ಈ ಹಿಂದೆ ಸೇನೆಯಲ್ಲಿ ಕೆಲಸ ಮಾಡಿದ್ದ ಚಂದ್ರಶೇಖರ್ ಬಳಿಕ ಎಚ್ಎಂಟಿ ಕಂಪನಿಯಲ್ಲಿ ಭದ್ರತಾ ಸಿಬ್ಬಂದಿಯಾಗಿಯೂ ದುಡಿದಿದ್ದರು. ದಂಪತಿಗೆ ಪುತ್ರ ಹಾಗೂ ಪುತ್ರಿ ಇದ್ದಾರೆ. ಸುಮನಹಳ್ಳಿಯ ಚಿತಾಗಾರದಲ್ಲಿ ದಂಪತಿಯ ಅಂತ್ಯಸಂಸ್ಕಾರ ನೆರವೇರಿತು. ಸ್ಥಳೀಯ ಪಾಲಿಕೆ ಸದಸ್ಯ ಎಂ.ಶಿವರಾಜು ಅವರು ದಂಪತಿಯ ಅಂತ್ಯ ಸಂಸ್ಕಾರಕ್ಕೆ ವ್ಯವಸ್ಥೆ ಕಲ್ಪಿಸಲು ನೆರವಾದರು.