ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಮಗಾರಿಗೆ ಅಡ್ಡಿ: ಕ್ರಮಕ್ಕೆ ಆಗ್ರಹ

Last Updated 9 ಮೇ 2022, 19:58 IST
ಅಕ್ಷರ ಗಾತ್ರ

ಬೆಂಗಳೂರು: ಆರ್.ಆರ್.ನಗರ ವಲಯಕ್ಕೆ ಸೇರಿರುವ ವಾರ್ಡ್ ನಂ.40ರ ವ್ಯಾಪ್ತಿಯ ಕರಿವೋಬನಹಳ್ಳಿ ಗ್ರಾಮದ ಎಸ್ಎಲ್ಎನ್ ಎನ್‌ಕ್ಲೇವ್ ಬಡಾವಣೆಯಲ್ಲಿ ಕೈಗೊಂಡಿರುವ ಒಳಚರಂಡಿ ಕಾಮಗಾರಿಗೆ ಅಡ್ಡಿಪಡಿಸುತ್ತಿರುವವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ.

ಸ್ಥಳೀಯರಾದ ಸುವರ್ಣಮ್ಮ ಮತ್ತು ಅವರ ಮಕ್ಕಳಾದ ಚೇತನ್ ಹಾಗೂ ಸೌಮ್ಯ ಕಾಮಗಾರಿಗೆ ಅಡ್ಡಿಪಡಿಸಿ,ರಸ್ತೆಯನ್ನು ಒತ್ತುವರಿ ಮಾಡಿದ್ದಾರೆ. ಜತೆಗೆ, ಜಲಮಂಡಳಿ ಅಳವಡಿಸಿದ್ದ ಒಳ ಚರಂಡಿ ಪೈಪ್ ಅನ್ನು ಕಿತ್ತು ಹಾಕಿದ್ದಾರೆ. ಮನೆಗಳಿಗೆ ಅಳವಡಿಸಿರುವ ಕೊಳವೆ ಬಾವಿ ನೀರಿನ ಪೈಪ್ ಸಂಪರ್ಕವನ್ನು ಕಿತ್ತು ಹಾಕಿದ್ದಾರೆ ಎಂದು ದೂರಿದ್ದಾರೆ.

ಈ ಬಗ್ಗೆ ಪೀಣ್ಯ ಪೊಲೀಸ್ ಠಾಣೆ ಯಲ್ಲಿ ದೂರು ದಾಖಲಾಗಿದೆ ಹಾಗೂ ಬಿಬಿಎಂಪಿ ಅಧಿಕಾರಿಗಳ ಗಮನಕ್ಕೂ ತರಲಾಗಿದೆ. ಆದರೆ ಇದು ವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT