<p><strong>ಬೆಂಗಳೂರು</strong>: ಐ.ಟಿ ಕಾರಿಡಾರ್ ಎಂದೇ ಕರೆಯಲಾಗುತ್ತಿರುವ ವೈಟ್ಫೀಲ್ಡ್ ಮೆಟ್ರೊ ರೈಲು ಕಾರ್ಯಾಚರಣೆ ಆರಂಭವಾಗಿದ್ದು, ಸೋಮವಾರ 18 ಸಾವಿರ ಜನ ಪ್ರಯಾಣ ಮಾಡಿದ್ದಾರೆ.</p>.<p>ಭಾನುವಾರ ಬೆಳಿಗ್ಗೆ 7ರಿಂದ ವಾಣಿಜ್ಯ ಸಂಚಾರ ಆರಂಭವಾಗಿದ್ದು, ಭಾನುವಾರ ರಾತ್ರಿ 11ರವರೆಗೆ 16,319 ಜನ ಪ್ರಯಾಣ ಮಾಡಿದ್ದರು. ಎರಡನೇ ದಿನ ಪ್ರಯಾಣಿಕರ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದೆ. ಬೆಳಿಗ್ಗೆ 5ರಿಂದ ರಾತ್ರಿ 9 ಗಂಟೆ ತನಕ 18 ಸಾವಿರ ಮಂದಿ ಪ್ರಯಾಣ ಮಾಡಿದ್ದಾರೆ ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ಮಾಹಿತಿ ನೀಡಿದರು.</p>.<p>ಪ್ರತಿನಿತ್ಯ 1 ಲಕ್ಷಕ್ಕೂ ಹೆಚ್ಚು ಜನ ಈ ಮಾರ್ಗದಲ್ಲಿ ಪ್ರಯಾಣ ಮಾಡಲಿದ್ದಾರೆ ಎಂದು ಅಧಿಕಾರಿಗಳು ಅಂದಾಜಿಸಿದ್ದರು. ಆದರೆ, ಮೊದಲ ಎರಡನೇ ದಿನ ಕಡಿಮೆ ಜನ ಪ್ರಯಾಣ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಬಳಕೆ ಮಾಡಲಿದ್ದಾರೆ ಎಂದು ತಿಳಿಸಿದರು.</p>.<p>ಸದ್ಯ ಪ್ರತಿ 12 ನಿಮಿಷಗಳ ಅಂತರದಲ್ಲಿ ರೈಲು ಸೇವೆ ಒದಗಿಸಲಾಗುತ್ತಿದ್ದು, ಪ್ರಯಾಣಿಕರ ದಟ್ಟಣೆ ಆಧರಿಸಿ ಅಂತರ ಕಡಿಮೆ ಮಾಡಲಾಗುವುದು ಎಂದರು.</p>.<p class="Briefhead">ಪೂರ್ಣಗೊಳ್ಳದ ಮಾರ್ಗ: ಆಟೊ ಪ್ರಯಾಣ ದುಬಾರಿ</p>.<p>ವೈಟ್ಫೀಲ್ಡ್ ಮಾರ್ಗ ಪೂರ್ಣ ಪ್ರಮಾಣದಲ್ಲಿ ಆರಂಭವಾಗದೆ ಇರುವುದು ಪ್ರಯಾಣಿಕರಿಗೆ ಕಿರಿಕಿರಿ ಉಂಟಾಗಿದೆ.</p>.<p>ಬೈಯಪ್ಪನಹಳ್ಳಿ ಮತ್ತು ಕೆ.ಆರ್.ಪುರ ನಡುವಿನ ಎರಡು ಕಿಲೋ ಮೀಟರ್ ಮಾರ್ಗದಲ್ಲಿ ಕಾಮಗಾರಿ ನಡೆಯುತ್ತಿದ್ದು, ಅಧಿಕಾರಿಗಳ ಪ್ರಕಾರ ಜೂನ್ ಅಂತ್ಯದ ತನಕ ಕಾಯಬೇಕಿದೆ. ವೈಟ್ಫೀಲ್ಡ್ ಕಡೆಗೆ ಸಾಗಬೇಕಾದವರು ಬೈಯಪ್ಪನಹಳ್ಳಿಯಲ್ಲಿ ಇಳಿದು ಬಸ್, ಆಟೊ ಅಥವಾ ಟ್ಯಾಕ್ಸಿಯಲ್ಲಿ ಕೆ.ಆರ್.ಪುರ ತನಕ ಪ್ರಯಾಣ ಮಾಡಬೇಕಿದೆ.</p>.<p>ಇದು ಪ್ರಯಾಣಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದೆ. ಅಲ್ಲದೇ ದುಬಾರಿ ಪ್ರಯಾಣದ ಬಿಸಿ ಅನುಭವಿಸಬೇಕಿದೆ.</p>.<p>‘ಎರಡು ಕಿಲೋ ಮೀಟರ್ ದೂರಕ್ಕೆ ಆಟೊ ಚಾಲಕರು ಮನ ಬಂದಂತೆ ದರ ಕೇಳುತ್ತಿದ್ದಾರೆ. ₹100–₹120 ತನಕ ದರ ಪಡೆಯುತ್ತಿದ್ದಾರೆ. ತುರ್ತಾಗಿ ಹೋಗಬೇಕಿರುವ ಪ್ರಯಾಣಿಕರು ಬೇರೆ ದಾರಿ ಇಲ್ಲದೆ ದುಬಾರಿ ಪಾವತಿಸಿ ತೆರಳುವಂತಾಗಿದೆ’ ಎಂದು ಪ್ರಯಾಣಿಕರು ಬೇಸರ ವ್ಯಕ್ತಪಡಿಸುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಐ.ಟಿ ಕಾರಿಡಾರ್ ಎಂದೇ ಕರೆಯಲಾಗುತ್ತಿರುವ ವೈಟ್ಫೀಲ್ಡ್ ಮೆಟ್ರೊ ರೈಲು ಕಾರ್ಯಾಚರಣೆ ಆರಂಭವಾಗಿದ್ದು, ಸೋಮವಾರ 18 ಸಾವಿರ ಜನ ಪ್ರಯಾಣ ಮಾಡಿದ್ದಾರೆ.</p>.<p>ಭಾನುವಾರ ಬೆಳಿಗ್ಗೆ 7ರಿಂದ ವಾಣಿಜ್ಯ ಸಂಚಾರ ಆರಂಭವಾಗಿದ್ದು, ಭಾನುವಾರ ರಾತ್ರಿ 11ರವರೆಗೆ 16,319 ಜನ ಪ್ರಯಾಣ ಮಾಡಿದ್ದರು. ಎರಡನೇ ದಿನ ಪ್ರಯಾಣಿಕರ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದೆ. ಬೆಳಿಗ್ಗೆ 5ರಿಂದ ರಾತ್ರಿ 9 ಗಂಟೆ ತನಕ 18 ಸಾವಿರ ಮಂದಿ ಪ್ರಯಾಣ ಮಾಡಿದ್ದಾರೆ ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ಮಾಹಿತಿ ನೀಡಿದರು.</p>.<p>ಪ್ರತಿನಿತ್ಯ 1 ಲಕ್ಷಕ್ಕೂ ಹೆಚ್ಚು ಜನ ಈ ಮಾರ್ಗದಲ್ಲಿ ಪ್ರಯಾಣ ಮಾಡಲಿದ್ದಾರೆ ಎಂದು ಅಧಿಕಾರಿಗಳು ಅಂದಾಜಿಸಿದ್ದರು. ಆದರೆ, ಮೊದಲ ಎರಡನೇ ದಿನ ಕಡಿಮೆ ಜನ ಪ್ರಯಾಣ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಬಳಕೆ ಮಾಡಲಿದ್ದಾರೆ ಎಂದು ತಿಳಿಸಿದರು.</p>.<p>ಸದ್ಯ ಪ್ರತಿ 12 ನಿಮಿಷಗಳ ಅಂತರದಲ್ಲಿ ರೈಲು ಸೇವೆ ಒದಗಿಸಲಾಗುತ್ತಿದ್ದು, ಪ್ರಯಾಣಿಕರ ದಟ್ಟಣೆ ಆಧರಿಸಿ ಅಂತರ ಕಡಿಮೆ ಮಾಡಲಾಗುವುದು ಎಂದರು.</p>.<p class="Briefhead">ಪೂರ್ಣಗೊಳ್ಳದ ಮಾರ್ಗ: ಆಟೊ ಪ್ರಯಾಣ ದುಬಾರಿ</p>.<p>ವೈಟ್ಫೀಲ್ಡ್ ಮಾರ್ಗ ಪೂರ್ಣ ಪ್ರಮಾಣದಲ್ಲಿ ಆರಂಭವಾಗದೆ ಇರುವುದು ಪ್ರಯಾಣಿಕರಿಗೆ ಕಿರಿಕಿರಿ ಉಂಟಾಗಿದೆ.</p>.<p>ಬೈಯಪ್ಪನಹಳ್ಳಿ ಮತ್ತು ಕೆ.ಆರ್.ಪುರ ನಡುವಿನ ಎರಡು ಕಿಲೋ ಮೀಟರ್ ಮಾರ್ಗದಲ್ಲಿ ಕಾಮಗಾರಿ ನಡೆಯುತ್ತಿದ್ದು, ಅಧಿಕಾರಿಗಳ ಪ್ರಕಾರ ಜೂನ್ ಅಂತ್ಯದ ತನಕ ಕಾಯಬೇಕಿದೆ. ವೈಟ್ಫೀಲ್ಡ್ ಕಡೆಗೆ ಸಾಗಬೇಕಾದವರು ಬೈಯಪ್ಪನಹಳ್ಳಿಯಲ್ಲಿ ಇಳಿದು ಬಸ್, ಆಟೊ ಅಥವಾ ಟ್ಯಾಕ್ಸಿಯಲ್ಲಿ ಕೆ.ಆರ್.ಪುರ ತನಕ ಪ್ರಯಾಣ ಮಾಡಬೇಕಿದೆ.</p>.<p>ಇದು ಪ್ರಯಾಣಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದೆ. ಅಲ್ಲದೇ ದುಬಾರಿ ಪ್ರಯಾಣದ ಬಿಸಿ ಅನುಭವಿಸಬೇಕಿದೆ.</p>.<p>‘ಎರಡು ಕಿಲೋ ಮೀಟರ್ ದೂರಕ್ಕೆ ಆಟೊ ಚಾಲಕರು ಮನ ಬಂದಂತೆ ದರ ಕೇಳುತ್ತಿದ್ದಾರೆ. ₹100–₹120 ತನಕ ದರ ಪಡೆಯುತ್ತಿದ್ದಾರೆ. ತುರ್ತಾಗಿ ಹೋಗಬೇಕಿರುವ ಪ್ರಯಾಣಿಕರು ಬೇರೆ ದಾರಿ ಇಲ್ಲದೆ ದುಬಾರಿ ಪಾವತಿಸಿ ತೆರಳುವಂತಾಗಿದೆ’ ಎಂದು ಪ್ರಯಾಣಿಕರು ಬೇಸರ ವ್ಯಕ್ತಪಡಿಸುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>