಲು’ ಮುಂದಾಗಿರುವುದಕ್ಕೆ ಕಾರಣ ಎನ್ನಲಾಗುತ್ತಿದೆ.</p>.<p>ಹೊಸಕೋಟೆ–ಕಾಡುಗೋಡಿ–ಆನೇಕಲ್ ರಸ್ತೆಯಲ್ಲಿ ಮೂರು ಕಿ.ಮೀ. ದೂರದಲ್ಲಿ ವೈಟ್ಟಾಪಿಂಗ್ ಕಾಮಗಾರಿಯನ್ನು ಕೈಗೊಳ್ಳಲು ಬಿಬಿಎಂಪಿ ಮುಂದಾಗಿದೆ. ಈ ರಸ್ತೆ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ವ್ಯಾಪ್ತಿಗೆ ಬರುತ್ತದೆ. ದಿಣ್ಣೂರು–ಐಟಿಪಿಎಲ್–ಬೆಳ್ತೂರು ರಸ್ತೆ ನಿರ್ಮಾಣಕ್ಕೆಂದು ಇರಿಸಿದ್ದ ಅನುದಾನವನ್ನು ಈ ರಸ್ತೆಗೆ ಬಳಸಲು ಯೋಜಿಸಲಾಗಿದೆ.</p>.<p>ವೈಟ್ ಟಾಪಿಂಗ್ ಪ್ಯಾಕೇಜ್–2 ಅಡಿ, ದಿಣ್ಣೂರು–ಐಟಿಪಿಎಲ್ ಮತ್ತು ಬೆಳ್ತೂರು (2.8 ಕಿ.ಮೀ) ರಸ್ತೆಗೆ ಕಾಂಕ್ರೀಟ್ ಹಾಕುವ ಕಾಮಗಾರಿಯನ್ನು ಬಿಬಿಎಂಪಿ ಕೈಗೆತ್ತಿಕೊಂಡಿತ್ತು. ಆದರೆ, ಈ ಮಾರ್ಗದಲ್ಲಿ ಮೆಟ್ರೊ ಮತ್ತು ಇನ್ನಿತರ ಕಾಮಗಾರಿ ನಡೆಯುತ್ತಿರುವುದರಿಂದ, ಇದೇ ಮೊತ್ತವನ್ನು ಹೊಸಕೋಟೆ–ಕಾಡುಗೋಡಿ–ಆನೇಕಲ್ (3 ಕಿ.ಮೀ) ರಸ್ತೆ ನಿರ್ಮಾಣಕ್ಕೆ ಬಳಸಲು ಅನುಮತಿ ನೀಡಬೇಕು ಎಂದು ಬಿಬಿಎಂಪಿಯು ಸರ್ಕಾರಕ್ಕೆ ಪತ್ರ ಬರೆದಿದೆ.</p>.<p>ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ ಕೂಡ ಬಿಬಿಎಂಪಿಗೆ ಈ ಕುರಿತು ಪತ್ರ ಬರೆದಿದ್ದು, ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಹೊಸಕೋಟೆ–ಕಾಡುಗೋಡಿ–ಆನೇಕಲ್ ರಸ್ತೆಯನ್ನು ಕಾಂಕ್ರೀಟ್ ಹಾಕುವುದರಿಂದ ಐಟಿ ಕಂಪನಿಗಳಿಗೆ ಓಡಾಡುವ 10 ಸಾವಿರಕ್ಕೂ ಹೆಚ್ಚು ವಾಹನಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.</p>.<p>ವ್ಯಾಪ್ತಿ ಮೀರಿ ಬಿಬಿಎಂಪಿ ಈ ರಸ್ತೆ ನಿರ್ಮಿಸಲು ಮುಂದಾಗಿರುವುದಕ್ಕೆ ನಗರಾಭಿವೃದ್ಧಿ ಇಲಾಖೆ ಆಕ್ಷೇಪ ವ್ಯಕ್ತಪಡಿಸಿದ್ದರೂ, ಇದೊಂದು ವಿಶೇಷ ಪ್ರಕರಣ ಎಂದು ಪರಿಗಣಿಸಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.</p>.<p>‘ನಗರದೊಳಗೆ ರಸ್ತೆ ನಿರ್ಮಾಣ ಮಾಡುವುದಕ್ಕೇ ಸಮಯವಿಲ್ಲ. ನಮ್ಮ ವ್ಯಾಪ್ತಿ ಮೀರಿ ಈ ರಸ್ತೆ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳುವ ಅಗತ್ಯವಿದೆಯೇ?’ ಬಿಬಿಎಂಪಿಯ ಅಧಿಕಾರಿಗಳೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.</p>.<p>‘ಇಂಥದ್ದೊಂದು ಪ್ರಸ್ತಾವ ಇದ್ದದ್ದು ನಿಜ. ಆದರೆ, ಇದಕ್ಕೆ ಅನುಮೋದನೆ ಸಿಕ್ಕಿದೆಯೋ, ಇಲ್ಲವೋ ನನಗೆ ಗೊತ್ತಿಲ್ಲ. ಆದರೆ, ಈ ರಸ್ತೆ ನಿರ್ಮಾಣಕ್ಕೆ ₹25 ಕೋಟಿ ವೆಚ್ಚವಾಗಬಹುದು’ ಎಂದು ಬಿಬಿಎಂಪಿ ಮುಖ್ಯ ಎಂಜಿನಿಯರ್ ಕೆ.ಟಿ. ನಾಗರಾಜ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>