<p><strong>ಬೆಂಗಳೂರು:</strong> ಬನಶಂಕರಿ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ದೀಪಿಕಾ (26) ಎಂಬುವರ ಮೃತದೇಹ ಮಂಗಳವಾರ ಪತ್ತೆಯಾಗಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.</p>.<p>‘ಅಜ್ಜಂಪುರದ ದೀಪಿಕಾ, ಬನಶಂಕರಿ ಠಾಣೆ ವ್ಯಾಪ್ತಿಯ ಕದಿರೇನಹಳ್ಳಿಯ ಜಯಕುಮಾರ್ ಅವರನ್ನು ಮದುವೆಯಾಗಿದ್ದರು. ಅವರಿಗೆ 4 ವರ್ಷದ ಮಗ ಇದ್ದ. ‘ನನ್ನ ಸಾವಿಗೆ ಪತಿಯ ಕಿರುಕುಳವೇ ಕಾರಣ’ ಎಂದು ಆರೋಪಿಸಿ ವಿಡಿಯೊ ಮಾಡಿಟ್ಟು ದೀಪಿಕಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಡಿಯೊ ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಪತಿ ಕಿರುಕುಳದಿಂದ ಬೇಸತ್ತಿದ್ದ ದೀಪಿಕಾ, ಮಗನ ಜೊತೆ ಅಜ್ಜಂಪುರದಲ್ಲಿರುವ ತವರು ಮನೆಗೆ ಹೋಗಿದ್ದರು. ಆದರೆ, ಅನಾರೋಗ್ಯದಿಂದಾಗಿ ಮಗ ಮೃತಪಟ್ಟಿದ್ದ. ಅದರಿಂದ ದೀಪಿಕಾ ಮತ್ತಷ್ಟು ನೊಂದಿದ್ದರು.’</p>.<p>‘ಪತಿ ವಿರುದ್ಧ ಅಜ್ಜಂಪುರ ಠಾಣೆಗೆ ದೀಪಿಕಾ ದೂರು ಕೊಟ್ಟಿದ್ದರು. ಅದಾದ ಕೆಲ ದಿನಗಳ ನಂತರ ಅಜ್ಜಂಪುರ ತೊರೆದಿದ್ದರು. ಮಗಳು ನಾಪತ್ತೆಯಾದ ಬಗ್ಗೆ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು’ ಎಂದೂ ಮೂಲಗಳು ತಿಳಿಸಿವೆ.</p>.<p>‘ತವರು ಮನೆಯಿಂದ ಪತಿಯ ಮನೆಗೆ ಬಂದಿದ್ದ ದೀಪಿಕಾ, ಕೊಠಡಿಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಪತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕಿದೆ’ ಎಂದೂ ಪೊಲೀಸ್ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬನಶಂಕರಿ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ದೀಪಿಕಾ (26) ಎಂಬುವರ ಮೃತದೇಹ ಮಂಗಳವಾರ ಪತ್ತೆಯಾಗಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.</p>.<p>‘ಅಜ್ಜಂಪುರದ ದೀಪಿಕಾ, ಬನಶಂಕರಿ ಠಾಣೆ ವ್ಯಾಪ್ತಿಯ ಕದಿರೇನಹಳ್ಳಿಯ ಜಯಕುಮಾರ್ ಅವರನ್ನು ಮದುವೆಯಾಗಿದ್ದರು. ಅವರಿಗೆ 4 ವರ್ಷದ ಮಗ ಇದ್ದ. ‘ನನ್ನ ಸಾವಿಗೆ ಪತಿಯ ಕಿರುಕುಳವೇ ಕಾರಣ’ ಎಂದು ಆರೋಪಿಸಿ ವಿಡಿಯೊ ಮಾಡಿಟ್ಟು ದೀಪಿಕಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಡಿಯೊ ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಪತಿ ಕಿರುಕುಳದಿಂದ ಬೇಸತ್ತಿದ್ದ ದೀಪಿಕಾ, ಮಗನ ಜೊತೆ ಅಜ್ಜಂಪುರದಲ್ಲಿರುವ ತವರು ಮನೆಗೆ ಹೋಗಿದ್ದರು. ಆದರೆ, ಅನಾರೋಗ್ಯದಿಂದಾಗಿ ಮಗ ಮೃತಪಟ್ಟಿದ್ದ. ಅದರಿಂದ ದೀಪಿಕಾ ಮತ್ತಷ್ಟು ನೊಂದಿದ್ದರು.’</p>.<p>‘ಪತಿ ವಿರುದ್ಧ ಅಜ್ಜಂಪುರ ಠಾಣೆಗೆ ದೀಪಿಕಾ ದೂರು ಕೊಟ್ಟಿದ್ದರು. ಅದಾದ ಕೆಲ ದಿನಗಳ ನಂತರ ಅಜ್ಜಂಪುರ ತೊರೆದಿದ್ದರು. ಮಗಳು ನಾಪತ್ತೆಯಾದ ಬಗ್ಗೆ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು’ ಎಂದೂ ಮೂಲಗಳು ತಿಳಿಸಿವೆ.</p>.<p>‘ತವರು ಮನೆಯಿಂದ ಪತಿಯ ಮನೆಗೆ ಬಂದಿದ್ದ ದೀಪಿಕಾ, ಕೊಠಡಿಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಪತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕಿದೆ’ ಎಂದೂ ಪೊಲೀಸ್ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>