‘ಒಂದು ತಿಂಗಳ ಒಳಗೆ ಬಿಬಿಎಂಪಿ ವಾರ್ಡ್ವಾರು ಮೀಸಲಾತಿ ಪಟ್ಟಿ ಪ್ರಕಟಿಸಬೇಕು. ಅದಾಗಿ ಆರು ವಾರಗಳ ಒಳಗೆ ಚುನಾವಣೆ ಪ್ರಕ್ರಿಯೆ ಆರಂಭಿಸಬೇಕು ಎಂದು ಹೈಕೋರ್ಟ್ ಡಿ.4ರಂದು ಆದೇಶ ಮಾಡಿದೆ. ಅದರ ಪ್ರಕಾರ ಚುನಾವಣೆ ನಡೆಯುವಂತೆ ನೋಡಿಕೊಳ್ಳುವುದು ರಾಜ್ಯ ಚುನಾವಣಾ ಆಯೋಗದ ಕರ್ತವ್ಯ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ಕಂದಾಯ ಸಚಿವ ಆರ್.ಅಶೋಕ ಹೇಳಿಕೆ ನೀಡಿದ್ದರು. ಚುನಾವಣೆ ಮತ್ತಷ್ಟು ವಿಳಂಬ ಆಗುವುದನ್ನು ತಪ್ಪಿಸಲು ರಾಜ್ಯ ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್ನಲ್ಲಿ ಕೇವಿಯಟ್ ಸಲ್ಲಿಸಬೇಕಿತ್ತು’ ಎಂದು ಅವರು ಅಭಿಪ್ರಾಯಪಟ್ಟರು.