<p><strong>ಬೆಂಗಳೂರು</strong>: ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಕೇಂದ್ರ ಸರ್ಕಾರ ಎರಡೂ ಸದನಗಳಲ್ಲಿ ಮಂಡಿಸಿತ್ತು. ಆದರೆ, ವಿರೋಧ ಪಕ್ಷಗಳ ನಿಲುವಿನಿಂದಾಗಿ ಮಸೂದೆ ಅಂಗೀಕಾರವಾಗಿಲ್ಲ ಎಂದು ರಾಜ್ಯಸಭಾ ಸದಸ್ಯ ಎಚ್.ಡಿ. ದೇವೇಗೌಡ ಹೇಳಿದರು.</p>.<p>ಕಬ್ಬನ್ ಉದ್ಯಾನದಲ್ಲಿ ನಡೆಯುತ್ತಿರುವ ಮಾವು ಮೇಳಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಮತ್ತೊಂದು ಅಧಿವೇಶನ ಕರೆದು ಈ ಮಸೂದೆಯನ್ನು ಮಂಡಿಸಿ, ಜಾರಿಗೊಳಿಸುವ ಭರವಸೆ ಇದೆ’ ಎಂದರು.</p>.<p>‘ತೈಲ ಬಳಕೆ ಕುರಿತು ಮೋದಿ ಅವರ ಕರೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಅಮೆರಿಕ-ಇಸ್ರೇಲ್- ಇರಾನ್ ನಡುವಿನ ಸಂಘರ್ಷದಿಂದ ಜಾಗತಿಕವಾಗಿ ಅಪಾರ ದುಷ್ಪರಿಣಾಮ ಬೀರಿದೆ. ತೈಲ ಬಿಕ್ಕಟ್ಟು ಹೆಚ್ಚಾಗಿದೆ. ಆದ್ದರಿಂದ ಪೆಟ್ರೋಲ್, ಡಿಸೇಲ್ ಹಾಗೂ ರಾಸಾಯನಿಕ ಗೊಬ್ಬರವನ್ನು ಎಚ್ಚರಿಕೆಯಿಂದ ಬಳಕೆ ಮಾಡುವಂತೆ ದೇಶದ ಜನರಿಗೆ ತಿಳಿಸಿದ್ದು, ಅವರ ಮನವಿಯನ್ನು ನಾವೆಲ್ಲರೂ ಸ್ವಾಗತಿಸಬೇಕು’ ಎಂದು ಸಲಹೆ ನೀಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-4-253820606</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಕೇಂದ್ರ ಸರ್ಕಾರ ಎರಡೂ ಸದನಗಳಲ್ಲಿ ಮಂಡಿಸಿತ್ತು. ಆದರೆ, ವಿರೋಧ ಪಕ್ಷಗಳ ನಿಲುವಿನಿಂದಾಗಿ ಮಸೂದೆ ಅಂಗೀಕಾರವಾಗಿಲ್ಲ ಎಂದು ರಾಜ್ಯಸಭಾ ಸದಸ್ಯ ಎಚ್.ಡಿ. ದೇವೇಗೌಡ ಹೇಳಿದರು.</p>.<p>ಕಬ್ಬನ್ ಉದ್ಯಾನದಲ್ಲಿ ನಡೆಯುತ್ತಿರುವ ಮಾವು ಮೇಳಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಮತ್ತೊಂದು ಅಧಿವೇಶನ ಕರೆದು ಈ ಮಸೂದೆಯನ್ನು ಮಂಡಿಸಿ, ಜಾರಿಗೊಳಿಸುವ ಭರವಸೆ ಇದೆ’ ಎಂದರು.</p>.<p>‘ತೈಲ ಬಳಕೆ ಕುರಿತು ಮೋದಿ ಅವರ ಕರೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಅಮೆರಿಕ-ಇಸ್ರೇಲ್- ಇರಾನ್ ನಡುವಿನ ಸಂಘರ್ಷದಿಂದ ಜಾಗತಿಕವಾಗಿ ಅಪಾರ ದುಷ್ಪರಿಣಾಮ ಬೀರಿದೆ. ತೈಲ ಬಿಕ್ಕಟ್ಟು ಹೆಚ್ಚಾಗಿದೆ. ಆದ್ದರಿಂದ ಪೆಟ್ರೋಲ್, ಡಿಸೇಲ್ ಹಾಗೂ ರಾಸಾಯನಿಕ ಗೊಬ್ಬರವನ್ನು ಎಚ್ಚರಿಕೆಯಿಂದ ಬಳಕೆ ಮಾಡುವಂತೆ ದೇಶದ ಜನರಿಗೆ ತಿಳಿಸಿದ್ದು, ಅವರ ಮನವಿಯನ್ನು ನಾವೆಲ್ಲರೂ ಸ್ವಾಗತಿಸಬೇಕು’ ಎಂದು ಸಲಹೆ ನೀಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-4-253820606</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>