<p><strong>ಬೆಂಗಳೂರು:</strong> ‘ಸಾರ್ವಜನಿಕರಿಗೆ ಸಮಸ್ಯೆ ಆಗದಂತೆ ಕ್ಷೇತ್ರದಲ್ಲಿ ನವನಗರೋತ್ಥಾನ ಯೋಜನೆಯಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಹಂತಹಂತವಾಗಿ ಕೈಗೊಳ್ಳಲಾಗಿದೆ’ ಎಂದು ಶಾಸಕ ಎಂ.ಕೃಷ್ಣಪ್ಪ ತಿಳಿಸಿದರು.</p>.<p>ಕನಕಪುರ ರಸ್ತೆಯ ಸಿಂಗಾಪುರ್ ಗಾರ್ಡನ್ ಬಡಾವಣೆ ಬಳಿ ₹8 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಕ್ಷೇತ್ರದ ಎಲ್ಲ ರಸ್ತೆ ಮತ್ತು ಒಳಚರಂಡಿ ಕಾಮಗಾರಿ, ಉದ್ಯಾನ, ಬೀದಿ ದೀಪಗಳ ವ್ಯವಸ್ಥೆಯನ್ನು ಕಲ್ಪಿಸಲು ನಗರೋತ್ಥಾನ ವತಿಯಿಂದ ಕೋಟಿಗಟ್ಟಲೆ ಹಣ ಬಿಡುಗಡೆಯಾಗಿದೆ. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಕೈಗೊಂಡು ಶೀಘ್ರದಲ್ಲೇ ಮುಗಿಸಿ ನಾಗರಿಕರಿಗೆ ಸೌಲಭ್ಯಕ್ಕೆ ಸಿಗುವಂತೆ ಮಾಡಬೇಕು’ ಎಂದು ಸೂಚಿಸಿದರು.</p>.<p>‘ಕನಕಪುರ ರಸ್ತೆಯಿಂದ ಗುಬ್ಬಲಾಳ, ಸುಬ್ರಹ್ಮಣ್ಯಪುರ, ಉತ್ತರಹಳ್ಳಿಯವರೆಗೆ ರಸ್ತೆ ಡಾಂಬರೀಕರಣ ಕಾಮಗಾರಿ ನಡೆಯಲಿದೆ’ ಎಂದೂ ಹೇಳಿದರು.</p>.<p>ಸ್ಥಳೀಯ ಮುಖಂಡ ಹನುಮಂತಯ್ಯ,‘ಈ ವ್ಯಾಪ್ತಿ ಸಂಪೂರ್ಣ ಗ್ರಾಮೀಣ ಪ್ರದೇಶಕ್ಕೆ ಸೇರ್ಪಡೆಯಾಗಿತ್ತು. ಅಭಿವೃದ್ಧಿಗೆ ಸಾಕಷ್ಟು ಅನುದಾನವೂ ಇರಲಿಲ್ಲ. ಕೃಷ್ಣಪ್ಪ ಅವರು ಶಾಸಕರಾದ ನಂತರ ವಿವಿಧ ಮೂಲಗಳಿಂದಹಂತಹಂತವಾಗಿ ಅನುದಾನ ತಂದಿದ್ದಾರೆ. ಇದರಿಂದ ಕ್ಷೇತ್ರ ಸಾಕಷ್ಟು ಅಭಿವೃದ್ಧಿಯನ್ನು ಕಂಡಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಸಾರ್ವಜನಿಕರಿಗೆ ಸಮಸ್ಯೆ ಆಗದಂತೆ ಕ್ಷೇತ್ರದಲ್ಲಿ ನವನಗರೋತ್ಥಾನ ಯೋಜನೆಯಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಹಂತಹಂತವಾಗಿ ಕೈಗೊಳ್ಳಲಾಗಿದೆ’ ಎಂದು ಶಾಸಕ ಎಂ.ಕೃಷ್ಣಪ್ಪ ತಿಳಿಸಿದರು.</p>.<p>ಕನಕಪುರ ರಸ್ತೆಯ ಸಿಂಗಾಪುರ್ ಗಾರ್ಡನ್ ಬಡಾವಣೆ ಬಳಿ ₹8 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಕ್ಷೇತ್ರದ ಎಲ್ಲ ರಸ್ತೆ ಮತ್ತು ಒಳಚರಂಡಿ ಕಾಮಗಾರಿ, ಉದ್ಯಾನ, ಬೀದಿ ದೀಪಗಳ ವ್ಯವಸ್ಥೆಯನ್ನು ಕಲ್ಪಿಸಲು ನಗರೋತ್ಥಾನ ವತಿಯಿಂದ ಕೋಟಿಗಟ್ಟಲೆ ಹಣ ಬಿಡುಗಡೆಯಾಗಿದೆ. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಕೈಗೊಂಡು ಶೀಘ್ರದಲ್ಲೇ ಮುಗಿಸಿ ನಾಗರಿಕರಿಗೆ ಸೌಲಭ್ಯಕ್ಕೆ ಸಿಗುವಂತೆ ಮಾಡಬೇಕು’ ಎಂದು ಸೂಚಿಸಿದರು.</p>.<p>‘ಕನಕಪುರ ರಸ್ತೆಯಿಂದ ಗುಬ್ಬಲಾಳ, ಸುಬ್ರಹ್ಮಣ್ಯಪುರ, ಉತ್ತರಹಳ್ಳಿಯವರೆಗೆ ರಸ್ತೆ ಡಾಂಬರೀಕರಣ ಕಾಮಗಾರಿ ನಡೆಯಲಿದೆ’ ಎಂದೂ ಹೇಳಿದರು.</p>.<p>ಸ್ಥಳೀಯ ಮುಖಂಡ ಹನುಮಂತಯ್ಯ,‘ಈ ವ್ಯಾಪ್ತಿ ಸಂಪೂರ್ಣ ಗ್ರಾಮೀಣ ಪ್ರದೇಶಕ್ಕೆ ಸೇರ್ಪಡೆಯಾಗಿತ್ತು. ಅಭಿವೃದ್ಧಿಗೆ ಸಾಕಷ್ಟು ಅನುದಾನವೂ ಇರಲಿಲ್ಲ. ಕೃಷ್ಣಪ್ಪ ಅವರು ಶಾಸಕರಾದ ನಂತರ ವಿವಿಧ ಮೂಲಗಳಿಂದಹಂತಹಂತವಾಗಿ ಅನುದಾನ ತಂದಿದ್ದಾರೆ. ಇದರಿಂದ ಕ್ಷೇತ್ರ ಸಾಕಷ್ಟು ಅಭಿವೃದ್ಧಿಯನ್ನು ಕಂಡಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>