‘ಸ್ವಾಮಿ ಆತ್ಮಹತ್ಯೆ ಬಗ್ಗೆ ಪತ್ನಿ ದೂರು ನೀಡಿದ್ದಾರೆ. ‘ಮರಳು ದಾಸ್ತಾನು ಕೇಂದ್ರದಲ್ಲಿರುವ ಚಾಲಕ ಸುರೇಶ್, ಚಂದ್ರು ಹಾಗೂ ಮಣಿ ಎಂಬುವರು ಕೆಲಸದ ವಿಚಾರವಾಗಿ ಪತಿ ಸ್ವಾಮಿ ಅವರಿಗೆ ಕಿರುಕುಳ ನೀಡುತ್ತಿದ್ದರು. ಜೀವ ಬೆದರಿಕೆಯೊಡ್ಡಿದ್ದರು. ಇದರಿಂದ ನೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಾವಿಗೆ ಸುರೇಶ್, ಚಂದ್ರು ಹಾಗೂ ಮಣಿ ಕಾರಣ’ ಎಂಬುದಾಗಿ ಪತ್ನಿ ಆರೋಪಿಸಿದ್ದಾರೆ. ಮೂವರ ವಿರುದ್ಧವೂ ಎಫ್ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.