ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಗೆ ಕ್ರಮ
‘ಬಳ್ಳಾರಿಯಲ್ಲಿ ಕರ್ನಾಟಕ ಗಣಿ ಪರಿಸರ ಪುನಶ್ಚೇತನ ಅಭಿವೃದ್ಧಿ ನಿಗಮದ (ಕೆಎಂಇಆರ್ಸಿ) ಅನುದಾನದಲ್ಲಿ ₹300 ಕೋಟಿ ವೆಚ್ಚದಲ್ಲಿ ಕ್ಯಾನ್ಸರ್ ಚಿಕಿತ್ಸಾ ಆಸ್ಪತ್ರೆ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ ತಿಳಿಸಿದರು.
ಕಾಂಗ್ರೆಸ್ನ ಜೆ.ಎನ್. ಗಣೇಶ್ ಪ್ರಶ್ನೆಗೆ ಉತ್ತರಿಸಿದ ಅವರು, ‘ಕೆಎಂಇಆರ್ಸಿ ಅನುದಾನದಲ್ಲಿ ಕ್ಯಾನ್ಸರ್ ಚಿಕಿತ್ಸಾ ಆಸ್ಪತ್ರೆ ನಿರ್ಮಾಣಕ್ಕೆ ₹300 ಕೋಟಿ ಮೀಸಲಿಡಲಾಗಿದೆ ಎಂದು ಅಲ್ಲಿನ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. ಆ ಅನುದಾನ ಲಭ್ಯವಾದರೆ, ಕಿದ್ವಾಯಿ ಸ್ಮಾರಕ ಗಂಥಿ ಚಿಕಿತ್ಸಾ ಸಂಸ್ಥೆಯ ಘಟಕ ಆರಂಭಿಸಲಾಗುವುದು’ ಎಂದರು.