<p><strong>ಬೆಂಗಳೂರು: ‘</strong>ಬಿಬಿಎಂಪಿ ಶಾಲೆಗಳಲ್ಲಿ ಬಡವರ ಮಕ್ಕಳು ಓದುತ್ತಿದ್ದಾರೆ. ಅಲ್ಲಿನ ಶಿಕ್ಷಣ ಮಟ್ಟ ಸುಧಾರಿಸುವ ಉದ್ದೇಶದಿಂದ ಗುಣಮಟ್ಟದ, ತರಬೇತಿ ಹೊಂದಿದ ಶಿಕ್ಷಕರನ್ನು ನೇಮಿಸಲು ನಿರ್ಧರಿಸಿದ್ದೇವೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.</p>.<p>ಪಾಲಿಕೆ ಶಾಲೆ, ಕಾಲೇಜುಗಳಲ್ಲಿ ಹೊರ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಮತ್ತು ಉಪನ್ಯಾಸಕರು ಉಪ ಮುಖ್ಯಮಂತ್ರಿಯವರನ್ನು ಸೋಮವಾರ ಭೇಟಿ ಮಾಡಿ, ತಮ್ಮನ್ನು ಸೇವೆಯಲ್ಲಿ ಮುಂದುವರಿಸುವಂತೆ ಆಗ್ರಹಿಸಿದರು.</p>.<p>ನಂತರ ಸುದ್ದಿಗಾರರ ಜತೆ ಮಾತನಾಡಿದ ಶಿವಕುಮಾರ್, ‘ಹೊರ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ತಮ್ಮನ್ನು ಮುಂದುವರಿಸುವಂತೆ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರು ಮನವಿ ಮಾಡಿದ್ದಾರೆ. ಈಗ ಇರುವವರಲ್ಲಿ ಗುಣಮಟ್ಟದ, ತರಬೇತಿ ಹೊಂದಿದ ಶಿಕ್ಷಕರಿಗೆ ಆಯ್ಕೆ ಪ್ರಕ್ರಿಯೆಯಲ್ಲಿ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದರು.</p>.<p>ಸೆಕ್ಯೂರಿಟಿ ಏಜೆನ್ಸಿಗಳಿಂದ ಶಿಕ್ಷಕರನ್ನು ನೇಮಿಸಲಾಗುತ್ತಿದೆ ಎಂಬ ದೂರು ಬಂದಿದೆ. ಯಾರು? ಯಾವ ಕೆಲಸ ಮಾಡುತ್ತಾರೋ? ಅದನ್ನೇ ಮಾಡಬೇಕು. ಬಿಬಿಎಂಪಿ ಶಾಲೆಗಳಲ್ಲಿ ಗುಣಮಟ್ಟ ಕುಸಿದಿದೆ. ಈ ಕಾರಣದಿಂದ ಪಾಲಿಕೆ ಶಾಲೆಗಳನ್ನು ಶಿಕ್ಷಣ ಇಲಾಖೆ ಅಧೀನಕ್ಕೆ ವಹಿಸಲಾಗಿದೆ. ಈ ಶಾಲೆಗಳಿಗೆ ಮೂಲಸೌಕರ್ಯ ಒದಗಿಸುವ ಕೆಲಸವನ್ನು ಮಾತ್ರ ಬಿಬಿಎಂಪಿ ಮಾಡಲಿದೆ ಎಂದು ಹೇಳಿದರು.</p>.<p>ಕನ್ನಡ ನಾಮಫಲಕ ಅಳವಡಿಸದವರ ವಿರುದ್ಧ ಕನ್ನಡ ಪರ ಸಂಘಟನೆಗಳು ಹೋರಾಟ ಆರಂಭಿಸುತ್ತಿರುವ ಕುರಿತು ಕೇಳಿದಾಗ, ‘ಕನ್ನಡ ಪರ ಸಂಘಟನೆಗಳು ಕಾನೂನು ಚೌಕಟ್ಟಿನಲ್ಲಿ ಹೋರಾಟ ಮಾಡಬೇಕು. ಹೋರಾಟದ ಹೆಸರಿನಲ್ಲಿ ಯಾರದ್ದೇ ಆಸ್ತಿಗಳಿಗೆ ಹಾನಿ ಮಾಡಬಾರದು’ ಎಂದರು.</p>.<p>ಮಳಿಗೆಗಳ ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡದಲ್ಲೇ ಇರಬೇಕು ಎಂಬ ಕಾನೂನು ಇದೆ. ಅದನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದರು.