<p><strong>ಬೆಂಗಳೂರು:</strong> ಮಹಿಳೆಯನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಮೃತದೇಹವನ್ನು ಕಸದ ರಾಶಿಗೆ ಎಸೆದು ಹೋಗಿರುವ ಘಟನೆ ಕೆಂಗೇರಿಯ ಮೈಲಸಂದ್ರದಲ್ಲಿ ನಡೆದಿದೆ. </p>.<p>ಮಹದೇಶ್ವರ ಬಡಾವಣೆಯ ನಿವಾಸಿ ಕೆಂಪಮ್ಮ (45) ಕೊಲೆಯಾದ ಮಹಿಳೆ.</p>.<p>ಹಳೇ ದ್ವೇಷದ ಕಾರಣಕ್ಕೆ ಆರೋಪಿಗಳು ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಕೆಂಗೇರಿ ಠಾಣೆಯ ಪೊಲೀಸರು ಆರೋಪಿಗಳ ಪತ್ತೆಗೆ ಹುಡುಕಾಟ ನಡೆಸುತ್ತಿದ್ದಾರೆ.</p>.<p>ಕೆಂಗೇರಿ ಮುಖ್ಯರಸ್ತೆಯ ಮೈಲಸಂದ್ರದ ಬಸ್ ನಿಲ್ದಾಣದ ಹಿಂಭಾಗದ ಕಸದ ರಾಶಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ.</p>.<p>‘ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಮೃತದೇಹವನ್ನು ರಸ್ತೆ ಪಕ್ಕದ ಕಸದ ರಾಶಿಯಲ್ಲಿ ಎಸೆದಿದ್ದಾರೆ. ಸೋಮವಾರ ಮುಂಜಾನೆ ರಸ್ತೆಯಲ್ಲಿ ಓಡಾಡುತ್ತಿದ್ದ ಸ್ಥಳೀಯರು ಕಸದ ರಾಶಿಯಲ್ಲಿ ಮೃತದೇಹ ಇರುವುದನ್ನು ಗಮನಿಸಿ, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು’ ಎಂದು ಮೂಲಗಳು ಹೇಳಿವೆ.</p>.<p>ತಲೆಗೆ ಬಲವಾದ ಪೆಟ್ಟು: ‘ಮಹಿಳೆಯ ತಲೆಗೆ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿದೆ. ಬೇರೆಡೆ ಕೊಲೆ ಮಾಡಿ, ಮೃತದೇಹವನ್ನು ಮೈಲಸಂದ್ರದ ಬಸ್ ನಿಲ್ದಾಣದ ಹಿಂಭಾಗಕ್ಕೆ ತಂದು ಆರೋಪಿಗಳು ಎಸೆದು ಹೋಗಿದ್ದಾರೆ’ ಎಂದು ಪೊಲೀಸರು ಹೇಳಿದರು.</p>.<p>‘ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲಿಸಿದರು. ಕೃತ್ಯ ನಡೆದ ಸ್ಥಳದ ಸುತ್ತಮುತ್ತಲ ಪ್ರದೇಶಗಳಲ್ಲಿ ಅಳವಡಿಸಿರುವ ಸಿ.ಸಿ.ಟಿ.ವಿ ಕ್ಯಾಮೆರಾಗಳ ದೃಶ್ಯಾವಳಿ ಪರಿಶೀಲನೆ ನಡೆಸಲಾಗಿದೆ. ಆರೋಪಿಗಳ ಪತ್ತೆಗೆ ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದೆ’ ಎಂದು ಮೂಲಗಳು ಹೇಳಿವೆ.</p>.<p>‘ಕೊಲೆಯಾದ ಮಹಿಳೆಯ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ. ಕೃತ್ಯ ಎಸಗಲು ಕಾರಣ ಏನು ಎಂಬುದು ಪತ್ತೆಯಾಗಿಲ್ಲ. ಹಳೆಯ ದ್ವೇಷ ಅಥವಾ ಹಣಕಾಸಿನ ವಿಚಾರಕ್ಕೆ ಕೊಲೆ ನಡೆದಿದೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಹಿಳೆಯನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಮೃತದೇಹವನ್ನು ಕಸದ ರಾಶಿಗೆ ಎಸೆದು ಹೋಗಿರುವ ಘಟನೆ ಕೆಂಗೇರಿಯ ಮೈಲಸಂದ್ರದಲ್ಲಿ ನಡೆದಿದೆ. </p>.<p>ಮಹದೇಶ್ವರ ಬಡಾವಣೆಯ ನಿವಾಸಿ ಕೆಂಪಮ್ಮ (45) ಕೊಲೆಯಾದ ಮಹಿಳೆ.</p>.<p>ಹಳೇ ದ್ವೇಷದ ಕಾರಣಕ್ಕೆ ಆರೋಪಿಗಳು ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಕೆಂಗೇರಿ ಠಾಣೆಯ ಪೊಲೀಸರು ಆರೋಪಿಗಳ ಪತ್ತೆಗೆ ಹುಡುಕಾಟ ನಡೆಸುತ್ತಿದ್ದಾರೆ.</p>.<p>ಕೆಂಗೇರಿ ಮುಖ್ಯರಸ್ತೆಯ ಮೈಲಸಂದ್ರದ ಬಸ್ ನಿಲ್ದಾಣದ ಹಿಂಭಾಗದ ಕಸದ ರಾಶಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ.</p>.<p>‘ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಮೃತದೇಹವನ್ನು ರಸ್ತೆ ಪಕ್ಕದ ಕಸದ ರಾಶಿಯಲ್ಲಿ ಎಸೆದಿದ್ದಾರೆ. ಸೋಮವಾರ ಮುಂಜಾನೆ ರಸ್ತೆಯಲ್ಲಿ ಓಡಾಡುತ್ತಿದ್ದ ಸ್ಥಳೀಯರು ಕಸದ ರಾಶಿಯಲ್ಲಿ ಮೃತದೇಹ ಇರುವುದನ್ನು ಗಮನಿಸಿ, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು’ ಎಂದು ಮೂಲಗಳು ಹೇಳಿವೆ.</p>.<p>ತಲೆಗೆ ಬಲವಾದ ಪೆಟ್ಟು: ‘ಮಹಿಳೆಯ ತಲೆಗೆ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿದೆ. ಬೇರೆಡೆ ಕೊಲೆ ಮಾಡಿ, ಮೃತದೇಹವನ್ನು ಮೈಲಸಂದ್ರದ ಬಸ್ ನಿಲ್ದಾಣದ ಹಿಂಭಾಗಕ್ಕೆ ತಂದು ಆರೋಪಿಗಳು ಎಸೆದು ಹೋಗಿದ್ದಾರೆ’ ಎಂದು ಪೊಲೀಸರು ಹೇಳಿದರು.</p>.<p>‘ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲಿಸಿದರು. ಕೃತ್ಯ ನಡೆದ ಸ್ಥಳದ ಸುತ್ತಮುತ್ತಲ ಪ್ರದೇಶಗಳಲ್ಲಿ ಅಳವಡಿಸಿರುವ ಸಿ.ಸಿ.ಟಿ.ವಿ ಕ್ಯಾಮೆರಾಗಳ ದೃಶ್ಯಾವಳಿ ಪರಿಶೀಲನೆ ನಡೆಸಲಾಗಿದೆ. ಆರೋಪಿಗಳ ಪತ್ತೆಗೆ ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದೆ’ ಎಂದು ಮೂಲಗಳು ಹೇಳಿವೆ.</p>.<p>‘ಕೊಲೆಯಾದ ಮಹಿಳೆಯ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ. ಕೃತ್ಯ ಎಸಗಲು ಕಾರಣ ಏನು ಎಂಬುದು ಪತ್ತೆಯಾಗಿಲ್ಲ. ಹಳೆಯ ದ್ವೇಷ ಅಥವಾ ಹಣಕಾಸಿನ ವಿಚಾರಕ್ಕೆ ಕೊಲೆ ನಡೆದಿದೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>