<p><strong>ಬೆಂಗಳೂರು:</strong> ವಿಶ್ವ ಪರಿಸರ ದಿನದ ಅಂಗವಾಗಿ ಬಿಬಿಎಂಪಿ ವತಿಯಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ ‘ಕೋಟಿ ವೃಕ್ಷ ಆಂದೋಲನ’ಕ್ಕೆ ಚಾಲನೆ ನೀಡಲಾಯಿತು. ಸಸಿ ನೆಡುವ ಮೂಲಕ ಮೇಯರ್ ಗೌತಮ್ ಕುಮಾರ್ ಚಾಲನೆ ನೀಡಿದರು.</p>.<p>ಪಾಲಿಕೆ ಅರಣ್ಯ ವಿಭಾಗ,ಕೋಟಿ ವೃಕ್ಷ ಸೈನ್ಯ, ಎನ್.ಜಿ.ಓ ಹಾಗೂ ಸಾರ್ವಜನಿಕರ ಸಹಯೋಗದಲ್ಲಿ ಮುಂದಿನ ಮೂರು ವರ್ಷಗಳಲ್ಲಿ 1 ಕೋಟಿ ಸಸಿ ನೆಟ್ಟು ಪೋಷಿಸುವ ಗುರಿ ಹೊಂದಲಾಗಿದೆ ಎಂದು ಅವರು ತಿಳಿಸಿದರು.</p>.<p>‘ಪರಿಸರ ದಿನದ ಅಂಗವಾಗಿ ಪ್ರತಿವರ್ಷವೂ ಗಿಡಗಳನ್ನು ನೆಡಲಾಗುತ್ತದೆ. ಆದರೆ, ಅದನ್ನು ಪೋಷಿಸುವ ಕಾರ್ಯ ಮಾಡುವುದು ಕಡಿಮೆ. ಈ ನಿಟ್ಟಿನಲ್ಲಿ ಪಾಲಿಕೆಯು ಸರ್ಕಾರೇತರ ಸಂಸ್ಥೆಗಳ ಸಹಯೋಗದಲ್ಲಿ ಸಸಿಗಳನ್ನು ನೆಟ್ಟು ನಿರ್ವಹಣೆ ಮಾಡುವ ಕೆಲಸ ಮಾಡಲಿದೆ’ ಎಂದರು.</p>.<p>ಶಾಸಕ ದಿನೇಶ್ ಗುಂಡೂರಾವ್, ‘ಪರಿಸರ ಮಾಲಿನ್ಯದಿಂದ ಅನೇಕ ನೈಸರ್ಗಿಕ ವಿಕೋಪಗಳು ಉಂಟಾಗುತ್ತಿವೆ. ಅದನ್ನು ತಡೆಯಬೇಕಾದರೆ ನಾವು ಪರಿಸರವನ್ನು ಕಾಪಾಡಬೇಕು’ ಎಂದರು.</p>.<p>ಪಾಲಿಕೆ ಅರಣ್ಯ ವಿಭಾಗದ ವಿಶೇಷ ಆಯುಕ್ತ ಜಿ.ಮಂಜುನಾಥ್, ‘ಪಾಲಿಕೆಯಲ್ಲಿ ನಾಲ್ಕು ನರ್ಸರಿಗಳಿದ್ದು, ಸುಮಾರು 10 ಲಕ್ಷ ಸಸಿಗಳು ಇವೆ. ಅದನ್ನು ಪಾಲಿಕೆ, ಸಾರ್ವಜನಿಕರು ಹಾಗೂ ಸರ್ಕಾರೇತರ ಸಂಸ್ಥೆಗಳ ಸಹಯೋಗದಲ್ಲಿ ನೆಡಲಾಗುವುದು’ ಎಂದು ಹೇಳಿದರು.</p>.<p>ಪಾಲಿಕೆ ಆಯುಕ್ತ ಬಿ.ಎಚ್. ಅನಿಲ್ಕುಮಾರ್ ಮಾತನಾಡಿದರು. ತೋಟಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ಉಮಾದೇವಿ ನಾಗರಾಜು, ಅಪೀಲು ಸ್ಥಾಯಿ ಸಮಿತಿ ಅಧ್ಯಕ್ಷ ಲಕ್ಷ್ಮೀನಾರಾಯಣ, ಆಡಳಿತ ಪಕ್ಷದ ನಾಯಕ ಕೆ.ಎ.