<p><strong>ಬೆಂಗಳೂರು:</strong>‘ಮಹಿಳೆಯರಿಗೆ ತುರ್ತು ಪರಿಸ್ಥಿತಿಯಲ್ಲಿ ಅಗತ್ಯ ನೆರವು ಮತ್ತು ಮಾಹಿತಿಯನ್ನು ನೀಡಲು ದಿನದ24 ಗಂಟೆ ಸ್ಪಂದಿಸಲು ‘181’ ಮಹಿಳಾ ಸಹಾಯವಾಣಿ ಯೋಜನೆ ಅನುಷ್ಠಾನಗೊಳಿಸಲಾಗಿದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಜಯಮಾಲಾ ತಿಳಿಸಿದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಗರದಲ್ಲಿ ಬುಧವಾರ ಆಯೋಜಿಸಿದ್ದ ಇಲಾಖೆಯ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಈ ಯೋಜನೆ, ಪೊಲೀಸ್, ಆರೋಗ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಅನುಷ್ಠಾನವಾಗಿದೆ’ ಎಂದರು.</p>.<p>‘ಸ್ವಾಧಾರ ಆನ್ಲೈನ್ ತಂತ್ರಾಂಶ, ಟ್ರಾನ್ಸಿಸ್ಟ್ ಹಾಸ್ಟೆಲ್, ಒನ್ ಸ್ಟಾ- ಸೆಂಟರ್, ದಮನಿತ ಮಹಿಳೆಯರ ರಾಜ್ಯಕೋಶಕ್ಕೆ ಚಾಲನೆ, ಮುಖ್ಯಮಂತ್ರಿಯವರ ಮಾತೃಶ್ರೀ ಯೋಜನೆ, ಇಂದಿರಾ ಮೇಲ್ವಿಚಾರಕಿಯರಿಗೆ ಬಡ್ಡಿ ರಹಿತ ದ್ವಿಚಕ್ರ ವಾಹನ ಸೌಲಭ್ಯದ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದ್ದು, ಇವುಗಳ ಸಮರ್ಪಕ ಬಳಕೆಗೆ ಮಹಿಳೆಯರು ಮುಂದಾಗಬೇಕು’ ಎಂದು ಹೇಳಿದರು.</p>.<p>‘ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಮಹಿಳೆಯರು ಅಸಹಾಯಕ ಸ್ಥಿತಿಯಲ್ಲಿ ಇದ್ದಿದ್ದನ್ನು ಮನಗಂಡು, ಸಬಲೀಕರಣಕ್ಕಾಗಿ ರಾಜ್ಯದಾದ್ಯಂತ ಅಧ್ಯಯನ ನಡೆಸಿ, ವರದಿ ಪರಿಶೀಲನೆ ನಂತರ ಯೋಜನೆಗಳನ್ನು ಜಾರಿಗೊಳಿಸಲಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>‘ಮಹಿಳೆಯರಿಗೆ ತುರ್ತು ಪರಿಸ್ಥಿತಿಯಲ್ಲಿ ಅಗತ್ಯ ನೆರವು ಮತ್ತು ಮಾಹಿತಿಯನ್ನು ನೀಡಲು ದಿನದ24 ಗಂಟೆ ಸ್ಪಂದಿಸಲು ‘181’ ಮಹಿಳಾ ಸಹಾಯವಾಣಿ ಯೋಜನೆ ಅನುಷ್ಠಾನಗೊಳಿಸಲಾಗಿದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಜಯಮಾಲಾ ತಿಳಿಸಿದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಗರದಲ್ಲಿ ಬುಧವಾರ ಆಯೋಜಿಸಿದ್ದ ಇಲಾಖೆಯ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಈ ಯೋಜನೆ, ಪೊಲೀಸ್, ಆರೋಗ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಅನುಷ್ಠಾನವಾಗಿದೆ’ ಎಂದರು.</p>.<p>‘ಸ್ವಾಧಾರ ಆನ್ಲೈನ್ ತಂತ್ರಾಂಶ, ಟ್ರಾನ್ಸಿಸ್ಟ್ ಹಾಸ್ಟೆಲ್, ಒನ್ ಸ್ಟಾ- ಸೆಂಟರ್, ದಮನಿತ ಮಹಿಳೆಯರ ರಾಜ್ಯಕೋಶಕ್ಕೆ ಚಾಲನೆ, ಮುಖ್ಯಮಂತ್ರಿಯವರ ಮಾತೃಶ್ರೀ ಯೋಜನೆ, ಇಂದಿರಾ ಮೇಲ್ವಿಚಾರಕಿಯರಿಗೆ ಬಡ್ಡಿ ರಹಿತ ದ್ವಿಚಕ್ರ ವಾಹನ ಸೌಲಭ್ಯದ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದ್ದು, ಇವುಗಳ ಸಮರ್ಪಕ ಬಳಕೆಗೆ ಮಹಿಳೆಯರು ಮುಂದಾಗಬೇಕು’ ಎಂದು ಹೇಳಿದರು.</p>.<p>‘ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಮಹಿಳೆಯರು ಅಸಹಾಯಕ ಸ್ಥಿತಿಯಲ್ಲಿ ಇದ್ದಿದ್ದನ್ನು ಮನಗಂಡು, ಸಬಲೀಕರಣಕ್ಕಾಗಿ ರಾಜ್ಯದಾದ್ಯಂತ ಅಧ್ಯಯನ ನಡೆಸಿ, ವರದಿ ಪರಿಶೀಲನೆ ನಂತರ ಯೋಜನೆಗಳನ್ನು ಜಾರಿಗೊಳಿಸಲಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>