<p><strong>ಬೆಂಗಳೂರು</strong>: ಎನ್.ಆರ್.ಐ ಲೇಔಟ್ನಲ್ಲಿ ನಾಯಿಗಳತ್ತ ಕಲ್ಲು ಎಸೆದ ಆರೋಪದ ಮೇಲೆ ಮಹಿಳೆಗೆ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿದ್ದು, ಈ ಸಂಬಂಧ ರಾಮಮೂರ್ತಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಅಕ್ಟೋಬರ್ 23ರಂದು ಮಧ್ಯಾಹ್ನ ಎನ್.ಆರ್.ಐ ಲೇಔಟ್ನಲ್ಲಿ ಘಟನೆ ನಡೆದಿದೆ. ಮಹಿಳೆ ನೀಡಿದ ದೂರಿನ ಅನ್ವಯ ಆರೋಪಿ ವಿರುದ್ದ ಪ್ರಕರಣ ದಾಖಲಾಗಿದೆ. </p>.<p>‘ಮಹಿಳೆಯೊಬ್ಬರು ಸ್ನೇಹಿತರೊಂದಿಗೆ ಸ್ಕೂಟರ್ನಲ್ಲಿ ತೆರಳುತ್ತಿದ್ದರು. ಅದೇ ಸಂದರ್ಭದಲ್ಲಿ ಬೀದಿ ನಾಯಿಗಳು ಅವರನ್ನು ಅಟ್ಟಿಸಿಕೊಂಡು ಬಂದಿದ್ದವು. ಇದರಿಂದ ಬೆದರಿದ್ದ ಮಹಿಳೆ ಸ್ವಲ್ಪ ದೂರದಲ್ಲೇ ಸ್ಕೂಟರ್ ನಿಲ್ಲಿಸಿ, ನಾಯಿಗಳತ್ತ ಕಲ್ಲು ಎಸೆದಿದ್ದರು. ಆ ಸಂದರ್ಭದಲ್ಲಿ ಬಂದ ವ್ಯಕ್ತಿಯೊಬ್ಬರು ಸ್ಕೂಟರ್ ಕೀ ಕಸಿದುಕೊಂಡು, ‘ನಾಯಿಗಳಿಗೆ ಕಲ್ಲು ಹೊಡೆದಿದ್ದು ಯಾಕೆ’ ಎಂದು ಪ್ರಶ್ನಿಸಿ ಜಗಳ ತೆಗೆದಿದ್ದಾರೆ. ಅಲ್ಲದೇ, ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.</p>.<p>‘ಗಲಾಟೆ ವಿಕೋಪಕ್ಕೆ ತಿರುಗಿದ ಮೇಲೆ ಸ್ಥಳೀಯರು, ಇಬ್ಬರನ್ನೂ ಸಮಾಧಾನಪಡಿಸಿ ಸ್ಕೂಟರ್ ಕೀಯನ್ನು ಮಹಿಳೆಗೆ ವಾಪಸ್ ಕೊಡಿಸಿ ಕಳುಹಿಸಿದ್ದರು’ ಎಂದು ಮೂಲಗಳು ತಿಳಿಸಿವೆ.</p>.<p>‘ದೌರ್ಜನ್ಯ ಎಸಗಿದ ಆರೋಪಿಯ ಹೆಸರು, ಫೋಟೊ ಹಾಗೂ ವಿಳಾಸ ನೀಡಿದರೂ ಪೊಲೀಸರು ಎಫ್ಐಆರ್ನಲ್ಲಿ ಆರೋಪಿ ಹೆಸರು ನಮೂದಿಸಿಲ್ಲ. ಅಲ್ಲದೇ ಆತನನ್ನು ಕರೆಸಿ ವಿಚಾರಣೆ ನಡೆಸಿಲ್ಲ. ಕ್ರಮ ತೆಗೆದುಕೊಂಡಿಲ್ಲ’ ಎಂದು ದೂರು ನೀಡಿದ ಮಹಿಳೆ ಆಪಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಎನ್.ಆರ್.ಐ ಲೇಔಟ್ನಲ್ಲಿ ನಾಯಿಗಳತ್ತ ಕಲ್ಲು ಎಸೆದ ಆರೋಪದ ಮೇಲೆ ಮಹಿಳೆಗೆ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿದ್ದು, ಈ ಸಂಬಂಧ ರಾಮಮೂರ್ತಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಅಕ್ಟೋಬರ್ 23ರಂದು ಮಧ್ಯಾಹ್ನ ಎನ್.ಆರ್.ಐ ಲೇಔಟ್ನಲ್ಲಿ ಘಟನೆ ನಡೆದಿದೆ. ಮಹಿಳೆ ನೀಡಿದ ದೂರಿನ ಅನ್ವಯ ಆರೋಪಿ ವಿರುದ್ದ ಪ್ರಕರಣ ದಾಖಲಾಗಿದೆ. </p>.<p>‘ಮಹಿಳೆಯೊಬ್ಬರು ಸ್ನೇಹಿತರೊಂದಿಗೆ ಸ್ಕೂಟರ್ನಲ್ಲಿ ತೆರಳುತ್ತಿದ್ದರು. ಅದೇ ಸಂದರ್ಭದಲ್ಲಿ ಬೀದಿ ನಾಯಿಗಳು ಅವರನ್ನು ಅಟ್ಟಿಸಿಕೊಂಡು ಬಂದಿದ್ದವು. ಇದರಿಂದ ಬೆದರಿದ್ದ ಮಹಿಳೆ ಸ್ವಲ್ಪ ದೂರದಲ್ಲೇ ಸ್ಕೂಟರ್ ನಿಲ್ಲಿಸಿ, ನಾಯಿಗಳತ್ತ ಕಲ್ಲು ಎಸೆದಿದ್ದರು. ಆ ಸಂದರ್ಭದಲ್ಲಿ ಬಂದ ವ್ಯಕ್ತಿಯೊಬ್ಬರು ಸ್ಕೂಟರ್ ಕೀ ಕಸಿದುಕೊಂಡು, ‘ನಾಯಿಗಳಿಗೆ ಕಲ್ಲು ಹೊಡೆದಿದ್ದು ಯಾಕೆ’ ಎಂದು ಪ್ರಶ್ನಿಸಿ ಜಗಳ ತೆಗೆದಿದ್ದಾರೆ. ಅಲ್ಲದೇ, ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.</p>.<p>‘ಗಲಾಟೆ ವಿಕೋಪಕ್ಕೆ ತಿರುಗಿದ ಮೇಲೆ ಸ್ಥಳೀಯರು, ಇಬ್ಬರನ್ನೂ ಸಮಾಧಾನಪಡಿಸಿ ಸ್ಕೂಟರ್ ಕೀಯನ್ನು ಮಹಿಳೆಗೆ ವಾಪಸ್ ಕೊಡಿಸಿ ಕಳುಹಿಸಿದ್ದರು’ ಎಂದು ಮೂಲಗಳು ತಿಳಿಸಿವೆ.</p>.<p>‘ದೌರ್ಜನ್ಯ ಎಸಗಿದ ಆರೋಪಿಯ ಹೆಸರು, ಫೋಟೊ ಹಾಗೂ ವಿಳಾಸ ನೀಡಿದರೂ ಪೊಲೀಸರು ಎಫ್ಐಆರ್ನಲ್ಲಿ ಆರೋಪಿ ಹೆಸರು ನಮೂದಿಸಿಲ್ಲ. ಅಲ್ಲದೇ ಆತನನ್ನು ಕರೆಸಿ ವಿಚಾರಣೆ ನಡೆಸಿಲ್ಲ. ಕ್ರಮ ತೆಗೆದುಕೊಂಡಿಲ್ಲ’ ಎಂದು ದೂರು ನೀಡಿದ ಮಹಿಳೆ ಆಪಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>