ಆರೋಪಿ ನಾರಪ್ಪ ಪತ್ನಿಯನ್ನು ಕೊಲೆ ಮಾಡಿ ಯಾರಿಗೂ ಗೊತ್ತಾಗದಂತೆ ಶವವನ್ನು ಮಂಚದ ಕೆಳಗೆ ಹೂತಿಟ್ಟ. ಮರುದಿನ ತನ್ನ 5 ವರ್ಷದ ಮಗ ನಾರದಮುನಿಯನ್ನು ಬೆಣ್ಣೆಹಳ್ಳಿಗೆ ಬಿಟ್ಟು ಹೋಗಿದ್ದ. ಆ ವೇಳೆ ಈತನ ತಾತ ಕರಿಯಪ್ಪ ಮೊಮ್ಮಗನನ್ನು ಪ್ರಶ್ನಿಸಿದಾಗ ‘ಅಪ್ಪ ಮನೆಯ ಒಳಗಡೆ ಸಿಮೆಂಟ್ ಕೆಲಸ ಮಾಡುತ್ತಿತ್ತು’ ಎಂದು ಹೇಳಿದ ವಿಷಯ ಅನುಮಾನ ಮೂಡಿತ್ತು. ಇದರಿಂದ ಅನುಮಾನಗೊಂಡು ಕರಿಯಪ್ಪ ಪೊಲೀಸ್ ಠಾಣೆಗೆ ದೂರು ನೀಡಿದ್ದರು.