ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಸಿ.ವಿ. ರಾಮನ್‌ ರಸ್ತೆಯಲ್ಲಿ ಸಂಚಾರ ನಿರ್ಬಂಧ

Last Updated 17 ಆಗಸ್ಟ್ 2022, 2:16 IST
ಅಕ್ಷರ ಗಾತ್ರ

ಬೆಂಗಳೂರು: ಯಶವಂತಪುರದ ಸಿ.ವಿ. ರಾಮನ್ ರಸ್ತೆಯಲ್ಲಿ ಬಿಬಿಎಂಪಿ ವತಿಯಿಂದ ಆಗಸ್ಟ್ 18ರಿಂದ ವೈಟ್ ಟಾಪಿಂಗ್ ಕಾಮಗಾರಿ ಆರಂಭವಾಗಲಿದ್ದು, ಈ ಅವಧಿಯಲ್ಲಿ ಬಿಎಚ್‌ಇಎಲ್ ಜಂಕ್ಷನ್‌ನಿಂದ ಯಶವಂತಪುರ ವೃತ್ತದವರೆಗಿನ ರಸ್ತೆಯಲ್ಲಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

‘30 ದಿನಗಳವರೆಗೆ ಕಾಮಗಾರಿ ನಡೆಯಲಿದೆ. ಸಾರ್ವಜನಿಕರು ಪರ್ಯಾಯ ಮಾರ್ಗ ಬಳಸಬೇಕು’ ಎಂದು ಸಂಚಾರ ವಿಭಾಗದ ಜಂಟಿ ಕಮಿಷನರ್ ಬಿ.ಆರ್. ರವಿಕಾಂತೇಗೌಡ ತಿಳಿಸಿದ್ದಾರೆ.

‘ಮಲ್ಲೇಶ್ವರ 18ನೇ ಅಡ್ಡರಸ್ತೆಯಿಂದ ಬರುವ ವಾಹನಗಳು, ಸರ್ಕಲ್ ಮಾರಮ್ಮ ದೇವಸ್ಥಾನ, ಮಾರ್ಗೋಸಾ ರಸ್ತೆ, 15ನೇ ಅಡ್ಡರಸ್ತೆ ಹಾಗೂ ಯಶವಂತಪುರ 8ನೇ ಮುಖ್ಯರಸ್ತೆ ಮೂಲಕ ಸಂಚರಿಸಬಹುದು. ಮೇಖ್ರಿ ವೃತ್ತದಿಂದ ಬರುವ ವಾಹನಗಳು, ಸದಾಶಿವನಗರ ಪೊಲೀಸ್ ಠಾಣೆ ಜಂಕ್ಷನ್, ಕುವೆಂಪು ವೃತ್ತ, ಬಿಇಎಲ್ ವೃತ್ತದ ಮೂಲಕ ಹೋಗಬಹುದು’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT