ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ವಾರಂಟೈನ್‌ಗೆ ನಿರಾಕರಿಸಿ ಕರ್ತವ್ಯಕ್ಕೆ ಅಡ್ಡಿ ಆರೋಪ: ಪ್ರಕರಣ ದಾಖಲು

Last Updated 27 ಮೇ 2020, 19:08 IST
ಅಕ್ಷರ ಗಾತ್ರ

ಬೆಂಗಳೂರು: ನಗರಕ್ಕೆ ಹೊರರಾಜ್ಯದಿಂದ ಬಂದು ಕ್ವಾರಂಟೈನ್ ಆಗಲು ನಿರಾಕರಿಸಿ, ಪೊಲೀಸರ ಮೇಲೆಯೇ ಕೈ ಮಾಡಲು ಮುಂದಾದ ಯುವತಿ ವಿರುದ್ಧ ನಗರ ರೈಲು ನಿಲ್ದಾಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಂಗಳವಾರ (ಮೇ 26) ಸಂಜೆ 7.30ಕ್ಕೆ ದೆಹಲಿಯಿಂದ ವಿಶೇಷ ಸೂಪರ್ ಫಾಸ್ಟ್ ರೈಲಿನಲ್ಲಿ ನಗರಕ್ಕೆ ಬಂದಹರಿಯಾಣದ ಟ್ವಿಂಕಲ್ ರಾವಲ್ (25) ಕ್ವಾರಂಟೈನ್ ಆಗಲು ನಿರಾಕರಿಸಿದ್ದರು. ಬಿಬಿಎಂಪಿ ಸಿಬ್ಬಂದಿ ಜತೆ ವಾಗ್ವಾದ ನಡೆಸಿದ್ದರು. ಕರ್ತವ್ಯನಿರತ ಪೊಲೀಸರು ಮತ್ತು ಸಿಬ್ಬಂದಿ ಮೇಲೆಯೂ ಕೈ ಮಾಡಲು ಮುಂದಾಗಿದ್ದರು.

ಈ ಕುರಿತು ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಜಂಟಿ ಆಯುಕ್ತ ಚಿದಾನಂದ ದೂರು ನೀಡಿದ್ದರು. ಹೀಗಾಗಿ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಉಲ್ಲಂಘನೆ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT