ಬೆಂಗಳೂರು:ಶಾಂತಲಾ ವೃತ್ತದಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ (ರೈಲ್ವೆ ನಿಲ್ದಾಣದ ಕಡೆ) ಶನಿವಾರದಿಂದ ವೈಟ್ ಟಾಪಿಂಗ್ ಕಾಮಗಾರಿ ಪ್ರಾರಂಭವಾಗಲಿದೆ. ಆದ್ದರಿಂದ ನ.19ರಿಂದ ಡಿ.18ರವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.
ಯೋಜನೆ ಕೇಂದ್ರ-1 ವಿಭಾಗದ ವತಿಯಿಂದ ಗುಬ್ಬಿ ತೋಟದಪ್ಪ ರಸ್ತೆಯನ್ನು ಶಾಂತಲಾ ವೃತ್ತದಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ (ರೈಲ್ವೆ ನಿಲ್ದಾಣದ ಕಡೆ) ಸುಮಾರು 580 ಮೀಟರ್ ರಸ್ತೆಯಲ್ಲಿ ವೈಟ್ ಟಾಪಿಂಗ್ ಮಾಡಲಾಗುತ್ತದೆ ಎಂದು ಕಾರ್ಯಪಾಲಕ ಎಂಜಿನಿಯರ್ ತಿಳಿಸಿದ್ದಾರೆ.