<p><strong>ಪೀಣ್ಯ ದಾಸರಹಳ್ಳಿ:</strong> ಉತ್ತರ ತಾಲ್ಲೂಕಿನ ಕುದುರೆಗೆರೆ ಕಾಲೊನಿಯಲ್ಲಿ ಹಣಕಾಸಿನ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಮಹಿಳೆಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಲಾಗಿದೆ. </p>.<p>ದಾಕ್ಷಾಯಿಣಿ (55) ಕೊಲೆಯಾದ ಮಹಿಳೆ.</p>.<p>ಶಾಲೆಯಿಂದ ಮೊಮ್ಮಗನನ್ನು ಮನೆಗೆ ಕರೆದುಕೊಂಡು ಬರುವಾಗ ಹೊಂಚು ಹಾಕಿದ್ದ ಆರೋಪಿ, ಕೊಡಲಿಯಿಂದ ಮೂರು ಬಾರಿ ತಲೆಗೆ ಹೊಡೆದು ಪರಾರಿಯಾಗಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡಿ, ಪ್ರಾಣ ಬಿಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಸ್ಥಳೀಯರು ಸ್ಥಳಕ್ಕೆ ಭೇಟಿ ನೀಡುವ ಮುನ್ನ ಆರೋಪಿ ಬೈಕ್ನಲ್ಲಿ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿದ ಮಾದನಾಯಕನಹಳ್ಳಿ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಮುರಳೀಧರ್ ನೇತೃತ್ವದ ತಂಡ ಪರಿಶೀಲನೆ ನಡೆಸಿದೆ.</p>.<p>ಸಂಬಂಧಿಯೇ ದಾಕ್ಷಾಯಿಣಿ ಅವರನ್ನು ಕೊಲೆ ಮಾಡಿ ಪರಾರಿ ಆಗಿರುವ ಶಂಕೆಯಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ:</strong> ಉತ್ತರ ತಾಲ್ಲೂಕಿನ ಕುದುರೆಗೆರೆ ಕಾಲೊನಿಯಲ್ಲಿ ಹಣಕಾಸಿನ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಮಹಿಳೆಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಲಾಗಿದೆ. </p>.<p>ದಾಕ್ಷಾಯಿಣಿ (55) ಕೊಲೆಯಾದ ಮಹಿಳೆ.</p>.<p>ಶಾಲೆಯಿಂದ ಮೊಮ್ಮಗನನ್ನು ಮನೆಗೆ ಕರೆದುಕೊಂಡು ಬರುವಾಗ ಹೊಂಚು ಹಾಕಿದ್ದ ಆರೋಪಿ, ಕೊಡಲಿಯಿಂದ ಮೂರು ಬಾರಿ ತಲೆಗೆ ಹೊಡೆದು ಪರಾರಿಯಾಗಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡಿ, ಪ್ರಾಣ ಬಿಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಸ್ಥಳೀಯರು ಸ್ಥಳಕ್ಕೆ ಭೇಟಿ ನೀಡುವ ಮುನ್ನ ಆರೋಪಿ ಬೈಕ್ನಲ್ಲಿ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿದ ಮಾದನಾಯಕನಹಳ್ಳಿ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಮುರಳೀಧರ್ ನೇತೃತ್ವದ ತಂಡ ಪರಿಶೀಲನೆ ನಡೆಸಿದೆ.</p>.<p>ಸಂಬಂಧಿಯೇ ದಾಕ್ಷಾಯಿಣಿ ಅವರನ್ನು ಕೊಲೆ ಮಾಡಿ ಪರಾರಿ ಆಗಿರುವ ಶಂಕೆಯಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>