ಸಂಸ್ಥೆಯ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ ನೇತೃತ್ವದಲ್ಲಿ ಈ ಉತ್ಸವ ನಡೆಯಲಿದೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಡಾ. ವಿವೇಕ್ ಮೂರ್ತಿ, ಅಮೆರಿಕದ ಸಂಸದರಾದ ರಿಕ್ ಸ್ಕಾಟ್, ನ್ಯಾನ್ಸಿ ಪೆಲೋಸಿ ಮುಖ್ಯಭಾಷಣಕಾರರಾಗಿ ಭಾಗವಹಿಸಲಿದ್ದಾರೆ. 17 ಸಾವಿರ ಕಲಾವಿದರು, 100ಕ್ಕೂ ಹೆಚ್ಚು ದೇಶಗಳ ಚಿಂತಕರು ಹಾಗೂ 2 ಲಕ್ಷಕ್ಕೂ ಅಧಿಕ ಜನ ಪಾಲ್ಗೊಳ್ಳುವ ನಿರೀಕ್ಷೆಯನ್ನು ಸಂಸ್ಥೆ ಹೊಂದಿದೆ.