ಈ ಸಂಬಂಧ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿರುವ ಸುಪ್ರೀಂ ಕೋರ್ಟ್, ‘ಇದು ನ್ಯಾಯದ ನಿರಾಕರಣೆ ಅಲ್ಲದೆ ಮತ್ತೇನಲ್ಲ. ವಕೀಲರೇ ಈ ಕೆಲಸ ಮಾಡಬಾರದು’ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಸುಪ್ರೀಂ ಕೋರ್ಟ್ನ ಕೆಲವು ವಕೀಲರ ಮನವಿಯ ಮೇರೆಗೆ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್ ಮತ್ತು ಡಿ.ವೈ. ಚಂದ್ರಚೂಡ್ ಅವರಿದ್ದ ಪೀಠವು ಪ್ರಕರಣ ದಾಖಲಿಸಿಕೊಂಡಿತು.