<p><strong>ಬೆಂಗಳೂರು:</strong> ‘ನಮ್ಮ ಮೆಟ್ರೊ’ ಕಾಮಗಾರಿ ನಡೆಯುತ್ತಿದ್ದ ವೇಳೆ ಆಯತಪ್ಪಿ ಸುಮಾರು 35 ಅಡಿ ಎತ್ತರದಿಂದ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ಕನಕಪುರ ಮುಖ್ಯರಸ್ತೆಯ ಬೈಯ್ಯನಪಾಳ್ಯದ ಭರಣಿ ಗ್ರಾನೈಟ್ ಮುಂಭಾಗದಲ್ಲಿ ನಡೆದಿದೆ.</p>.<p>ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನರಸಿಂಹಮೂರ್ತಿ (34) ಮೃತಪಟ್ಟವರು. ಮೃತನ ತಂದೆ ಹನುಮಂತಪ್ಪ ಅವರು ತಲಘಟ್ಟಪುರ ಠಾಣೆಯಲ್ಲಿ ದೂರು ನೀಡಿದ್ದಾರೆ.</p>.<p>ಇದೇ 16ರಂದು ಬೆಳಿಗ್ಗೆ 7.30ರ ಸುಮಾರಿಗೆ ಈ ಘಟನೆ ನಡೆದಿದೆ. ರಸ್ತೆಗೆ ಬಿದ್ದ ನರಸಿಂಹ ಮೂರ್ತಿಯನ್ನು ಆಸ್ಪತ್ರೆಗೆ ತಕ್ಷಣ ಕೊಂಡೊಯ್ದರೂ ಪ್ರಯೋಜನ ಆಗಲಿಲ್ಲ ಎಂದು ಕಾಮಗಾರಿ ಸ್ಥಳದಲ್ಲಿದ್ದ ಎಂಜಿನಿಯರ್ ಮಂಜುನಾಥ್ ಮತ್ತು ಮೇಲ್ವಿಚಾರಕ ಉಮೇಶ್ ಎಂಬವರು ನೀಡಿದ ಮಾಹಿತಿ ಆಧರಿಸಿ ದೂರು ದಾಖಲಾಗಿದೆ.</p>.<p>‘ವಾರದ ಹಿಂದೆಯಷ್ಟೆ ಮನೆಗೆ ಬಂದಿದ್ದ ಮಗ, ಎಲ್ಲರನ್ನೂ ಮಾತನಾಡಿಸಿಕೊಂಡು ಮರಳಿ ಬೆಂಗಳೂರಿಗೆ ತೆರಳಿದ್ದ. ಘಟನೆ ದಿನ ಬೆಳಿಗ್ಗೆ ಅಶೋಕ್ ಎಂಬವರು ಕರೆ ಮಾಡಿ ಮಾಹಿತಿ ನೀಡಿದರು’ ಎಂದೂ ದೂರಿನಲ್ಲಿ ಹನುಮಂತಪ್ಪ ತಿಳಿಸಿದ್ದಾರೆ.</p>.<p>‘ಫ್ಲೈ ಓವರ್ ಮೇಲೆ ಕೆಲಸ ಮಾಡುತ್ತಿದ್ದ ವೇಳೆ ಮುನ್ನೆಚ್ಚರಿಕೆ ಕ್ರಮ ತೆಗದುಕೊಳ್ಳದ ಕಾರಣ ಮಗ ಸಾವಿಗೀಡಾಗಿದ್ದಾನೆ. ಹೀಗಾಗಿ, ಕಾಮಗಾರಿ ಗುತ್ತಿಗೆ ವಹಿಸಿಕೊಂಡಿರುವ ಬಲರಾಮರೆಡ್ಡಿ, ಎಂಜಿನಿಯರ್ ಮಂಜುನಾಥ್ ಮತ್ತು ಮೇಲ್ವಿಚಾರಕ ಉಮೇಶ್ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕು’ ಎಂದೂ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ನಮ್ಮ ಮೆಟ್ರೊ’ ಕಾಮಗಾರಿ ನಡೆಯುತ್ತಿದ್ದ ವೇಳೆ ಆಯತಪ್ಪಿ ಸುಮಾರು 35 ಅಡಿ ಎತ್ತರದಿಂದ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ಕನಕಪುರ ಮುಖ್ಯರಸ್ತೆಯ ಬೈಯ್ಯನಪಾಳ್ಯದ ಭರಣಿ ಗ್ರಾನೈಟ್ ಮುಂಭಾಗದಲ್ಲಿ ನಡೆದಿದೆ.</p>.<p>ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನರಸಿಂಹಮೂರ್ತಿ (34) ಮೃತಪಟ್ಟವರು. ಮೃತನ ತಂದೆ ಹನುಮಂತಪ್ಪ ಅವರು ತಲಘಟ್ಟಪುರ ಠಾಣೆಯಲ್ಲಿ ದೂರು ನೀಡಿದ್ದಾರೆ.</p>.<p>ಇದೇ 16ರಂದು ಬೆಳಿಗ್ಗೆ 7.30ರ ಸುಮಾರಿಗೆ ಈ ಘಟನೆ ನಡೆದಿದೆ. ರಸ್ತೆಗೆ ಬಿದ್ದ ನರಸಿಂಹ ಮೂರ್ತಿಯನ್ನು ಆಸ್ಪತ್ರೆಗೆ ತಕ್ಷಣ ಕೊಂಡೊಯ್ದರೂ ಪ್ರಯೋಜನ ಆಗಲಿಲ್ಲ ಎಂದು ಕಾಮಗಾರಿ ಸ್ಥಳದಲ್ಲಿದ್ದ ಎಂಜಿನಿಯರ್ ಮಂಜುನಾಥ್ ಮತ್ತು ಮೇಲ್ವಿಚಾರಕ ಉಮೇಶ್ ಎಂಬವರು ನೀಡಿದ ಮಾಹಿತಿ ಆಧರಿಸಿ ದೂರು ದಾಖಲಾಗಿದೆ.</p>.<p>‘ವಾರದ ಹಿಂದೆಯಷ್ಟೆ ಮನೆಗೆ ಬಂದಿದ್ದ ಮಗ, ಎಲ್ಲರನ್ನೂ ಮಾತನಾಡಿಸಿಕೊಂಡು ಮರಳಿ ಬೆಂಗಳೂರಿಗೆ ತೆರಳಿದ್ದ. ಘಟನೆ ದಿನ ಬೆಳಿಗ್ಗೆ ಅಶೋಕ್ ಎಂಬವರು ಕರೆ ಮಾಡಿ ಮಾಹಿತಿ ನೀಡಿದರು’ ಎಂದೂ ದೂರಿನಲ್ಲಿ ಹನುಮಂತಪ್ಪ ತಿಳಿಸಿದ್ದಾರೆ.</p>.<p>‘ಫ್ಲೈ ಓವರ್ ಮೇಲೆ ಕೆಲಸ ಮಾಡುತ್ತಿದ್ದ ವೇಳೆ ಮುನ್ನೆಚ್ಚರಿಕೆ ಕ್ರಮ ತೆಗದುಕೊಳ್ಳದ ಕಾರಣ ಮಗ ಸಾವಿಗೀಡಾಗಿದ್ದಾನೆ. ಹೀಗಾಗಿ, ಕಾಮಗಾರಿ ಗುತ್ತಿಗೆ ವಹಿಸಿಕೊಂಡಿರುವ ಬಲರಾಮರೆಡ್ಡಿ, ಎಂಜಿನಿಯರ್ ಮಂಜುನಾಥ್ ಮತ್ತು ಮೇಲ್ವಿಚಾರಕ ಉಮೇಶ್ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕು’ ಎಂದೂ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>