‘ಪತಿಯನ್ನು ಪ್ರಶ್ನಿಸಿದ್ದ ಧೂಪಿದೇವಿ, ಜಗಳ ಮಾಡಬೇಡಿ ಎಂದು ಗೋಳಾಡಿದ್ದರು. ಅಷ್ಟಕ್ಕೆ ಕೋಪಗೊಂಡ ಆರೋಪಿ, ಮನೆಯಲ್ಲಿದ್ದ ಚಾಕುವಿನಿಂದ ಪತ್ನಿಯ ಕತ್ತು ಕೊಯ್ದಿದ್ದರು. ಕುಸಿದು ಬಿದ್ದ ಧೂಪಿದೇವಿ, ತೀವ್ರ ರಕ್ತಸ್ರಾವದಿಂದಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಲಾಟೆ ಕಂಡು ಮಕ್ಕಳು ಚೀರಾಡುತ್ತಿದ್ದಂತೆ ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ಧಾವಿಸಿದ್ದರು’ ಎಂದೂ ಪೊಲೀಸರು ತಿಳಿಸಿದರು.