</p>.<p>ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಭೇಟಿ ಕುರಿತು ಕೇಳಿದಾಗ, ‘ನಗರಾಭಿವೃದ್ಧಿ ಇಲಾಖೆಯ ವ್ಯಾಪ್ತಿಯಲ್ಲಿ ಕೆಲವು ಯೋಜನಾ ಪ್ರಾಧಿಕಾರಗಳಿವೆ. ಅವುಗಳಿಗೆ ಅಧ್ಯಕ್ಷರು ಮತ್ತು ಸದಸ್ಯರ ನಾಮನಿರ್ದೇಶನ ಕುರಿತು ಚರ್ಚಿಸಿದ್ದೇವೆ. ಸಚಿವರನ್ನು ವೀಕ್ಷಕರನ್ನಾಗಿ ನಿಯೋಜಿಸಿರುವ ಲೋಕಸಭಾ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿಗಳ ಕುರಿತೂ ಚರ್ಚಿಸಿದ್ದೇವೆ’ ಎಂದರು.</p>.<p>ನಿಗಮ, ಮಂಡಳಿ ನಾಮನಿರ್ದೇಶನಕ್ಕೆ ಪಕ್ಷದ ವರಿಷ್ಠರಿಗೆ ಪಟ್ಟಿ ನೀಡಲಾಗಿದೆ. ಯಾವುದೇ ಕ್ಷಣದಲ್ಲಿ ನೇಮಕಾತಿ ಆದೇಶ ಹೊರಬೀಳಬಹುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>‘ಪರಿಹಾರಕ್ಕಾಗಿ ರೈತರು ಬರಗಾಲವನ್ನು ಬಯಸುತ್ತಾರೆ’ ಎಂಬ ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿಕೆ ಕುರಿತು ಪ್ರಶ್ನಿಸಿದಾಗ, ‘ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: ‘</strong>ಬಿಬಿಎಂಪಿ ಶಾಲೆಗಳಲ್ಲಿ ಬಡವರ ಮಕ್ಕಳು ಓದುತ್ತಿದ್ದಾರೆ. ಅಲ್ಲಿನ ಶಿಕ್ಷಣ ಮಟ್ಟ ಸುಧಾರಿಸುವ ಉದ್ದೇಶದಿಂದ ಗುಣಮಟ್ಟದ, ತರಬೇತಿ ಹೊಂದಿದ ಶಿಕ್ಷಕರನ್ನು ನೇಮಿಸಲು ನಿರ್ಧರಿಸಿದ್ದೇವೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.</p>.<p>ಪಾಲಿಕೆ ಶಾಲೆ, ಕಾಲೇಜುಗಳಲ್ಲಿ ಹೊರ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಮತ್ತು ಉಪನ್ಯಾಸಕರು ಉಪ ಮುಖ್ಯಮಂತ್ರಿಯವರನ್ನು ಸೋಮವಾರ ಭೇಟಿ ಮಾಡಿ, ತಮ್ಮನ್ನು ಸೇವೆಯಲ್ಲಿ ಮುಂದುವರಿಸುವಂತೆ ಆಗ್ರಹಿಸಿದರು.</p>.<p>ನಂತರ ಸುದ್ದಿಗಾರರ ಜತೆ ಮಾತನಾಡಿದ ಶಿವಕುಮಾರ್, ‘ಹೊರ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ತಮ್ಮನ್ನು ಮುಂದುವರಿಸುವಂತೆ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರು ಮನವಿ ಮಾಡಿದ್ದಾರೆ. ಈಗ ಇರುವವರಲ್ಲಿ ಗುಣಮಟ್ಟದ, ತರಬೇತಿ ಹೊಂದಿದ ಶಿಕ್ಷಕರಿಗೆ ಆಯ್ಕೆ ಪ್ರಕ್ರಿಯೆಯಲ್ಲಿ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದರು.