<p><strong>ಬೆಂಗಳೂರು</strong>: ಬಾಡಿಗೆ ಮನೆ ವಿಚಾರಿಸಲು ಹೋದಾಗ ಮನೆಯ ಹೊರಗೆ ಶೂ ರ್ಯಾಕ್ನಲ್ಲಿಟ್ಟಿದ್ದ ಕೀ ಬಳಸಿಕೊಂಡು ಸಾಫ್ಟ್ವೇರ್ ಎಂಜಿನಿಯರ್ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಮಾಡಿದ್ದ ಛಾಯಾಗ್ರಾಹಕನನ್ನು ವೈಟ್ಫೀಲ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ವೈಟ್ಫೀಲ್ಡ್ ನಿವಾಸಿ ಕಿರಣ್ ಎಂಬುವವರನ್ನು ಬಂಧಿಸಿ, ₹55 ಲಕ್ಷ ಮೌಲ್ಯದ 348 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.</p>.<p>ಕಿರಣ್ ಅವರು ಫೋಟೊ ಸ್ಟುಡಿಯೊ ಇಟ್ಟುಕೊಂಡಿದ್ದರು. ಕೋವಿಡ್ ಸಂದರ್ಭದಲ್ಲಿ ಆರ್ಥಿಕ ನಷ್ಟ ಉಂಟಾದ ಪರಿಣಾಮ ಸ್ಟುಡಿಯೊ ಬಂದ್ ಮಾಡಿದ್ದರು. ಕ್ಯಾಮೆರಾ ಇದ್ದ ಕಾರಣ ವಿವಿಧ ಕಾರ್ಯಕ್ರಮಗಳಿಗೆ ಹೋಗುತ್ತಿದ್ದು, ಬಂದ ಹಣದಲ್ಲಿ ಜೀವನ ನಡೆಸುತ್ತಿದ್ದರು. <br /><br />ನಾಗೊಂಡನಹಳ್ಳಿಯಲ್ಲಿರುವ ಸಾಫ್ಟ್ವೇರ್ ಎಂಜಿನಿಯರ್ ಜಗದೀಶ್ ಅವರು ಮನೆಯ ಬೀಗ ಹಾಕಿ, ಶಾಲೆಯಿಂದ ಮಕ್ಕಳು ಬರುತ್ತಾರೆಂದು ಕೀ ಯನ್ನು ಶೂ ರ್ಯಾಕ್ನಲ್ಲಿಟ್ಟು ಹೋಗಿದ್ದರು. ಈ ನಡುವೆ ಬಾಡಿಗೆ ಮನೆ ಹುಡುಕುತ್ತಿದ್ದ ಆರೋಪಿ, ಜಗದೀಶ್ ಅವರ ಮನೆ ಎದುರು ‘ಮನೆ ಬಾಡಿಗೆಗೆ ಇದೆ’ ಎಂಬ ಫಲಕ ನೋಡಿದ್ದಾರೆ. ವಿಚಾರಿಸಲು ಮನೆ ಬಳಿ ಹೋದಾಗ ಶೂ ರ್ಯಾಕ್ನಲ್ಲಿ ಕೀ ಇಟ್ಟಿದ್ದನ್ನು ಗಮನಿಸಿ, ಆ ಕೀ ಯಿಂದ ಮನೆಯ ಬಾಗಿಲು ತೆರೆದು ಚಿನ್ನಾಭರಣ ಕಳವು ಮಾಡಿ ಪರಾರಿಯಾಗಿದ್ದರು.</p>.<p>ಮನೆ ಮಾಲೀಕ ಜಗದೀಶ್ ಅವರ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.</p>.<p>ಸಿ.ಸಿ.ಟಿ.ವಿ ಕ್ಯಾಮೆರಾಗಳ ದೃಶ್ಯಾವಳಿ ಪರಿಶೀಲನೆ ನಡೆಸಿ, ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ, ಚಿನ್ನಾಭರಣ ಕಳವು ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದು, ಆತನ ಮನೆಯಿಂದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದರು.<br /><br />ಕಿರಣ್ಗೆ ತಾನು ಮಾಡಿದ ಕೃತ್ಯದಿಂದ ಪಶ್ಚಾತ್ತಾಪವಾಗಿ, ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ದೇವರ ದರ್ಶನ ಪಡೆದಿದ್ದಾರೆ. ವಾಪಸ್ ಬರುವಾಗ ಅವರನ್ನು ಬಂಧಿಸಿದ್ದು ವಿಚಾರಣೆ ಮುಂದುವರಿದಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬಾಡಿಗೆ ಮನೆ ವಿಚಾರಿಸಲು ಹೋದಾಗ ಮನೆಯ ಹೊರಗೆ ಶೂ ರ್ಯಾಕ್ನಲ್ಲಿಟ್ಟಿದ್ದ ಕೀ ಬಳಸಿಕೊಂಡು ಸಾಫ್ಟ್ವೇರ್ ಎಂಜಿನಿಯರ್ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಮಾಡಿದ್ದ ಛಾಯಾಗ್ರಾಹಕನನ್ನು ವೈಟ್ಫೀಲ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ವೈಟ್ಫೀಲ್ಡ್ ನಿವಾಸಿ ಕಿರಣ್ ಎಂಬುವವರನ್ನು ಬಂಧಿಸಿ, ₹55 ಲಕ್ಷ ಮೌಲ್ಯದ 348 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.</p>.<p>ಕಿರಣ್ ಅವರು ಫೋಟೊ ಸ್ಟುಡಿಯೊ ಇಟ್ಟುಕೊಂಡಿದ್ದರು. ಕೋವಿಡ್ ಸಂದರ್ಭದಲ್ಲಿ ಆರ್ಥಿಕ ನಷ್ಟ ಉಂಟಾದ ಪರಿಣಾಮ ಸ್ಟುಡಿಯೊ ಬಂದ್ ಮಾಡಿದ್ದರು. ಕ್ಯಾಮೆರಾ ಇದ್ದ ಕಾರಣ ವಿವಿಧ ಕಾರ್ಯಕ್ರಮಗಳಿಗೆ ಹೋಗುತ್ತಿದ್ದು, ಬಂದ ಹಣದಲ್ಲಿ ಜೀವನ ನಡೆಸುತ್ತಿದ್ದರು. <br /><br />ನಾಗೊಂಡನಹಳ್ಳಿಯಲ್ಲಿರುವ ಸಾಫ್ಟ್ವೇರ್ ಎಂಜಿನಿಯರ್ ಜಗದೀಶ್ ಅವರು ಮನೆಯ ಬೀಗ ಹಾಕಿ, ಶಾಲೆಯಿಂದ ಮಕ್ಕಳು ಬರುತ್ತಾರೆಂದು ಕೀ ಯನ್ನು ಶೂ ರ್ಯಾಕ್ನಲ್ಲಿಟ್ಟು ಹೋಗಿದ್ದರು. ಈ ನಡುವೆ ಬಾಡಿಗೆ ಮನೆ ಹುಡುಕುತ್ತಿದ್ದ ಆರೋಪಿ, ಜಗದೀಶ್ ಅವರ ಮನೆ ಎದುರು ‘ಮನೆ ಬಾಡಿಗೆಗೆ ಇದೆ’ ಎಂಬ ಫಲಕ ನೋಡಿದ್ದಾರೆ. ವಿಚಾರಿಸಲು ಮನೆ ಬಳಿ ಹೋದಾಗ ಶೂ ರ್ಯಾಕ್ನಲ್ಲಿ ಕೀ ಇಟ್ಟಿದ್ದನ್ನು ಗಮನಿಸಿ, ಆ ಕೀ ಯಿಂದ ಮನೆಯ ಬಾಗಿಲು ತೆರೆದು ಚಿನ್ನಾಭರಣ ಕಳವು ಮಾಡಿ ಪರಾರಿಯಾಗಿದ್ದರು.</p>.<p>ಮನೆ ಮಾಲೀಕ ಜಗದೀಶ್ ಅವರ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.</p>.<p>ಸಿ.ಸಿ.ಟಿ.ವಿ ಕ್ಯಾಮೆರಾಗಳ ದೃಶ್ಯಾವಳಿ ಪರಿಶೀಲನೆ ನಡೆಸಿ, ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ, ಚಿನ್ನಾಭರಣ ಕಳವು ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದು, ಆತನ ಮನೆಯಿಂದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದರು.<br /><br />ಕಿರಣ್ಗೆ ತಾನು ಮಾಡಿದ ಕೃತ್ಯದಿಂದ ಪಶ್ಚಾತ್ತಾಪವಾಗಿ, ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ದೇವರ ದರ್ಶನ ಪಡೆದಿದ್ದಾರೆ. ವಾಪಸ್ ಬರುವಾಗ ಅವರನ್ನು ಬಂಧಿಸಿದ್ದು ವಿಚಾರಣೆ ಮುಂದುವರಿದಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>