<p><strong>ಬೆಂಗಳೂರು</strong>: ‘ಉದ್ಯೋಗ ಸ್ಥಳದಲ್ಲಿ ಮಹಿಳೆಯರಿಗೆ ಸುರಕ್ಷಿತ, ಉತ್ತಮ ವಾತಾವರಣ ಇರಬೇಕು ಎನ್ನುವ ಕಾರಣದಿಂದಲೇ ಕಾನೂನು ರೂಪಿಸಲಾಗಿದ್ದು, ಹೆದರಿಕೆ, ಸಂಕೋಚಗಳಿಗೆ ಒಳಗಾಗದೆ ತೊಂದರೆಗೆ ಒಳಗಾದವರು ದೂರು ದಾಖಲಿಸಬೇಕು’ ಎಂದು ಎಂದು ವಕೀಲರಾದ ವಸಂತ ಕವಿತಾ ತಿಳಿಸಿದರು.</p>.<p>ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಲಿಂಗ ಆಧಾರಿತ ಹಿಂಸೆ ಮತ್ತು ಲಿಂಗ ಸಂವೇದನಾ ಕೋಶ ಆಯೋಜಿಸಿದ್ದ 'ಲಿಂಗ ಸಂವೇದನೆ ಹಾಗೂ ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ ತಡೆ ಕಾಯ್ದೆ’ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.</p>.<p>‘ಉದ್ಯೋಗ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗೆ ಕೇಂದ್ರ ಸರ್ಕಾರ 2013ರಲ್ಲಿಈ ಕಾಯ್ದೆ ಜಾರಿಗೆ ತಂದಿದೆ. ಜತೆಗೆ ಆಂತರಿಕ ದೂರು ಸಮಿತಿ ರಚನೆ ಕುರಿತು ಗಂಭೀರ ಕ್ರಮಗಳನ್ನು ಕೈಗೊಂಡಿದೆ. ಸಮಿತಿಯು ಒತ್ತಡಗಳಿಗೆ ಒಳಗಾಗದೇ ಕಾರ್ಯ ನಿರ್ವಹಿಸುತ್ತದೆ’ ಎಂದರು.</p>.<p>‘ಲೈಂಗಿಕ ಕಿರುಕುಳ, ಅಶ್ಲೀಲ ನಡುವಳಿಕೆಗಳು ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ನಡೆದರೆ ಆಂತರಿಕ ದೂರು ಸಮಿತಿ ಗಮನಕ್ಕೆ ತರಬೇಕಾಗುತ್ತದೆ. ಸಮಿತಿಯು ಯಾವುದೇ ಹಂತದ ಅಧಿಕಾರಿಯಾಗಿದ್ದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತದೆ’ ಎಂದು ತಿಳಿಸಿದರು.</p>.<p>ಕೋಶದ ನೋಡಲ್ ಅಧಿಕಾರಿ ಬಿ.ಶೈಲಶ್ರೀ ಮಾತನಾಡಿ, ‘ಬೆಂಗಳೂರು ವಿ.ವಿ ವ್ಯಾಪ್ತಿಯಲ್ಲಿ ಯಾವುದೇ ಲೈಂಗಿಕ ಕಿರುಕುಳ ಪ್ರಕರಣ ನಡೆದರೆ ‘ಶೀ ಬಾಕ್ಸ್’ ಮೂಲಕ ದೂರನ್ನು ದಾಖಲಿಸಬಹುದು. ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು’ ಎಂದರು.</p>.<p>ಕೋಶದ ಸದಸ್ಯರಾದ ಬಿ.ಎಲ್.ಮುರುಳಿಧರ, ಶೋಭಾ ಎಂ. ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಉದ್ಯೋಗ ಸ್ಥಳದಲ್ಲಿ ಮಹಿಳೆಯರಿಗೆ ಸುರಕ್ಷಿತ, ಉತ್ತಮ ವಾತಾವರಣ ಇರಬೇಕು ಎನ್ನುವ ಕಾರಣದಿಂದಲೇ ಕಾನೂನು ರೂಪಿಸಲಾಗಿದ್ದು, ಹೆದರಿಕೆ, ಸಂಕೋಚಗಳಿಗೆ ಒಳಗಾಗದೆ ತೊಂದರೆಗೆ ಒಳಗಾದವರು ದೂರು ದಾಖಲಿಸಬೇಕು’ ಎಂದು ಎಂದು ವಕೀಲರಾದ ವಸಂತ ಕವಿತಾ ತಿಳಿಸಿದರು.</p>.<p>ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಲಿಂಗ ಆಧಾರಿತ ಹಿಂಸೆ ಮತ್ತು ಲಿಂಗ ಸಂವೇದನಾ ಕೋಶ ಆಯೋಜಿಸಿದ್ದ 'ಲಿಂಗ ಸಂವೇದನೆ ಹಾಗೂ ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ ತಡೆ ಕಾಯ್ದೆ’ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.</p>.<p>‘ಉದ್ಯೋಗ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗೆ ಕೇಂದ್ರ ಸರ್ಕಾರ 2013ರಲ್ಲಿಈ ಕಾಯ್ದೆ ಜಾರಿಗೆ ತಂದಿದೆ. ಜತೆಗೆ ಆಂತರಿಕ ದೂರು ಸಮಿತಿ ರಚನೆ ಕುರಿತು ಗಂಭೀರ ಕ್ರಮಗಳನ್ನು ಕೈಗೊಂಡಿದೆ. ಸಮಿತಿಯು ಒತ್ತಡಗಳಿಗೆ ಒಳಗಾಗದೇ ಕಾರ್ಯ ನಿರ್ವಹಿಸುತ್ತದೆ’ ಎಂದರು.</p>.<p>‘ಲೈಂಗಿಕ ಕಿರುಕುಳ, ಅಶ್ಲೀಲ ನಡುವಳಿಕೆಗಳು ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ನಡೆದರೆ ಆಂತರಿಕ ದೂರು ಸಮಿತಿ ಗಮನಕ್ಕೆ ತರಬೇಕಾಗುತ್ತದೆ. ಸಮಿತಿಯು ಯಾವುದೇ ಹಂತದ ಅಧಿಕಾರಿಯಾಗಿದ್ದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತದೆ’ ಎಂದು ತಿಳಿಸಿದರು.</p>.<p>ಕೋಶದ ನೋಡಲ್ ಅಧಿಕಾರಿ ಬಿ.ಶೈಲಶ್ರೀ ಮಾತನಾಡಿ, ‘ಬೆಂಗಳೂರು ವಿ.ವಿ ವ್ಯಾಪ್ತಿಯಲ್ಲಿ ಯಾವುದೇ ಲೈಂಗಿಕ ಕಿರುಕುಳ ಪ್ರಕರಣ ನಡೆದರೆ ‘ಶೀ ಬಾಕ್ಸ್’ ಮೂಲಕ ದೂರನ್ನು ದಾಖಲಿಸಬಹುದು. ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು’ ಎಂದರು.</p>.<p>ಕೋಶದ ಸದಸ್ಯರಾದ ಬಿ.ಎಲ್.ಮುರುಳಿಧರ, ಶೋಭಾ ಎಂ. ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>