<p><strong>ಬೆಂಗಳೂರು</strong>: ಉದ್ಯಮ ಒಂದು ಕಾಲಕ್ಕೆ ಮಹಿಳೆಯರಿಗೆ ಸಾಧ್ಯವಾಗದ ಕನಸು ಆಗಿತ್ತು. ಈಗ ಮಹಿಳೆಯರ ಮನಸ್ಥಿತಿ ಬದಲಾಗಿದೆ. ಅವರು ಮನೆಗೆ ಸೀಮಿತವಾಗದೇ ಕೈಗಾರಿಕೋದ್ಯಮಿಗಳಾಗುತ್ತಿದ್ದಾರೆ ಎಂದು ಕೈಗಾರಿಕಾ ಪಾರ್ಕ್ ಮುಖ್ಯಸ್ಥೆ ರೇವತಿ ರಾಜು ಹೇಳಿದರು.</p>.<p>ಗೌರಿಬಿದನೂರಿನಲ್ಲಿ ಎಫ್ಎಲ್ಒ ಕೈಗಾರಿಕಾ ಪಾರ್ಕ್ ಉದ್ಘಾಟನೆಯ ಬಳಿಕ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. </p>.<p>ಮಹಿಳೆಯರಲ್ಲಿ ಉಂಟಾಗಿರುವ ಆಂತರಿಕ ಪರಿವರ್ತನೆಯನ್ನು ಕೈಗಾರಿಕಾ ಪಾರ್ಕ್ ಸೂಚಿಸುತ್ತದೆ. ಉದ್ಯಮದ ಹಾದಿಯಲ್ಲಿ ಮಹಿಳೆಯರು ದಾಪುಗಾಲು ಇಡುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂದರು.</p>.<p>ಬೆಂಗಳೂರಿನಲ್ಲಿ ಕೈಗಾರಿಕಾ ವಲಯಗಳು ತುಂಬಿ ಹೋಗಿವೆ. ಜನದಟ್ಟಣೆ, ವಾಹನದಟ್ಟಣೆ ಹೆಚ್ಚಾಗಿದೆ. ಈ ಸಮಸ್ಯೆಯಿಂದ ಪಾರಾಗಲು, ದೀರ್ಘಕಾಲೀನ ಬೆಳವಣಿಗೆಗೆ ಪೂರಕವಾಗಿರುವಂತೆ ಮಾಡಲು ಗೌರಿಬಿದನೂರಿನಲ್ಲಿ ಕೈಗಾರಿಕಾ ಪಾರ್ಕ್ ನಿರ್ಮಿಸಲಾಗಿದೆ ಎಂದು ವಿವರಿಸಿದರು.</p>.<p>ಮೈಸೂರಿನ ರಾಜಮನೆತನದ ಕಾಮಾಕ್ಷಿದೇವಿ ಒಡೆಯರ್, ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಉದ್ಯಮ ಒಂದು ಕಾಲಕ್ಕೆ ಮಹಿಳೆಯರಿಗೆ ಸಾಧ್ಯವಾಗದ ಕನಸು ಆಗಿತ್ತು. ಈಗ ಮಹಿಳೆಯರ ಮನಸ್ಥಿತಿ ಬದಲಾಗಿದೆ. ಅವರು ಮನೆಗೆ ಸೀಮಿತವಾಗದೇ ಕೈಗಾರಿಕೋದ್ಯಮಿಗಳಾಗುತ್ತಿದ್ದಾರೆ ಎಂದು ಕೈಗಾರಿಕಾ ಪಾರ್ಕ್ ಮುಖ್ಯಸ್ಥೆ ರೇವತಿ ರಾಜು ಹೇಳಿದರು.</p>.<p>ಗೌರಿಬಿದನೂರಿನಲ್ಲಿ ಎಫ್ಎಲ್ಒ ಕೈಗಾರಿಕಾ ಪಾರ್ಕ್ ಉದ್ಘಾಟನೆಯ ಬಳಿಕ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. </p>.<p>ಮಹಿಳೆಯರಲ್ಲಿ ಉಂಟಾಗಿರುವ ಆಂತರಿಕ ಪರಿವರ್ತನೆಯನ್ನು ಕೈಗಾರಿಕಾ ಪಾರ್ಕ್ ಸೂಚಿಸುತ್ತದೆ. ಉದ್ಯಮದ ಹಾದಿಯಲ್ಲಿ ಮಹಿಳೆಯರು ದಾಪುಗಾಲು ಇಡುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂದರು.</p>.<p>ಬೆಂಗಳೂರಿನಲ್ಲಿ ಕೈಗಾರಿಕಾ ವಲಯಗಳು ತುಂಬಿ ಹೋಗಿವೆ. ಜನದಟ್ಟಣೆ, ವಾಹನದಟ್ಟಣೆ ಹೆಚ್ಚಾಗಿದೆ. ಈ ಸಮಸ್ಯೆಯಿಂದ ಪಾರಾಗಲು, ದೀರ್ಘಕಾಲೀನ ಬೆಳವಣಿಗೆಗೆ ಪೂರಕವಾಗಿರುವಂತೆ ಮಾಡಲು ಗೌರಿಬಿದನೂರಿನಲ್ಲಿ ಕೈಗಾರಿಕಾ ಪಾರ್ಕ್ ನಿರ್ಮಿಸಲಾಗಿದೆ ಎಂದು ವಿವರಿಸಿದರು.</p>.<p>ಮೈಸೂರಿನ ರಾಜಮನೆತನದ ಕಾಮಾಕ್ಷಿದೇವಿ ಒಡೆಯರ್, ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>