ಬೆಂಗಳೂರು: ಕೊರೊನಾ ಸೋಂಕು ಕಾರಣ ಲಾಕ್ಡೌನ್ ಜಾರಿಯಾದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸಿಲುಕಿಕೊಂಡಿದ್ದ ಹೊರರಾಜ್ಯದ ಜನರಿಗಾಗಿ ರಾಜ್ಯ ಸರ್ಕಾರ ವಿಶೇಷ ರೈಲು ವ್ಯವಸ್ಥೆ ಮಾಡಿದ್ದು, ಪ್ರಯಾಣಿಕರು ರೈಲು ನಿಲ್ದಾಣದಲ್ಲಿ ಜಮಾಯಿಸಿದ್ದು ಸೋಮವಾರ ಕಂಡು ಬಂತು.
ಚಿಕ್ಕಬಾಣಾವರ ರೈಲು ನಿಲ್ದಾಣದಿಂದ ವಿಶೇಷ ರೈಲಿನಲ್ಲಿ ರಾಜಸ್ಥಾನದ ಜೈಪುರ ನಗರಕ್ಕೆ ಜನ ತಮ್ಮ ಸಾಮಾನು ಸರಂಜಾಮುಗಳನ್ನು ಮೂಟೆ ಕಟ್ಟಿಕೊಂಡು ಹೊರಟರು.ಪೊಲೀಸರು ಎಲ್ಲಾ ಕಾರ್ಮಿಕರಿಗೂ ತೆರಳಲು ಸಹಕರಿಸುತ್ತಿದ್ದುದು ಕಂಡು ಬಂತು.