ಬೆಂಗಳೂರು: ‘ಹೆಣ್ಣು ತ್ಯಾಗಮಯಿ. ತಾಯಿಯಾಗಿ, ಸಹೋದರಿಯಾಗಿ ಕುಟುಂಬದ ನೊಗ ಹೊರುತ್ತಾಳೆ. ಎಂತಹುದೇ ಕಷ್ಟ ಬಂದರೂ ಅದನ್ನು ಸಹಿಸಿಕೊಂಡು ಮನೆತನದ ಏಳ್ಗೆಗೆ ದುಡಿಯುತ್ತಾಳೆ. ಉತ್ತಮ ಸಮಾಜ ನಿರ್ಮಾಣದಲ್ಲಿ ಆಕೆಯ ಕೊಡುಗೆ ಅನನ್ಯ’ ಎಂದು ಬಿಜೆಪಿ ಯುವ ಮುಖಂಡ ಅರುಣ್ ಸೋಮಣ್ಣ ಹೇಳಿದರು.
ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಮಾರುತಿ ಮಂದಿರ ವಾರ್ಡ್ನ ಕಚೇರಿಯಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
‘ಅಂತರರಾಷ್ಟ್ರೀಯ ದಿನ ಆಚರಿಸುವ ಮೂಲಕ ಮಹಿಳೆಯರ ಸೇವೆಯನ್ನು ಸ್ಮರಿಸಲಾಗುತ್ತದೆ’ ಎಂದರು.