<p><strong>ರಾಜರಾಜೇಶ್ವರಿ ನಗರ:</strong> ‘ನಗರ ಪಾಲಿಕೆಗಳ ಚುನಾವಣೆಯಲ್ಲಿ ಶೇಕಡ 50ರಷ್ಟು ಮಹಿಳೆಯರನ್ನು ಕಾಂಗ್ರೆಸ್ ಪಕ್ಷ ಕಣಕ್ಕಿಳಿಸಲಿದೆ’ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ತಿಳಿಸಿದರು. </p>.<p>ನಾಗರಬಾವಿಯಲ್ಲಿ ಹಮ್ಮಿಕೊಂಡಿದ್ದ ನವರಾತ್ರಿ ವೈಭವ 2025 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಹೆಣ್ಣು ಮಕ್ಕಳು ರಾಜಕೀಯ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಉತ್ತಮ ಸೇವೆ ಮಾಡಲು ಮುಂದಾಗಬೇಕು ಎನ್ನುವ ಕಾರಣದಿಂದ ಅವಕಾಶವನ್ನು ನೀಡಲಾಗುವುದು’ ಎಂದು ಹೇಳಿದರು.</p>.<p>ಕಾರ್ಯಕ್ರಮ ಆಯೋಜಕರಾದ ಎಚ್.ಕುಸುಮಾ ಮಾತನಾಡಿ, ‘ಎಷ್ಟೇ ನೋವುಗಳಿದ್ದರೂ ಸಂಸಾರವನ್ನು ತೂಗಿಸಿಕೊಂಡು ಹೋಗುತ್ತಿರುವ ತಾಯಂದಿರ ಪಾತ್ರ ದೊಡ್ಡದು. ನಾನಾ ಕ್ಷೇತ್ರದ ನೂರಾರು ತಾಯಂದಿರನ್ನು ಒಂದೆಡೆ ಸೇರಿಸಿ ಅವರನ್ನು ಸತ್ಕರಿಸುವ ಮೂಲಕ ನಾಡ ದೇವತೆ ಹೆಸರಿನಲ್ಲಿ ನವರಾತ್ರಿ ವೈಭವ ಆಚರಿಸಲಾಗುತ್ತಿದೆ’ ಎಂದರು.</p>.<p>ವಿಜ್ಞಾನ, ವೈದ್ಯಕೀಯ, ಶಿಕ್ಷಣ, ಸಾಮಾಜಿಕ, ಎಂಜಿನಿಯರಿಂಗ್, ಕಾರ್ಯಾಂಗ, ನ್ಯಾಯಾಂಗ, ಸಂಗೀತ, ಸಾಹಿತ್ಯ, ಕಲೆ, ಹೋಟೆಲ್ ಉದ್ಯಮ, ಪರಿಸರ, ನೈರ್ಮಲ್ಯ ಸೇರಿ ನಾನಾ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ 100ಕ್ಕೂ ಹೆಚ್ಚು ಸಾಧಕಿಯರನ್ನು ಸನ್ಮಾನಿಸಲಾಯಿತು. </p>.<p>ಎಚ್.ಮೋನಿಕಾ, ಬೈರಮ್ಮ ಅವರು 5000ಕ್ಕೂ ಹೆಚ್ಚು ಹೆಣ್ಣು ಮಕ್ಕಳಿಗೆ ಬಾಗಿನ ನೀಡಿದರು. ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹನುಮಂತರಾಯಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜರಾಜೇಶ್ವರಿ ನಗರ:</strong> ‘ನಗರ ಪಾಲಿಕೆಗಳ ಚುನಾವಣೆಯಲ್ಲಿ ಶೇಕಡ 50ರಷ್ಟು ಮಹಿಳೆಯರನ್ನು ಕಾಂಗ್ರೆಸ್ ಪಕ್ಷ ಕಣಕ್ಕಿಳಿಸಲಿದೆ’ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ತಿಳಿಸಿದರು. </p>.<p>ನಾಗರಬಾವಿಯಲ್ಲಿ ಹಮ್ಮಿಕೊಂಡಿದ್ದ ನವರಾತ್ರಿ ವೈಭವ 2025 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಹೆಣ್ಣು ಮಕ್ಕಳು ರಾಜಕೀಯ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಉತ್ತಮ ಸೇವೆ ಮಾಡಲು ಮುಂದಾಗಬೇಕು ಎನ್ನುವ ಕಾರಣದಿಂದ ಅವಕಾಶವನ್ನು ನೀಡಲಾಗುವುದು’ ಎಂದು ಹೇಳಿದರು.</p>.<p>ಕಾರ್ಯಕ್ರಮ ಆಯೋಜಕರಾದ ಎಚ್.ಕುಸುಮಾ ಮಾತನಾಡಿ, ‘ಎಷ್ಟೇ ನೋವುಗಳಿದ್ದರೂ ಸಂಸಾರವನ್ನು ತೂಗಿಸಿಕೊಂಡು ಹೋಗುತ್ತಿರುವ ತಾಯಂದಿರ ಪಾತ್ರ ದೊಡ್ಡದು. ನಾನಾ ಕ್ಷೇತ್ರದ ನೂರಾರು ತಾಯಂದಿರನ್ನು ಒಂದೆಡೆ ಸೇರಿಸಿ ಅವರನ್ನು ಸತ್ಕರಿಸುವ ಮೂಲಕ ನಾಡ ದೇವತೆ ಹೆಸರಿನಲ್ಲಿ ನವರಾತ್ರಿ ವೈಭವ ಆಚರಿಸಲಾಗುತ್ತಿದೆ’ ಎಂದರು.</p>.<p>ವಿಜ್ಞಾನ, ವೈದ್ಯಕೀಯ, ಶಿಕ್ಷಣ, ಸಾಮಾಜಿಕ, ಎಂಜಿನಿಯರಿಂಗ್, ಕಾರ್ಯಾಂಗ, ನ್ಯಾಯಾಂಗ, ಸಂಗೀತ, ಸಾಹಿತ್ಯ, ಕಲೆ, ಹೋಟೆಲ್ ಉದ್ಯಮ, ಪರಿಸರ, ನೈರ್ಮಲ್ಯ ಸೇರಿ ನಾನಾ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ 100ಕ್ಕೂ ಹೆಚ್ಚು ಸಾಧಕಿಯರನ್ನು ಸನ್ಮಾನಿಸಲಾಯಿತು. </p>.<p>ಎಚ್.ಮೋನಿಕಾ, ಬೈರಮ್ಮ ಅವರು 5000ಕ್ಕೂ ಹೆಚ್ಚು ಹೆಣ್ಣು ಮಕ್ಕಳಿಗೆ ಬಾಗಿನ ನೀಡಿದರು. ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹನುಮಂತರಾಯಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>