<p><strong>ಬೆಂಗಳೂರು: </strong>‘ಮಹಿಳೆಯರ ದಣಿವರಿಯದ ದುಡಿಮೆಗೆ ಪ್ರೋತ್ಸಾಹ ಅಗತ್ಯವಾಗಿದ್ದು, ಆ ನಿಟ್ಟಿನಲ್ಲಿ ಸಮಗ್ರಾಭಿವೃದ್ಧಿ ಸಂಸ್ಥೆ ಸಕ್ರಿಯವಾಗಿ ಕೆಲಸ ಮಾಡುತ್ತಿದೆ’ ಎಂದು ಸಂಸ್ಥೆಯ ಸಂಸ್ಥಾಪಕಿ ಡಾ.ಸ್ನೇಹಾ ರಾಕೇಶ್ ತಿಳಿಸಿದರು.</p>.<p>ಅಂತರರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಸಮಗ್ರಾಭಿವೃದ್ಧಿ ಸಂಸ್ಥೆಯು ಆರ್ವಿಜಿ ಫೌಂಡೇಷನ್ ಹಾಗೂ ಅಕರ್ಮ್ಯಾಕ್ಸ್ ಸಂಸ್ಥೆಗಳ ಸಹಯೋಗದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ‘100 ಮಹಿಳಾ ಸಾಧಕಿಯರಿಗೆ ಪ್ರಶಸ್ತಿ ಪ್ರದಾನ’ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಕೊರೊನಾ ಸಂದರ್ಭದಲ್ಲಿ ಮಹಿಳಾ ಪೊಲೀಸರು, ಆಶಾ ಕಾರ್ಯಕರ್ತೆಯರು, ಪೌರ ಕಾರ್ಮಿಕರು ಹಾಗೂ ವೈದ್ಯರು ಜೀವದ ಹಂಗು ತೊರೆದು ಕೆಲಸ ಮಾಡಿದ್ದಾರೆ. ಇತರ ಕ್ಷೇತ್ರಗಳಲ್ಲೂ ಮಹಿಳೆಯರು ಛಾಪು ಮೂಡಿಸುತ್ತಿದ್ದಾರೆ. ನಮ್ಮ ಸಂಸ್ಥೆಯು ಅಂತಹವರನ್ನು ಗುರುತಿಸಿ ಗೌರವಿಸುವ ಕೆಲಸ ಮಾಡುತ್ತಿದೆ’ ಎಂದರು.</p>.<p>ವೈದ್ಯೆಯರಾದ ಡಾ.ದಿಶಾ ಎಸ್.ಕುಮಾರ್, ಡಾ.ಪದ್ಮಾವತಿ, ಡಾ.ಮಂಜುಳಾ, ಪೊಲೀಸ್ ಸಿಬ್ಬಂದಿ ಶಿಲ್ಪಾ, ನಟಿ ಸಂಚಿತಾ ಹೆಗ್ಡೆ, ಗಾಯಕಿಯರಾದ ಗಾನವಿ, ಹರ್ಷ ರಂಜನಿ, ಶಶಿಕಲಾ ಅವರು ಪ್ರಶಸ್ತಿ ಸಿಕ್ಕಿದ್ದಕ್ಕೆ ಖುಷಿ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಮಹಿಳೆಯರ ದಣಿವರಿಯದ ದುಡಿಮೆಗೆ ಪ್ರೋತ್ಸಾಹ ಅಗತ್ಯವಾಗಿದ್ದು, ಆ ನಿಟ್ಟಿನಲ್ಲಿ ಸಮಗ್ರಾಭಿವೃದ್ಧಿ ಸಂಸ್ಥೆ ಸಕ್ರಿಯವಾಗಿ ಕೆಲಸ ಮಾಡುತ್ತಿದೆ’ ಎಂದು ಸಂಸ್ಥೆಯ ಸಂಸ್ಥಾಪಕಿ ಡಾ.ಸ್ನೇಹಾ ರಾಕೇಶ್ ತಿಳಿಸಿದರು.</p>.<p>ಅಂತರರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಸಮಗ್ರಾಭಿವೃದ್ಧಿ ಸಂಸ್ಥೆಯು ಆರ್ವಿಜಿ ಫೌಂಡೇಷನ್ ಹಾಗೂ ಅಕರ್ಮ್ಯಾಕ್ಸ್ ಸಂಸ್ಥೆಗಳ ಸಹಯೋಗದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ‘100 ಮಹಿಳಾ ಸಾಧಕಿಯರಿಗೆ ಪ್ರಶಸ್ತಿ ಪ್ರದಾನ’ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಕೊರೊನಾ ಸಂದರ್ಭದಲ್ಲಿ ಮಹಿಳಾ ಪೊಲೀಸರು, ಆಶಾ ಕಾರ್ಯಕರ್ತೆಯರು, ಪೌರ ಕಾರ್ಮಿಕರು ಹಾಗೂ ವೈದ್ಯರು ಜೀವದ ಹಂಗು ತೊರೆದು ಕೆಲಸ ಮಾಡಿದ್ದಾರೆ. ಇತರ ಕ್ಷೇತ್ರಗಳಲ್ಲೂ ಮಹಿಳೆಯರು ಛಾಪು ಮೂಡಿಸುತ್ತಿದ್ದಾರೆ. ನಮ್ಮ ಸಂಸ್ಥೆಯು ಅಂತಹವರನ್ನು ಗುರುತಿಸಿ ಗೌರವಿಸುವ ಕೆಲಸ ಮಾಡುತ್ತಿದೆ’ ಎಂದರು.</p>.<p>ವೈದ್ಯೆಯರಾದ ಡಾ.ದಿಶಾ ಎಸ್.ಕುಮಾರ್, ಡಾ.ಪದ್ಮಾವತಿ, ಡಾ.ಮಂಜುಳಾ, ಪೊಲೀಸ್ ಸಿಬ್ಬಂದಿ ಶಿಲ್ಪಾ, ನಟಿ ಸಂಚಿತಾ ಹೆಗ್ಡೆ, ಗಾಯಕಿಯರಾದ ಗಾನವಿ, ಹರ್ಷ ರಂಜನಿ, ಶಶಿಕಲಾ ಅವರು ಪ್ರಶಸ್ತಿ ಸಿಕ್ಕಿದ್ದಕ್ಕೆ ಖುಷಿ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>