<p><strong>ದೇವನಹಳ್ಳಿ: </strong>ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶುಕ್ರವಾರ ಕೊಲ್ಕತ್ತಾಗೆ ಹೊರಟಿದ್ದ ಯುವತಿಯೊಬ್ಬರು ತಪಾಸಣೆಗೆ ಮುಂದಾದ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ(ಸಿಐಎಸ್ಎಫ್) ಸಿಬ್ಬಂದಿ ಮೇಲೆ ರೇಗಾಡಿ ಬಾಂಬ್ ಹಾಕಿ ವಿಮಾನ ನಿಲ್ದಾಣ ಸ್ಫೋಟಿಸುವ ಬೆದರಿಕೆ ಒಡ್ಡಿದ್ದರು.</p>.<p>ಆತುರದಿಂದ ನಿರ್ಗಮನ ದ್ವಾರ–6ಕ್ಕೆ ಬಂದ ಮಾನಸಿ ಸತೇಬೈನು (31) ಎಂಬ ಯುವತಿ ತಪಾಸಣೆಗೆ ಮುಂದಾದ ಸಿಐಎಸ್ಎಫ್ ಸಿಬ್ಬಂದಿಗೆ ಸಹಕಾರ ತೋರದೆ ಅವಸರದಿಂದ ನಿಲ್ದಾಣದ ಒಳ ಪ್ರವೇಶಿಸಲು ಯತ್ನಿಸಿದ್ದಾರೆ. ಅದಕ್ಕೆ ಅವಕಾಶ ನೀಡದ ಭದ್ರತಾ ಸಿಬ್ಬಂದ ಮೇಲೆ ರೇಗಾಡಿದ್ದಾರೆ. </p>.<p>ಅದಾಗಲೇ ವಿಮಾನ ಹೊರಡುವ ಸಮಯವಾದ ಕಾರಣ ಬೇಗ ಒಳ ಬಿಡುವಂತೆ ಸಿಬ್ಬಂದಿ ಮೇಲೆ ಒತ್ತಡ ಹೇರಿದರು. ತಪಾಸಣೆ ನಡೆಸಲು ಮುಂದಾದ ಭದ್ರತಾ ಸಿಬ್ಬಂದಿ ಜತೆ ವಾಗ್ವಾದಕ್ಕೆ ಇಳಿದಿದ್ದಾರೆ. ವಿಮಾನ ನಿಲ್ದಾಣವನ್ನು ಬಾಂಬ್ನಿಂದ ಸ್ಫೋಟಿಸುವುದಾಗಿ ಬೆದರಿಕೆ ಒಡ್ಡಿದ್ದಾರೆ.</p>.<p>ಭದ್ರತಾ ತಪಾಸಣೆಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ಸಹ ಪ್ರಯಾಣಿಕರಿಗೆ ಬಳಿ ತೆರಳಿ ‘ಈ ಗೇಟ್ನಲ್ಲಿ ಬಾಂಬ್ ಇದೇ ಎಲ್ಲರೂ ಇಲ್ಲಿಂದ ಓಡಿ ಹೋಗಿ ಜೀವ ಉಳಿಸಿಕೊಳ್ಳಿ’ ಎಂದು ಕೂಗಿ ರಂಪಾಟ ಮಾಡಿದ್ದಾರೆ. </p>.<p>ಅಷ್ಟೇ ಅಲ್ಲದೇ ಸಿಐಎಸ್ಎಫ್ ಸಿಬ್ಬಂದಿ ಸಂದೀಪ್ ಸಿಂಗ್ ಎಂಬುವವರ ಅಂಗಿಯ ಕಾಲರ್ ಹಿಡಿದು ಒದ್ದಿರುತ್ತಾರೆ ಹಾಗೂ ಮುಖಕ್ಕೆ ಗುದ್ದಿದ್ದಾರೆ. ಇದರಿಂದ ವಿಮಾನ ನಿಲ್ದಾಣದಲ್ಲಿ ಕೆಲ ಹೊತ್ತು ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಇತರ ಪ್ರಯಾಣಿಕರು ಆತಂಕಗೊಂಡಿದ್ದರು.</p>.<p>ಕರ್ತವ್ಯ ನಿರ್ವಹಣೆ ಅಡ್ಡಿ ಪಡಿಸಿದ ಯುವತಿಯನ್ನು ಸಿಐಎಸ್ಎಫ್ ಸಿಬ್ಬಂದಿ ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಯುವತಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ: </strong>ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶುಕ್ರವಾರ ಕೊಲ್ಕತ್ತಾಗೆ ಹೊರಟಿದ್ದ ಯುವತಿಯೊಬ್ಬರು ತಪಾಸಣೆಗೆ ಮುಂದಾದ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ(ಸಿಐಎಸ್ಎಫ್) ಸಿಬ್ಬಂದಿ ಮೇಲೆ ರೇಗಾಡಿ ಬಾಂಬ್ ಹಾಕಿ ವಿಮಾನ ನಿಲ್ದಾಣ ಸ್ಫೋಟಿಸುವ ಬೆದರಿಕೆ ಒಡ್ಡಿದ್ದರು.</p>.<p>ಆತುರದಿಂದ ನಿರ್ಗಮನ ದ್ವಾರ–6ಕ್ಕೆ ಬಂದ ಮಾನಸಿ ಸತೇಬೈನು (31) ಎಂಬ ಯುವತಿ ತಪಾಸಣೆಗೆ ಮುಂದಾದ ಸಿಐಎಸ್ಎಫ್ ಸಿಬ್ಬಂದಿಗೆ ಸಹಕಾರ ತೋರದೆ ಅವಸರದಿಂದ ನಿಲ್ದಾಣದ ಒಳ ಪ್ರವೇಶಿಸಲು ಯತ್ನಿಸಿದ್ದಾರೆ. ಅದಕ್ಕೆ ಅವಕಾಶ ನೀಡದ ಭದ್ರತಾ ಸಿಬ್ಬಂದ ಮೇಲೆ ರೇಗಾಡಿದ್ದಾರೆ. </p>.<p>ಅದಾಗಲೇ ವಿಮಾನ ಹೊರಡುವ ಸಮಯವಾದ ಕಾರಣ ಬೇಗ ಒಳ ಬಿಡುವಂತೆ ಸಿಬ್ಬಂದಿ ಮೇಲೆ ಒತ್ತಡ ಹೇರಿದರು. ತಪಾಸಣೆ ನಡೆಸಲು ಮುಂದಾದ ಭದ್ರತಾ ಸಿಬ್ಬಂದಿ ಜತೆ ವಾಗ್ವಾದಕ್ಕೆ ಇಳಿದಿದ್ದಾರೆ. ವಿಮಾನ ನಿಲ್ದಾಣವನ್ನು ಬಾಂಬ್ನಿಂದ ಸ್ಫೋಟಿಸುವುದಾಗಿ ಬೆದರಿಕೆ ಒಡ್ಡಿದ್ದಾರೆ.</p>.<p>ಭದ್ರತಾ ತಪಾಸಣೆಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ಸಹ ಪ್ರಯಾಣಿಕರಿಗೆ ಬಳಿ ತೆರಳಿ ‘ಈ ಗೇಟ್ನಲ್ಲಿ ಬಾಂಬ್ ಇದೇ ಎಲ್ಲರೂ ಇಲ್ಲಿಂದ ಓಡಿ ಹೋಗಿ ಜೀವ ಉಳಿಸಿಕೊಳ್ಳಿ’ ಎಂದು ಕೂಗಿ ರಂಪಾಟ ಮಾಡಿದ್ದಾರೆ. </p>.<p>ಅಷ್ಟೇ ಅಲ್ಲದೇ ಸಿಐಎಸ್ಎಫ್ ಸಿಬ್ಬಂದಿ ಸಂದೀಪ್ ಸಿಂಗ್ ಎಂಬುವವರ ಅಂಗಿಯ ಕಾಲರ್ ಹಿಡಿದು ಒದ್ದಿರುತ್ತಾರೆ ಹಾಗೂ ಮುಖಕ್ಕೆ ಗುದ್ದಿದ್ದಾರೆ. ಇದರಿಂದ ವಿಮಾನ ನಿಲ್ದಾಣದಲ್ಲಿ ಕೆಲ ಹೊತ್ತು ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಇತರ ಪ್ರಯಾಣಿಕರು ಆತಂಕಗೊಂಡಿದ್ದರು.</p>.<p>ಕರ್ತವ್ಯ ನಿರ್ವಹಣೆ ಅಡ್ಡಿ ಪಡಿಸಿದ ಯುವತಿಯನ್ನು ಸಿಐಎಸ್ಎಫ್ ಸಿಬ್ಬಂದಿ ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಯುವತಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>