<p><strong>ಬೆಂಗಳೂರು</strong>: ತನ್ನ ಜೊತೆ ಸಲುಗೆಯಿಂದ ಇರಲು ಒಪ್ಪಲಿಲ್ಲವೆಂಬ ಕಾರಣಕ್ಕೆ ಪರ್ವೀನ್ (33) ಅವರನ್ನು ಕೊಲೆ ಮಾಡಿದ್ದ ಆರೋಪದಡಿ ಸಂಬಂಧಿ ಮೊಹಮ್ಮದ್ ಜುನೈದ್ (26) ಅವರನ್ನು ಜಗಜೀವನ್ರಾಮ್ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಸ್ಥಳೀಯ ನಿವಾಸಿ ಪರ್ವೀನ್ ಅವರನ್ನು ಭಾನುವಾರ (ಡಿ. 10) ಸಂಜೆ ಕೊಲೆ ಮಾಡಲಾಗಿತ್ತು. ಕೃತ್ಯದ ನಂತರ ಪರಾರಿಯಾಗಿದ್ದ ಜುನೈದ್ನನ್ನು ಸೋಮವಾರ ಸೆರೆ ಹಿಡಿಯಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>ಪತ್ನಿಯಿಂದ ದೂರವಾಗಿದ್ದ ಆರೋಪಿ: ‘ವಿವಾಹಿತನಾದ ಜುನೈದ್, ಪತ್ನಿ ಜೊತೆ ಜಗಳ ಮಾಡುತ್ತಿದ್ದ. ಇವರಿಬ್ಬರ ಜಗಳ ಠಾಣೆ ಮೆಟ್ಟಿಲೇರಿತ್ತು. ಪೊಲೀಸರು ಇಬ್ಬರಿಗೂ ಬುದ್ದಿವಾದ ಹೇಳಿದ್ದರು. ನಂತರ, ಪತ್ನಿಯಿಂದ ಜುನೈದ್ ದೂರವಾಗಿದ್ದ. ಸಂಬಂಧಿಯಾಗಿದ್ದ ಪರ್ವೀನ್ ಜೊತೆ ಮಾತನಾಡಲಾರಂಭಿಸಿದ್ದ’ ಎಂದು ಮೂಲಗಳು ತಿಳಿಸಿವೆ.</p>.<p>‘ವಿವಾಹಿತರಾಗಿದ್ದ ಪರ್ವೀನ್, ಸಂಬಂಧಿ ಎಂಬ ಕಾರಣಕ್ಕೆ ಮಾತನಾಡುತ್ತಿದ್ದರು. ಅದನ್ನೇ ದುರುಪಯೋಗಪಡಿಸಿಕೊಂಡಿದ್ದ ಜುನೈದ್, ತನ್ನೊಂದಿಗೆ ಸಲುಗೆಯಿಂದ ಇರುವಂತೆ ಒತ್ತಾಯಿಸಲಾರಂಭಿಸಿದ್ದ. ಅದನ್ನು ನಿರಾಕರಿಸಿದ್ದ ಪರ್ವೀನ್, ಆತನ ಜೊತೆ ಮಾತನಾಡುವುದನ್ನು ನಿಲ್ಲಿಸಿದ್ದರು’ ಎಂದು ಮೂಲಗಳು ಹೇಳಿವೆ.</p>.<p>‘ಸಿಟ್ಟಾಗಿದ್ದ ಆರೋಪಿ, ಮನೆಗೆ ನುಗ್ಗಿ ಚಾಕುವಿನಿಂದ ಇರಿದು ಪರ್ವಿನ್ ಅವರನ್ನು ಕೊಂದಿದ್ದ. ಮೃತದೇಹ ನೋಡಿದ್ದ ಸ್ಥಳೀಯರು ಠಾಣೆಗೆ ಮಾಹಿತಿ ನೀಡಿದ್ದರು. ವಿಶೇಷ ತಂಡ ರಚಿಸಿ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಸೆರೆ ಹಿಡಿಯಲಾಗಿದೆ’ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ತನ್ನ ಜೊತೆ ಸಲುಗೆಯಿಂದ ಇರಲು ಒಪ್ಪಲಿಲ್ಲವೆಂಬ ಕಾರಣಕ್ಕೆ ಪರ್ವೀನ್ (33) ಅವರನ್ನು ಕೊಲೆ ಮಾಡಿದ್ದ ಆರೋಪದಡಿ ಸಂಬಂಧಿ ಮೊಹಮ್ಮದ್ ಜುನೈದ್ (26) ಅವರನ್ನು ಜಗಜೀವನ್ರಾಮ್ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಸ್ಥಳೀಯ ನಿವಾಸಿ ಪರ್ವೀನ್ ಅವರನ್ನು ಭಾನುವಾರ (ಡಿ. 10) ಸಂಜೆ ಕೊಲೆ ಮಾಡಲಾಗಿತ್ತು. ಕೃತ್ಯದ ನಂತರ ಪರಾರಿಯಾಗಿದ್ದ ಜುನೈದ್ನನ್ನು ಸೋಮವಾರ ಸೆರೆ ಹಿಡಿಯಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>ಪತ್ನಿಯಿಂದ ದೂರವಾಗಿದ್ದ ಆರೋಪಿ: ‘ವಿವಾಹಿತನಾದ ಜುನೈದ್, ಪತ್ನಿ ಜೊತೆ ಜಗಳ ಮಾಡುತ್ತಿದ್ದ. ಇವರಿಬ್ಬರ ಜಗಳ ಠಾಣೆ ಮೆಟ್ಟಿಲೇರಿತ್ತು. ಪೊಲೀಸರು ಇಬ್ಬರಿಗೂ ಬುದ್ದಿವಾದ ಹೇಳಿದ್ದರು. ನಂತರ, ಪತ್ನಿಯಿಂದ ಜುನೈದ್ ದೂರವಾಗಿದ್ದ. ಸಂಬಂಧಿಯಾಗಿದ್ದ ಪರ್ವೀನ್ ಜೊತೆ ಮಾತನಾಡಲಾರಂಭಿಸಿದ್ದ’ ಎಂದು ಮೂಲಗಳು ತಿಳಿಸಿವೆ.</p>.<p>‘ವಿವಾಹಿತರಾಗಿದ್ದ ಪರ್ವೀನ್, ಸಂಬಂಧಿ ಎಂಬ ಕಾರಣಕ್ಕೆ ಮಾತನಾಡುತ್ತಿದ್ದರು. ಅದನ್ನೇ ದುರುಪಯೋಗಪಡಿಸಿಕೊಂಡಿದ್ದ ಜುನೈದ್, ತನ್ನೊಂದಿಗೆ ಸಲುಗೆಯಿಂದ ಇರುವಂತೆ ಒತ್ತಾಯಿಸಲಾರಂಭಿಸಿದ್ದ. ಅದನ್ನು ನಿರಾಕರಿಸಿದ್ದ ಪರ್ವೀನ್, ಆತನ ಜೊತೆ ಮಾತನಾಡುವುದನ್ನು ನಿಲ್ಲಿಸಿದ್ದರು’ ಎಂದು ಮೂಲಗಳು ಹೇಳಿವೆ.</p>.<p>‘ಸಿಟ್ಟಾಗಿದ್ದ ಆರೋಪಿ, ಮನೆಗೆ ನುಗ್ಗಿ ಚಾಕುವಿನಿಂದ ಇರಿದು ಪರ್ವಿನ್ ಅವರನ್ನು ಕೊಂದಿದ್ದ. ಮೃತದೇಹ ನೋಡಿದ್ದ ಸ್ಥಳೀಯರು ಠಾಣೆಗೆ ಮಾಹಿತಿ ನೀಡಿದ್ದರು. ವಿಶೇಷ ತಂಡ ರಚಿಸಿ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಸೆರೆ ಹಿಡಿಯಲಾಗಿದೆ’ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>