ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ‘ಇಲಾಖೆಗೆ ಸಂಬಂಧಿಸಿದ ಕಚೇರಿಗಳು ಬೇರೆ ಬೇರೆ ಕಡೆ ಇರುವ ಕಾರಣ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ ಎಂಬುದನ್ನು ಗಮನಿಸಿದ್ದೇನೆ. ಮುಂದಿನ ದಿನಗಳಲ್ಲಿ ಇದನ್ನು ನಿವಾರಿಸುವ ಮೂಲಕ ಇಲಾಖೆ ಕಾರ್ಯವೈಖರಿಗೆ ವೇಗ ನೀಡಬೇಕು. ಖಾಲಿ ಇರುವ ಹುದ್ದೆಗಳ ಭರ್ತಿಗೂ ಪ್ರಸ್ತಾವನೆ ಸಲ್ಲಿಸಿ’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.