ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಲಿದ ಕಟ್ಟಡ: ಮಾಲೀಕನ ಬಂಧನ

Last Updated 7 ಡಿಸೆಂಬರ್ 2018, 18:49 IST
ಅಕ್ಷರ ಗಾತ್ರ

ಬೆಂಗಳೂರು: ಮಾರತ್ತಹಳ್ಳಿ ಸಮೀಪದ ಅಶ್ವಥ್‌ ನಗರದಲ್ಲಿ ಏಕಾಏಕಿ ವಾಲಿಕೊಂಡು ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದ ಪೇಯಿಂಗ್‌ ಗೆಸ್ಟ್‌ ಕಟ್ಟಡ ಅಕ್ರಮವಾಗಿ ನಿರ್ಮಾಣಗೊಂಡಿದೆ ಎಂಬ ಮಾಹಿತಿ ಹೊರಬಿದ್ದಿದೆ. ಕಟ್ಟಡದ ಮಾಲೀಕ ಶಿವಪ್ರಸಾದ್‌ನನ್ನು ಬಂಧಿಸಲಾಗಿದೆ.

20X30 ಸೈಟ್‌ನಲ್ಲಿ ನೆಲಮಹಡಿ ಮತ್ತು ಎರಡು ಅಂತಸ್ತಿನ ನಿರ್ಮಾಣಕ್ಕೆ ಪರವಾನಗಿ ನೀಡಲಾಗಿತ್ತು. ಆದರೆ ಮಾಲೀಕ ಹೆಚ್ಚುವರಿಯಾಗಿ ಮತ್ತೊಂದು ಮಹಡಿ ಕಟ್ಟಿದ್ದ. ಆ ಹೆಚ್ಚುವರಿ ಅಂತಸ್ತನ್ನು ಕೆಡವಲು ಪಾಲಿಕೆ ಮೂರು ತಿಂಗಳ ಹಿಂದೆ ನೋಟಿಸ್‌ ನೀಡಿದ್ದರೂ ಆತ ನಿರ್ಲಕ್ಷಿಸಿದ್ದ. ಕಟ್ಟಡದಲ್ಲಿ 18 ಕೊಠಡಿಗಳ ಪೇಯಿಂಗ್‌ ಗೆಸ್ಟ್‌ (ಪಿ.ಜಿ.) ನಡೆಸಲು ಶ್ರೀನಿವಾಸ ರೆಡ್ಡಿ ಎಂಬುವವರಿಗೆ ನೀಡಿದ್ದ. ರೆಡ್ಡಿ ಸಹ ಕುಟುಂಬ ಸಮೇತರಾಗಿ ನೆಲಮಹಡಿಯಲ್ಲಿ ನೆಲೆಸಿದ್ದರು.

ವರ್ಷದ ಹಿಂದೆ ನಿರ್ಮಿಸಿದ್ದ ಕಟ್ಟಡ ಇದು. ಪಿಲ್ಲರ್‌ಗಳಲ್ಲಿ ಗುರುವಾರ ರಾತ್ರಿ ಬಿರುಕು ಕಾಣಿಸಿಕೊಂಡಿತ್ತು. ಕರೆ ಮೇರೆಗೆ ಬಂದ ಅಗ್ನಿಶಾಮಕ ದಳ ಮತ್ತು ಪೋಲಿಸರು ಕಟ್ಟಡದ ವಾಸಿಗಳನ್ನು ಸ್ಥಳಾಂತರಿಸಿದರು.

ಪಾಲಿಕೆಯಿಂದ ಆದೇಶ ಬಂದ ಬಳಿಕ ಕಟ್ಟಡವನ್ನು ಯಂತ್ರೋಪಕರಣದ ಮೂಲಕ ತೆರವು ಮಾಡುವ ಕೆಲಸವನ್ನು ಸಿಬ್ಬಂದಿ ಶುಕ್ರವಾರ ಆರಂಭಿಸಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT