ಕರ್ನಾಟಕ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಾಗೇಶ್, ‘ಬಂದ್ನಲ್ಲಿ 50 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಲಿದ್ದಾರೆ. ಪುರಭವನದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಬೃಹತ್ ಮೆರವಣಿಗೆ ನಡೆಯಲಿದೆ. ಕಾರ್ಮಿಕ, ಚಾಲಕ ಹಾಗೂ ವಿವಿಧ ಸಂಘಟನೆಗಳುಬಂದ್ಗೆ ಬೆಂಬಲ ನೀಡಿವೆ. ಮುನ್ನೆಚ್ಚರಿಕೆಯಾಗಿ ಬಂದ್ ದಿನದಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಶಿಕ್ಷಣ ಇಲಾಖೆ ಮನವಿ ಮಾಡಲಾಗಿದೆ’ ಎಂದು ತಿಳಿಸಿದರು.