<p><strong>ಬೆಂಗಳೂರು:</strong> ಬ್ಯಾಡರಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ರೋಜಾ (28) ಎಂಬುವರನ್ನು ಕೊಂದು, ಅವರ ಪತಿ ಮಂಜುನಾಥ್ (36) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>‘ತಿಗರಳಪಾಳ್ಯದ ಮನೆಯೊಂದರಲ್ಲಿ ದಂಪತಿ ವಾಸವಿದ್ದರು. ಅದೇ ಮನೆಯಲ್ಲೇ ದಂಪತಿ ಮೃತದೇಹಗಳು ಭಾನುವಾರ ಪತ್ತೆಯಾಗಿವೆ. ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಕನಕಪುರ ಸಾತನೂರಿನ ಮಂಜುನಾಥ್ ಹಾಗೂ ಮಳವಳ್ಳಿಯ ರೋಜಾ, ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿದ್ದರು. ದಂಪತಿ ಮಕ್ಕಳು ಆಗಿರಲಿಲ್ಲ. ಮದ್ಯ ವ್ಯಸನಿ ಆಗಿದ್ದ ಮಂಜುನಾಥ್, ನಿತ್ಯವೂ ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಪತ್ನಿಯನ್ನು ಥಳಿಸುತ್ತಿದ್ದ. ’</p>.<p>‘ಶನಿವಾರ ರಾತ್ರಿಯೂ ದಂಪತಿ ನಡುವೆ ಜಗಳ ಆಗಿದೆ. ಇದೇ ಸಂದರ್ಭದಲ್ಲೇ ಆರೋಪಿ, ಪತ್ನಿಯನ್ನು ಕೊಲೆ ಮಾಡಿದ್ದಾನೆ. ನಂತರ, ತಾನೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ’ ಎಂದೂ ಪೊಲೀಸ್ ಮೂಲಗಳು ತಿಳಿಸಿವೆ.</p>.<p>‘ಸ್ಥಳೀಯರು ನೀಡಿದ್ದ ಮಾಹಿತಿ ಆಧರಿಸಿ ಸಿಬ್ಬಂದಿ ಮನೆಗೆ ಹೋಗಿದ್ದರು. ಮನೆಯ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಸ್ಥಳೀಯರ ಸಮ್ಮುಖದಲ್ಲಿ ಬಾಗಿಲು ಒಡೆಯಲಾಯಿತು. ನೇಣು ಬಿಗಿದ ಸ್ಥಿತಿಯಲ್ಲಿ ಮಂಜುನಾಥ್ ಮೃತದೇಹವಿತ್ತು. ಕೊಠಡಿಯಲ್ಲಿ ಪತ್ನಿ ಮೃತದೇಹ ಕಂಡಿತು’ ಎಂದೂ ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬ್ಯಾಡರಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ರೋಜಾ (28) ಎಂಬುವರನ್ನು ಕೊಂದು, ಅವರ ಪತಿ ಮಂಜುನಾಥ್ (36) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>‘ತಿಗರಳಪಾಳ್ಯದ ಮನೆಯೊಂದರಲ್ಲಿ ದಂಪತಿ ವಾಸವಿದ್ದರು. ಅದೇ ಮನೆಯಲ್ಲೇ ದಂಪತಿ ಮೃತದೇಹಗಳು ಭಾನುವಾರ ಪತ್ತೆಯಾಗಿವೆ. ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಕನಕಪುರ ಸಾತನೂರಿನ ಮಂಜುನಾಥ್ ಹಾಗೂ ಮಳವಳ್ಳಿಯ ರೋಜಾ, ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿದ್ದರು. ದಂಪತಿ ಮಕ್ಕಳು ಆಗಿರಲಿಲ್ಲ. ಮದ್ಯ ವ್ಯಸನಿ ಆಗಿದ್ದ ಮಂಜುನಾಥ್, ನಿತ್ಯವೂ ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಪತ್ನಿಯನ್ನು ಥಳಿಸುತ್ತಿದ್ದ. ’</p>.<p>‘ಶನಿವಾರ ರಾತ್ರಿಯೂ ದಂಪತಿ ನಡುವೆ ಜಗಳ ಆಗಿದೆ. ಇದೇ ಸಂದರ್ಭದಲ್ಲೇ ಆರೋಪಿ, ಪತ್ನಿಯನ್ನು ಕೊಲೆ ಮಾಡಿದ್ದಾನೆ. ನಂತರ, ತಾನೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ’ ಎಂದೂ ಪೊಲೀಸ್ ಮೂಲಗಳು ತಿಳಿಸಿವೆ.</p>.<p>‘ಸ್ಥಳೀಯರು ನೀಡಿದ್ದ ಮಾಹಿತಿ ಆಧರಿಸಿ ಸಿಬ್ಬಂದಿ ಮನೆಗೆ ಹೋಗಿದ್ದರು. ಮನೆಯ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಸ್ಥಳೀಯರ ಸಮ್ಮುಖದಲ್ಲಿ ಬಾಗಿಲು ಒಡೆಯಲಾಯಿತು. ನೇಣು ಬಿಗಿದ ಸ್ಥಿತಿಯಲ್ಲಿ ಮಂಜುನಾಥ್ ಮೃತದೇಹವಿತ್ತು. ಕೊಠಡಿಯಲ್ಲಿ ಪತ್ನಿ ಮೃತದೇಹ ಕಂಡಿತು’ ಎಂದೂ ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>