ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಪಿಯನ್ನು ಪೊಲೀಸರಿಗೊಪ್ಪಿಸಿದ ಮಹಿಳೆಯರು

Last Updated 3 ಡಿಸೆಂಬರ್ 2019, 2:07 IST
ಅಕ್ಷರ ಗಾತ್ರ

ಬೆಂಗಳೂರು: ಕೆಲಸದ ಆಮಿಷವೊಡ್ಡಿ ಮಹಿಳೆಯರನ್ನು ವಿದೇಶಕ್ಕೆ ಕಳುಹಿಸಿ ಚಿತ್ರಹಿಂಸೆ ಅನುಭವಿಸುವಂತೆ ಮಾಡಿರುವ ಆರೋಪಿ ಸೈಯದ್ ಖಾದರ್ ಎಂಬಾತನನ್ನು, ಮಹಿಳೆಯರ ಸಂಬಂಧಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

‘ತಮಿಳುನಾಡಿನ ಸೈಯದ್ ಖಾದರ್‌, ಇಬ್ಬರು ಮಹಿಳೆಯರನ್ನು ಕುವೈತ್‌ಗೆ ಇತ್ತೀಚೆಗಷ್ಟೇ ಕಳುಹಿಸಿದ್ದ. ಅವರಿಬ್ಬರನ್ನು ಕೆಲಸಕ್ಕೆ ಇಟ್ಟುಕೊಂಡಿರುವ ವ್ಯಕ್ತಿಗಳು ನಿತ್ಯವೂ ಅತ್ಯಾಚಾರ ಎಸಗುತ್ತಿದ್ದಾರೆ ಎಂದು ಗೊತ್ತಾಗಿದೆ. ನೊಂದ ಮಹಿಳೆಯರು ತಮ್ಮ ಸಂಬಂಧಿಕರಿಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ಸಂಬಂಧಿಕರೇ ಸೈಯದ್‌ನನ್ನು ಹಿಡಿದು ಠಾಣೆಗೆ ಒಪ್ಪಿಸಿದ್ದಾರೆ. ಆತನ ವಿರುದ್ಧ ದೂರು ಸಹ ನೀಡಿದ್ದಾರೆ’ ಎಂದು ಪೊಲೀಸರು ಹೇಳಿದರು.

‘ಏಜೆಂಟ್ ಆಗಿರುವ ಆರೋಪಿ, ಹೊರದೇಶಗಳಲ್ಲಿರುವ ಕೆಲವು ಏಜೆನ್ಸಿಗಳ ಜೊತೆ ಸಂಪರ್ಕ ಇಟ್ಟುಕೊಂಡಿದ್ದಾನೆ. ನಗರದಲ್ಲಿರುವ ಮಹಿಳೆಯರನ್ನು ಪರಿಚಯ ಮಾಡಿಕೊಂಡು ಅವರಿಗೆಲ್ಲ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಆರೋಪಿ ಆಮಿಷ ಒಡ್ಡುತ್ತಿರುವುದಾಗಿ ಸಂಬಂಧಿಕರು ದೂರಿನಲ್ಲಿ ತಿಳಿಸಿದ್ದಾರೆ’ ಎಂದು ವಿವರಿಸಿದರು.

‘ಆರೋಪಿಯ ಮಾತು ನಂಬಿ ಹಲವು ಮಹಿಳೆಯರು ವಿದೇಶಕ್ಕೆ ಹೋಗಿರುವ ಅನುಮಾನವಿದೆ. ಇದೊಂದು ಮಾನವ ಕಳ್ಳ ಸಾಗಣೆ ಜಾಲವಾಗಿರುವ ಶಂಕೆಯೂ ಇರುವುದಾಗಿ ಸಂಬಂಧಿಕರು ಹೇಳುತ್ತಿದ್ದಾರೆ’ ಎಂದು ಪೊಲೀಸರು ತಿಳಿಸಿದರು.

‘ಜೀತಕ್ಕಾಗಿ ವ್ಯಕ್ತಿಯನ್ನು ಖರೀದಿಸಿದ (ಐಪಿಸಿ 370) ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT