‘ಉಮಾಶ್ರೀ ಅವರು ಮೂರು ತಿಂಗಳ ಹಿಂದಷ್ಟೇ ಕಾರ್ಖಾನೆಯಲ್ಲಿ ಕೆಲಸಕ್ಕೆ ಸೇರಿದ್ದರು. ಇತ್ತೀಚೆಗೆ ಅವರ ಆರೋಗ್ಯ ಸರಿ ಇರಲಿಲ್ಲ. ಹೀಗಾಗಿ, ರಜೆ ನೀಡುವಂತೆ ಕೋರಿದ್ದರು. ಅದಕ್ಕೆ ಒಪ್ಪದ ವ್ಯವಸ್ಥಾಪಕ ಹಾಗೂ ಇತರರು, ಕಾರ್ಖಾನೆಗೆ ಬಾರದಿದ್ದರೆ ಕೆಲಸದಿಂದ ಕಿತ್ತು ಹಾಕುವುದಾಗಿ ಹೇಳಿದ್ದರು. ಅದರಿಂದ ಹೆದರಿದ ಉಮಾಶ್ರೀ, ಆರೋಗ್ಯ ಸರಿ ಇಲ್ಲದಿದ್ದರೂ ಕಾರ್ಖಾನೆಗೆ ಕೆಲಸಕ್ಕೆ ಹೋಗಿದ್ದರು.’