ಕೆ.ಆರ್.ಪುರ: ‘ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಬಿಜೆಪಿಯಿಂದ ಹಣ ಪಡೆದಿದ್ದೇನೆ ಎಂದು ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ನೇತ್ರಾವತಿಯಲ್ಲಿ ಸ್ನಾನ ಮಾಡಿ ಹಸಿಬಟ್ಟೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಮುಂದೆ ನಿಂತು ಪ್ರಮಾಣ ಮಾಡುತ್ತೇನೆ. ಅಪಪ್ರಚಾರ ಮಾಡುವವರು ತಾಕತ್ತು ಇದ್ದರೆ ಪ್ರಮಾಣ ಮಾಡಲಿ’ ಎಂದು ಅನರ್ಹ ಶಾಸಕ ಬೈರತಿ ಬಸವರಾಜ್ ಸವಾಲು ಎಸೆದರು.