ಲೇಖಕಿ ಡಾ. ವಸುಂಧರಾ ಭೂಪತಿ ಮಾತನಾಡಿ, ‘ಗ್ರಾಮೀಣ ಪ್ರದೇಶದ ಮಹಿಳೆಯರು ದಿನದ ಬಹುತೇಕ ಅವಧಿ ಕೃಷಿ ಚಟುವಟಿಕೆಯಲ್ಲಿಯೇ ತೊಡಗಿರುತ್ತಾರೆ. ಕೃಷಿಗೆ ಭೂಮಿ ಇಲ್ಲದಿದ್ದರೂ ನಗರ ಪ್ರದೇಶದ ಮಹಿಳೆಯರು ಮನೆ ಮುಂದೆ ಹೂವು ಹಾಗೂ ತರಕಾರಿಗಳನ್ನು ಬೆಳೆಯುತ್ತಿದ್ದಾರೆ. ತಾರಸಿ ತೋಟ ಕೂಡ ಮಾಡುತ್ತಿದ್ದಾರೆ. ಆದರೆ, ಕೃಷಿ ಕ್ಷೇತ್ರದಲ್ಲಿ ಮಹಿಳೆಗೆ ಸಿಗಬೇಕಾದ ಮಾನ್ಯತೆ ದೊರೆಯಲಿಲ್ಲ‘
ಎಂದರು.