</p>.<p>ಸೆಕ್ಯೂರಿಟಿ ಏಜೆನ್ಸಿಗಳಿಂದ ಶಿಕ್ಷಕರನ್ನು ನೇಮಿಸಲಾಗುತ್ತಿದೆ ಎಂಬ ದೂರು ಬಂದಿದೆ. ಯಾರು? ಯಾವ ಕೆಲಸ ಮಾಡುತ್ತಾರೋ? ಅದನ್ನೇ ಮಾಡಬೇಕು. ಬಿಬಿಎಂಪಿ ಶಾಲೆಗಳಲ್ಲಿ ಗುಣಮಟ್ಟ ಕುಸಿದಿದೆ. ಈ ಕಾರಣದಿಂದ ಪಾಲಿಕೆ ಶಾಲೆಗಳನ್ನು ಶಿಕ್ಷಣ ಇಲಾಖೆ ಅಧೀನಕ್ಕೆ ವಹಿಸಲಾಗಿದೆ. ಈ ಶಾಲೆಗಳಿಗೆ ಮೂಲಸೌಕರ್ಯ ಒದಗಿಸುವ ಕೆಲಸವನ್ನು ಮಾತ್ರ ಬಿಬಿಎಂಪಿ ಮಾಡಲಿದೆ ಎಂದು ಹೇಳಿದರು.</p>.<p>ಕನ್ನಡ ನಾಮಫಲಕ ಅಳವಡಿಸದವರ ವಿರುದ್ಧ ಕನ್ನಡ ಪರ ಸಂಘಟನೆಗಳು ಹೋರಾಟ ಆರಂಭಿಸುತ್ತಿರುವ ಕುರಿತು ಕೇಳಿದಾಗ, ‘ಕನ್ನಡ ಪರ ಸಂಘಟನೆಗಳು ಕಾನೂನು ಚೌಕಟ್ಟಿನಲ್ಲಿ ಹೋರಾಟ ಮಾಡಬೇಕು. ಹೋರಾಟದ ಹೆಸರಿನಲ್ಲಿ ಯಾರದ್ದೇ ಆಸ್ತಿಗಳಿಗೆ ಹಾನಿ ಮಾಡಬಾರದು’ ಎಂದರು.</p>.<p>ಮಳಿಗೆಗಳ ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡದಲ್ಲೇ ಇರಬೇಕು ಎಂಬ ಕಾನೂನು ಇದೆ. ಅದನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದರು.</p>.<p>ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಭೇಟಿ ಕುರಿತು ಕೇಳಿದಾಗ, ‘ನಗರಾಭಿವೃದ್ಧಿ ಇಲಾಖೆಯ ವ್ಯಾಪ್ತಿಯಲ್ಲಿ ಕೆಲವು ಯೋಜನಾ ಪ್ರಾಧಿಕಾರಗಳಿವೆ. ಅವುಗಳಿಗೆ ಅಧ್ಯಕ್ಷರು ಮತ್ತು ಸದಸ್ಯರ ನಾಮನಿರ್ದೇಶನ ಕುರಿತು ಚರ್ಚಿಸಿದ್ದೇವೆ. ಸಚಿವರನ್ನು ವೀಕ್ಷಕರನ್ನಾಗಿ ನಿಯೋಜಿಸಿರುವ ಲೋಕಸಭಾ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿಗಳ ಕುರಿತೂ ಚರ್ಚಿಸಿದ್ದೇವೆ’ ಎಂದರು.</p>.<p>ನಿಗಮ, ಮಂಡಳಿ ನಾಮನಿರ್ದೇಶನಕ್ಕೆ ಪಕ್ಷದ ವರಿಷ್ಠರಿಗೆ ಪಟ್ಟಿ ನೀಡಲಾಗಿದೆ. ಯಾವುದೇ ಕ್ಷಣದಲ್ಲಿ ನೇಮಕಾತಿ ಆದೇಶ ಹೊರಬೀಳಬಹುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>‘ಪರಿಹಾರಕ್ಕಾಗಿ ರೈತರು ಬರಗಾಲವನ್ನು ಬಯಸುತ್ತಾರೆ’ ಎಂಬ ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿಕೆ ಕುರಿತು ಪ್ರಶ್ನಿಸಿದಾಗ, ‘ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>