‘ಈಗ ಲಾಕ್ಡೌನ್ ಜಾರಿ ಮಾಡಿದರೆ, ರೈತರು ಪರದಾಡುತ್ತಾರೆ. ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿ, ರೈತರಿಗೆ ಅನ್ಯಾಯ ಆಗುತ್ತದೆ. ಯಾವ ಕಾರಣಕ್ಕೂ ಸಗಟು ಮಾರುಕಟ್ಟೆ ಬಂದ್ ಮಾಡುವ ನಿರ್ಧಾರ ಕೈಗೊಳ್ಳಬಾರದು. ಅನಿವಾರ್ಯ ಸಂದರ್ಭ ಎದುರಾದಲ್ಲಿ, ವರ್ತಕರು ಹಾಗೂ ರೈತರೊಂದಿಗೆ ಚರ್ಚಿಸಿ, ಪರ್ಯಾಯ ಕ್ರಮಗಳನ್ನು ಸೂಚಿಸಬೇಕು’ ಎಂದೂ ಆಗ್ರಹಿಸಿದ್ದಾರೆ.