ಮುನೀಂದ್ರ ಕುಮಾರ್, ವಿರೋಧ ಪಕ್ಷದ ನಾಯಕ ಅಬ್ದುಲ್ ವಾಜಿದ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಿಶ್ವ ಪರಿಸರ ದಿನದ ಅಂಗವಾಗಿ ಬಿಬಿಎಂಪಿ ವತಿಯಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ ‘ಕೋಟಿ ವೃಕ್ಷ ಆಂದೋಲನ’ಕ್ಕೆ ಚಾಲನೆ ನೀಡಲಾಯಿತು. ಸಸಿ ನೆಡುವ ಮೂಲಕ ಮೇಯರ್ ಗೌತಮ್ ಕುಮಾರ್ ಚಾಲನೆ ನೀಡಿದರು.</p>.<p>ಪಾಲಿಕೆ ಅರಣ್ಯ ವಿಭಾಗ,ಕೋಟಿ ವೃಕ್ಷ ಸೈನ್ಯ, ಎನ್.ಜಿ.ಓ ಹಾಗೂ ಸಾರ್ವಜನಿಕರ ಸಹಯೋಗದಲ್ಲಿ ಮುಂದಿನ ಮೂರು ವರ್ಷಗಳಲ್ಲಿ 1 ಕೋಟಿ ಸಸಿ ನೆಟ್ಟು ಪೋಷಿಸುವ ಗುರಿ ಹೊಂದಲಾಗಿದೆ ಎಂದು ಅವರು ತಿಳಿಸಿದರು.</p>.<p>‘ಪರಿಸರ ದಿನದ ಅಂಗವಾಗಿ ಪ್ರತಿವರ್ಷವೂ ಗಿಡಗಳನ್ನು ನೆಡಲಾಗುತ್ತದೆ. ಆದರೆ, ಅದನ್ನು ಪೋಷಿಸುವ ಕಾರ್ಯ ಮಾಡುವುದು ಕಡಿಮೆ. ಈ ನಿಟ್ಟಿನಲ್ಲಿ ಪಾಲಿಕೆಯು ಸರ್ಕಾರೇತರ ಸಂಸ್ಥೆಗಳ ಸಹಯೋಗದಲ್ಲಿ ಸಸಿಗಳನ್ನು ನೆಟ್ಟು ನಿರ್ವಹಣೆ ಮಾಡುವ ಕೆಲಸ ಮಾಡಲಿದೆ’ ಎಂದರು.</p>.<p>ಶಾಸಕ ದಿನೇಶ್ ಗುಂಡೂರಾವ್, ‘ಪರಿಸರ ಮಾಲಿನ್ಯದಿಂದ ಅನೇಕ ನೈಸರ್ಗಿಕ ವಿಕೋಪಗಳು ಉಂಟಾಗುತ್ತಿವೆ. ಅದನ್ನು ತಡೆಯಬೇಕಾದರೆ ನಾವು ಪರಿಸರವನ್ನು ಕಾಪಾಡಬೇಕು’ ಎಂದರು.</p>.<p>ಪಾಲಿಕೆ ಅರಣ್ಯ ವಿಭಾಗದ ವಿಶೇಷ ಆಯುಕ್ತ ಜಿ.ಮಂಜುನಾಥ್, ‘ಪಾಲಿಕೆಯಲ್ಲಿ ನಾಲ್ಕು ನರ್ಸರಿಗಳಿದ್ದು, ಸುಮಾರು 10 ಲಕ್ಷ ಸಸಿಗಳು ಇವೆ. ಅದನ್ನು ಪಾಲಿಕೆ, ಸಾರ್ವಜನಿಕರು ಹಾಗೂ ಸರ್ಕಾರೇತರ ಸಂಸ್ಥೆಗಳ ಸಹಯೋಗದಲ್ಲಿ ನೆಡಲಾಗುವುದು’ ಎಂದು ಹೇಳಿದರು.</p>.<p>ಪಾಲಿಕೆ ಆಯುಕ್ತ ಬಿ.ಎಚ್. ಅನಿಲ್ಕುಮಾರ್ ಮಾತನಾಡಿದರು. ತೋಟಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ಉಮಾದೇವಿ ನಾಗರಾಜು, ಅಪೀಲು ಸ್ಥಾಯಿ ಸಮಿತಿ ಅಧ್ಯಕ್ಷ ಲಕ್ಷ್ಮೀನಾರಾಯಣ, ಆಡಳಿತ ಪಕ್ಷದ ನಾಯಕ ಕೆ.ಎ.ಮುನೀಂದ್ರ ಕುಮಾರ್, ವಿರೋಧ ಪಕ್ಷದ ನಾಯಕ ಅಬ್ದುಲ್ ವಾಜಿದ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>