<p><strong>ಬೆಂಗಳೂರು</strong>: ವಿಶ್ವ ಅಲ್ಝೈಮರ್ (ಮರೆವು ಕಾಯಿಲೆ) ಮಾಸಿಕದ ಪ್ರಯುಕ್ತ ಲಯನ್ಸ್ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ 317ಎಫ್ ಇದೇ 27ರಂದು ಬೆಳಿಗ್ಗೆ 6.45ರಿಂದ ವಾಕಥಾನ್ ಹಮ್ಮಿಕೊಂಡಿದ್ದು, ಮರೆವು ಕಾಯಿಲೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ.</p>.<p>ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಸಂಯೋಜಕಿ (ಮಾನಸಿಕ ಆರೋಗ್ಯ) ಜಿ. ಅನುಪಮಾ, ‘ಈ ವಾಕಥಾನ್ ಸ್ವಾತಂತ್ರ್ಯ ಉದ್ಯಾನದಿಂದ ವಿಧಾನಸೌಧದವರೆಗೆ ನಡೆಯಲಿದೆ. ವೈದ್ಯಕೀಯ ಹಾಗೂ ಶಿಕ್ಷಣ ತಜ್ಞರು ವಾಕಥಾನ್ನಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ರೋಗದ ಬಗ್ಗೆ ಜಾಗೃತಿ ಮೂಡಿಸಿ, ತಪ್ಪು ಕಲ್ಪನೆಯನ್ನು ಹೋಗಲಾಡಿಸಬೇಕು. ಈ ಕಾಯಿಲೆ ಎದುರಿಸುತ್ತಿರುವವರಿಗೆ ಸಹಾನುಭೂತಿಯ ಆರೈಕೆ ಅಗತ್ಯ’ ಎಂದು ಹೇಳಿದರು. </p>.<p>‘ದಿನನಿತ್ಯದ ಜೀವನದಲ್ಲಿ ನೆನಪಿನ ಶಕ್ತಿ ಕಡಿಮೆಯಾಗುವುದು, ಸ್ಥಳ ಮತ್ತು ಸಮಯದ ಬಗ್ಗೆ ಗೊಂದಲ, ವಸ್ತುಗಳನ್ನು ಎಲ್ಲೆಂದರಲ್ಲಿ ಇಡುವುದು, ದೃಶ್ಯಗಳು ಹಾಗೂ ಚಿತ್ರಗಳನ್ನು ಗುರುತಿಸುವಲ್ಲಿ ವಿಫಲರಾಗುವುದು ಸೇರಿ ವಿವಿಧ ಲಕ್ಷಣಗಳನ್ನು ಈ ಕಾಯಿಲೆಗೆ ಒಳಗಾದವರು ಎದುರಿಸುತ್ತಾರೆ’ ಎಂದು ತಿಳಿಸಿದರು. </p>.<p>‘ಸಕ್ರಿಯವಾಗಿದ್ದಲ್ಲಿ ಕಾಯಿಲೆಯ ಅಪಾಯವನ್ನು ಕಡಿಮೆ ಮಾಡಬಹುದು. ಸಮುದಾಯದ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದು, ಸ್ನೇಹಿತರು ಮತ್ತು ಕುಟುಂಬದೊಂದಿಗೆ ಸಂಪರ್ಕದಲ್ಲಿರುವುದು, ನಿಯಮಿತ ವ್ಯಾಯಾಮ, ಧೂಮಪಾನ ಮತ್ತು ಮದ್ಯಪಾನದಿಂದ ದೂರವಿರುವುದು, ಆರೋಗ್ಯಕರ ಆಹಾರ ಪದ್ಧತಿ ಸೇರಿ ವಿವಿಧ ಕ್ರಮಗಳಿಂದ ರೋಗದ ಅಪಾಯ ಕಡಿಮೆ ಮಾಡಬಹುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವಿಶ್ವ ಅಲ್ಝೈಮರ್ (ಮರೆವು ಕಾಯಿಲೆ) ಮಾಸಿಕದ ಪ್ರಯುಕ್ತ ಲಯನ್ಸ್ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ 317ಎಫ್ ಇದೇ 27ರಂದು ಬೆಳಿಗ್ಗೆ 6.45ರಿಂದ ವಾಕಥಾನ್ ಹಮ್ಮಿಕೊಂಡಿದ್ದು, ಮರೆವು ಕಾಯಿಲೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ.</p>.<p>ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಸಂಯೋಜಕಿ (ಮಾನಸಿಕ ಆರೋಗ್ಯ) ಜಿ. ಅನುಪಮಾ, ‘ಈ ವಾಕಥಾನ್ ಸ್ವಾತಂತ್ರ್ಯ ಉದ್ಯಾನದಿಂದ ವಿಧಾನಸೌಧದವರೆಗೆ ನಡೆಯಲಿದೆ. ವೈದ್ಯಕೀಯ ಹಾಗೂ ಶಿಕ್ಷಣ ತಜ್ಞರು ವಾಕಥಾನ್ನಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ರೋಗದ ಬಗ್ಗೆ ಜಾಗೃತಿ ಮೂಡಿಸಿ, ತಪ್ಪು ಕಲ್ಪನೆಯನ್ನು ಹೋಗಲಾಡಿಸಬೇಕು. ಈ ಕಾಯಿಲೆ ಎದುರಿಸುತ್ತಿರುವವರಿಗೆ ಸಹಾನುಭೂತಿಯ ಆರೈಕೆ ಅಗತ್ಯ’ ಎಂದು ಹೇಳಿದರು. </p>.<p>‘ದಿನನಿತ್ಯದ ಜೀವನದಲ್ಲಿ ನೆನಪಿನ ಶಕ್ತಿ ಕಡಿಮೆಯಾಗುವುದು, ಸ್ಥಳ ಮತ್ತು ಸಮಯದ ಬಗ್ಗೆ ಗೊಂದಲ, ವಸ್ತುಗಳನ್ನು ಎಲ್ಲೆಂದರಲ್ಲಿ ಇಡುವುದು, ದೃಶ್ಯಗಳು ಹಾಗೂ ಚಿತ್ರಗಳನ್ನು ಗುರುತಿಸುವಲ್ಲಿ ವಿಫಲರಾಗುವುದು ಸೇರಿ ವಿವಿಧ ಲಕ್ಷಣಗಳನ್ನು ಈ ಕಾಯಿಲೆಗೆ ಒಳಗಾದವರು ಎದುರಿಸುತ್ತಾರೆ’ ಎಂದು ತಿಳಿಸಿದರು. </p>.<p>‘ಸಕ್ರಿಯವಾಗಿದ್ದಲ್ಲಿ ಕಾಯಿಲೆಯ ಅಪಾಯವನ್ನು ಕಡಿಮೆ ಮಾಡಬಹುದು. ಸಮುದಾಯದ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದು, ಸ್ನೇಹಿತರು ಮತ್ತು ಕುಟುಂಬದೊಂದಿಗೆ ಸಂಪರ್ಕದಲ್ಲಿರುವುದು, ನಿಯಮಿತ ವ್ಯಾಯಾಮ, ಧೂಮಪಾನ ಮತ್ತು ಮದ್ಯಪಾನದಿಂದ ದೂರವಿರುವುದು, ಆರೋಗ್ಯಕರ ಆಹಾರ ಪದ್ಧತಿ ಸೇರಿ ವಿವಿಧ ಕ್ರಮಗಳಿಂದ ರೋಗದ ಅಪಾಯ ಕಡಿಮೆ ಮಾಡಬಹುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>