ತವರು ರಾಜ್ಯಕ್ಕೆ ಕಳುಹಿಸಿಕೊಡಿ ಎಂದು ಒತ್ತಾಯಿಸಿದ ಜಾರ್ಖಂಡ್ ಕಾರ್ಮಿಕರು, ಬಿಎಂಆರ್ಸಿಎಲ್ ವಿರುದ್ಧ ಪ್ರತಿಭಟನೆ ನಡೆಸಿದರು. ‘ಬಿಹಾರ ರಾಜ್ಯದವರನ್ನು ಅವರ ರಾಜ್ಯಕ್ಕೆ ಕಳುಹಿಸಿಕೊಡಲಾಗಿದೆ. ನಮ್ಮನ್ನೂ ಇಂದೇ (ಭಾನುವಾರ) ನಮ್ಮ ರಾಜ್ಯಕ್ಕೆ ಕಳುಹಿಸಿಕೊಡಿ’ ಎಂದು ಒತ್ತಾಯಿಸಿದರು.‘ಮಾರ್ಚ್, ಏಪ್ರಿಲ್ ತಿಂಗಳ ವೇತನ ಆಗಿಲ್ಲ’ ಎಂದು ಕೆಲವು ಕಾರ್ಮಿಕರು ದೂರಿದರು.