<p><strong>ಬೆಂಗಳೂರು:</strong>ರಾಜ್ಯದಲ್ಲಿ ಮದ್ಯ ನಿಷೇಧ ಮಾಡಬೇಕು ಎಂದು ಒತ್ತಾಯಿಸಿ ಮಹಿಳೆಯರು ರೈಲು ನಿಲ್ದಾಣದಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ.</p>.<p>ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲು ರಾಜ್ಯದ ವಿವಿಧ ಜಿಲ್ಲೆಗಳಿಂದ ಮಹಿಳೆಯರು ನಗರದ ರೈಲು ನಿಲ್ದಾಣಕ್ಕೆ ಬಂದಿದ್ದಾರೆ.</p>.<p>ಅಲ್ಲಿಂದ ಅವರನ್ನು ಸ್ವಾತಂತ್ರ ಉದ್ಯಾನವನಕ್ಕೆ ಹೋಗಲು ಪೊಲೀಸರು ಅಡ್ಡಿಪಡಿಸುತ್ತಿದ್ದಾರೆ. ಮೆರವಣಿಗೆ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಹೇಳುತ್ತಿದ್ದಾರೆ. ಇದರಿಂದಾಗಿ ನಿಲ್ದಾಣದಲ್ಲಿ ಕುಳಿತು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.</p>.<p>‘ಪ್ರತಿಭಟನೆ ನಡೆಸುವುದಾಗಿ ತಿಂಗಳ ಮುಂಚೆಯೇ ಪೊಲೀಸರಿಗೆ ಅರ್ಜಿ ಸಲ್ಲಿಸಿ, ಅನುಮತಿಯನ್ನು ಪಡೆಯಲಾಗಿದೆ. ಆದರೆ ಪ್ರತಿಭಟನಾಕಾರರ ಸಂಖ್ಯೆ ಹೆಚ್ಚಿದೆ ಎಂಬ ಕಾರಣಕ್ಕೆ ಪೊಲೀಸರು ಮೆರವಣಿಗೆಗೆ ಅವಕಾಶ ನೀಡುತ್ತಿಲ್ಲ. ಈ ವರ್ತನೆ ಖಂಡನೀಯ’ಎಂದು ಮುಖಂಡರು ಆರೋಪಿಸಿದ್ದಾರೆ.</p>.<p>‘ರಾಜ್ಯದಲ್ಲಿ ಮದ್ಯಮಾರಾಟ ನಿಷೇಧ ಮಾಡಬೇಕು. ಹಂತಹಂತವಾಗಿ ಮಾಡುವುದಾದರೆ ಮಾಹಿತಿ ನೀಡಬೇಕು. ಪ್ರತಿಗ್ರಾಮದಲ್ಲಿ ಸಮಿತಿ ರಚಿಸಬೇಕು ಅದರಲ್ಲಿ ಮಹಿಳಾ ಸದಸ್ಯರ ಸಂಖ್ಯೆ ಹೆಚ್ಚಿರಬೇಕು. ಗ್ರಾಮದಲ್ಲಿ ಮದ್ಯ ಮಾರಾಟ ನಿಷೇಧಿಸುವ, ಅಕ್ರಮ ಮದ್ಯ ಮಾರಾಟ ತಡೆಯುವ ಅಧಿಕಾರ ಸಮಿತಿಗೆ ಕೊಡಬೇಕು’ಎಂದು ಪ್ರತಿಭಟನಾನಿರತರ ಮಹಿಳೆಯರು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ರಾಜ್ಯದಲ್ಲಿ ಮದ್ಯ ನಿಷೇಧ ಮಾಡಬೇಕು ಎಂದು ಒತ್ತಾಯಿಸಿ ಮಹಿಳೆಯರು ರೈಲು ನಿಲ್ದಾಣದಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ.</p>.<p>ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲು ರಾಜ್ಯದ ವಿವಿಧ ಜಿಲ್ಲೆಗಳಿಂದ ಮಹಿಳೆಯರು ನಗರದ ರೈಲು ನಿಲ್ದಾಣಕ್ಕೆ ಬಂದಿದ್ದಾರೆ.</p>.<p>ಅಲ್ಲಿಂದ ಅವರನ್ನು ಸ್ವಾತಂತ್ರ ಉದ್ಯಾನವನಕ್ಕೆ ಹೋಗಲು ಪೊಲೀಸರು ಅಡ್ಡಿಪಡಿಸುತ್ತಿದ್ದಾರೆ. ಮೆರವಣಿಗೆ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಹೇಳುತ್ತಿದ್ದಾರೆ. ಇದರಿಂದಾಗಿ ನಿಲ್ದಾಣದಲ್ಲಿ ಕುಳಿತು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.</p>.<p>‘ಪ್ರತಿಭಟನೆ ನಡೆಸುವುದಾಗಿ ತಿಂಗಳ ಮುಂಚೆಯೇ ಪೊಲೀಸರಿಗೆ ಅರ್ಜಿ ಸಲ್ಲಿಸಿ, ಅನುಮತಿಯನ್ನು ಪಡೆಯಲಾಗಿದೆ. ಆದರೆ ಪ್ರತಿಭಟನಾಕಾರರ ಸಂಖ್ಯೆ ಹೆಚ್ಚಿದೆ ಎಂಬ ಕಾರಣಕ್ಕೆ ಪೊಲೀಸರು ಮೆರವಣಿಗೆಗೆ ಅವಕಾಶ ನೀಡುತ್ತಿಲ್ಲ. ಈ ವರ್ತನೆ ಖಂಡನೀಯ’ಎಂದು ಮುಖಂಡರು ಆರೋಪಿಸಿದ್ದಾರೆ.</p>.<p>‘ರಾಜ್ಯದಲ್ಲಿ ಮದ್ಯಮಾರಾಟ ನಿಷೇಧ ಮಾಡಬೇಕು. ಹಂತಹಂತವಾಗಿ ಮಾಡುವುದಾದರೆ ಮಾಹಿತಿ ನೀಡಬೇಕು. ಪ್ರತಿಗ್ರಾಮದಲ್ಲಿ ಸಮಿತಿ ರಚಿಸಬೇಕು ಅದರಲ್ಲಿ ಮಹಿಳಾ ಸದಸ್ಯರ ಸಂಖ್ಯೆ ಹೆಚ್ಚಿರಬೇಕು. ಗ್ರಾಮದಲ್ಲಿ ಮದ್ಯ ಮಾರಾಟ ನಿಷೇಧಿಸುವ, ಅಕ್ರಮ ಮದ್ಯ ಮಾರಾಟ ತಡೆಯುವ ಅಧಿಕಾರ ಸಮಿತಿಗೆ ಕೊಡಬೇಕು’ಎಂದು ಪ್ರತಿಭಟನಾನಿರತರ ಮಹಿಳೆಯರು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>