ಈ ವೇಳೆ ಮಾತನಾಡಿದ ಮಧುಮೇಹ ತಜ್ಞ ಡಾ. ಎಲ್.ಶ್ರೀನಿವಾಸಮೂರ್ತಿ,‘ಆರೋಗ್ಯ ರಕ್ಷಣೆಗಾಗಿ ವಿಶ್ವದಾದ್ಯಂತ ಖರ್ಚು ಮಾಡುತ್ತಿರುವ ಹಣದಲ್ಲಿ ಒಂದು ಪಾಲನ್ನು ಮಧುಮೇಹ ಕಾಯಿಲೆ ನಿರ್ವಹಣೆಗಾಗಿಯೇ ವ್ಯಯಿಸಲಾಗುತ್ತಿದೆ. ಈ ಅಂಶವನ್ನು ಗಮನಿಸಿದಾಗ, ಈ ಕಾಯಿಲೆಯು ಎಷ್ಟರಮಟ್ಟಿಗೆ ವ್ಯಾಪಿಸಿದೆ ಎಂಬುದನ್ನು ಸೂಚಿಸುತ್ತದೆ. ಜಾಗತಿಕ ಅಭಿವೃದ್ಧಿಗೂ ತೊಡಕಾಗಲು ಕಾರಣವಾಗಿರುವ ಈ ರೋಗವನ್ನು ನಿಯಂತ್ರಿಸಲು ಹಾಗೂ ನಿರ್ವಹಣೆ ಮಾಡಲು ಜನಸಾಮಾನ್ಯರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ’ ಎಂದರು.