ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಮಿಕನ ತುಂಡಾದ ಕೈ ಮರುಜೋಡಣೆ

ಸ್ಪರ್ಶ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ
Last Updated 7 ಆಗಸ್ಟ್ 2020, 23:34 IST
ಅಕ್ಷರ ಗಾತ್ರ

ಬೆಂಗಳೂರು: ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ನಡೆದ ದುರ್ಘಟನೆಯಿಂದ ತುಂಡಾಗಿದ್ದ 55 ವರ್ಷದ ವ್ಯಕ್ತಿಯ ಎಡಗೈಯನ್ನು ಸ್ಪರ್ಶ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ಮರುಜೋಡಿಸಿದ್ದಾರೆ.

ಕಾರ್ಖಾನೆಯಲ್ಲಿ ಯಂತ್ರವೊಂದಕ್ಕೆ ಕೈ ಸಿಲುಕಿದ ಪರಿಣಾಮ ವ್ಯಕ್ತಿಯ ಬೆರಳುಗಳು ಕೂಡ ಕತ್ತರಿಸಿ ಹೋಗಿದ್ದವು. ತುಂಡಾದ ಕೈಯೊಂದಿಗೆ ವ್ಯಕ್ತಿಯನ್ನು ಬೊಮ್ಮಸಂದ್ರದ ಸ್ಪರ್ಶ ಆಸ್ಪತ್ರೆಗೆ ದಾಖಲಿಸಲಾಯಿತು.

ಡಾ. ಜಿತೇಂದ್ರನ್ ನೇತೃತ್ವದ ಪ್ಲಾಸ್ಟಿಕ್ ಸರ್ಜರಿ ತಜ್ಞರ ತಂಡ ವ್ಯಕ್ತಿಯನ್ನು ಪರಿಶೀಲಿಸಿ, ಶಸ್ತ್ರಚಿಕಿತ್ಸೆ ಮಾಡಲು ನಿರ್ಧರಿಸಿತು. ಇದಕ್ಕೂ ಮೊದಲು ವ್ಯಕ್ತಿಗೆ ಕೋವಿಡ್ ಪರೀಕ್ಷೆಯನ್ನೂ ನಡೆಸಲಾಯಿತು. ಸೋಂಕು ತಗುಲಿಲ್ಲ ಎನ್ನುವುದು ದೃಢಪಡುತ್ತಿದ್ದಂತೆ ಶಸ್ತ್ರಚಿಕಿತ್ಸೆ ಆರಂಭಿಸಿದ ವೈದ್ಯರು, 10 ಗಂಟೆಗಳಲ್ಲಿ ಕೈ ಮರುಜೋಡಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT