ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಗತ್ಯವಿದ್ದರೆ ಬಜೆಟ್‌ ಕಾಮಗಾರಿ ಮರುಪರೀಲನೆ: ಬಿಬಿಎಂಪಿ ಆಯುಕ್ತ

Last Updated 3 ಅಕ್ಟೋಬರ್ 2020, 11:21 IST
ಅಕ್ಷರ ಗಾತ್ರ

ಬೆಂಗಳೂರು: ‘ಬಿಬಿಎಂಪಿಯ 2020–21ನೇ ಸಾಲಿನ ಬಜೆಟ್‌ನಲ್ಲಿ ಪ್ರಸ್ತಾಪಿಸಿರುವ ಕಾಮಗಾರಿಗಳನ್ನು ಅಗತ್ಯ ಬಿದ್ದರೆ ಮರುಪರಿಶೀಲನೆ ನಡೆಸುತ್ತೇವೆ' ಎಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಹೇಳಿದರು.

ವಸಂತನಗರ ವಾರ್ಡ್‌ನ ನೋಡಲ್‌ ಅಧಿಕಾರಿಯೂ ಆಗಿರುವ ಅವರು ವಾರ್ಡ್‌ ಸಭೆಯಲ್ಲಿ ಶನಿವಾರ ಮಾತನಾಡಿದರು.

‘2020–21ನೇ ಸಾಲಿನ ಬಜೆಟ್‌ನಲ್ಲಿ ಪ್ರಸ್ತಾಪಿಸಿರುವ ಕಾಮಗಾರಿಗಳ ಅವಶ್ಯಕತೆ ಇಲ್ಲ ಎಂದು ಕಂಡು ಬಂದರೆ ಅದರ ಬದಲು ಅಗತ್ಯ ಇರುವ ಬೇರೆ ಕಾಮಗಾರಿ ಕೈಗೊಳ್ಳುವ ಬಗ್ಗೆ ಪರಿಶೀಲಿಸುತ್ತೇವೆ’ ಎಂದರು.

ವಾರ್ಡ್‌ನ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳ ಪ್ರತಿನಿಧಿಗಳ ಅಹವಾಲು ಆಲಿಸಿದ ಅವರು ವಾರ್ಡ್‌ನ ಪ್ರಮುಖ ಸಮಸ್ಯೆಗಳ ಬಗ್ಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕವೂ ಪ್ರತಿಕ್ರಿಯೆ ಪಡೆದರು. ಕಸ ವಿಲೇವಾರಿ ಸಮಸ್ಯೆ ಬಗ್ಗೆ ಸ್ಥಳೀಯರು ಗಮನ ಸೆಳೆದರು.

ಹಾಜರಾತಿ ಹಾಕುವುದಕ್ಕೆ ನಿಗದಿಪಡಿಸಿರುವ ಸ್ಥಳಕ್ಕೆ ಬಂದು ಹೋಗುವಾಗ ಪೌರಕಾರ್ಮಿಕರ ಸಮಯ ಹಾಗೂ ಶ್ರಮ ವ್ಯರ್ಥವಾಗುತ್ತಿದೆ ಎಂದು ಸ್ಥಳೀಯರು ದೂರಿದರು. ವಾರ್ಡ್‌ನಲ್ಲಿ ಶೇ 65ರಷ್ಟು ಕಸ ಮೂಲದಲ್ಲೇ ವಿಂಗಡಣೆ ಆಗುತ್ತಿದೆ. ಕೆಲವು ಕಡೆ ಪೌರಕಾರ್ಮಿಕರೇ ಕಸವನ್ನು ವಿಂಗಡಣೆ ಮಾಡುತ್ತಿದ್ದಾರೆ ಎಂದು ಸ್ಥಳೀಯರು ತಿಳಿಸಿದರು.

ವಾರ್ಡ್‌ನಲ್ಲಿ ಬಳಕೆಯಾಗುತ್ತಿರುವ ಆಟೊ ಟಿಪ್ಪರ್‌ಗಳ ಬಗ್ಗೆ ಹಾಗೂ ಅವು ಕಸ ಸಂಗ್ರಹಿಸುವ ಸ್ಥಳಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ವಾಟ್ಸ್‌ಆ್ಯಪ್‌ ಬಳಗಗಳ ಮೂಲಕ ಹಂಚಿಕೊಳ್ಳುವಂತೆ ಅಧಿಕಾರಿಗಳಿಗೆ ಆಯುಕ್ತರು ಸಲಹೆ ನೀಡಿದರು.

ಬೀದಿದೀಪ ನಿರ್ವಹಣೆ, ಸಾರ್ವಜನಿಕ ಸ್ಥಳಗಳಲ್ಲಿ ಕಸ ಸುರಿಯುವುದು, ‌ಪಾದಚಾರಿ ಮಾರ್ಗಗಳ ನಿರ್ವಹಣೆ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT